ದೇಶ- ವಿದೇಶ

ಕೋವಿಡ್ ಲಸಿಕೆ ಅಡ್ಡಪರಿಣಾಮಗಳಿಂದ ಸಾವು: ತುರ್ತು ಪರಿಹಾರ ಕ್ರಮಕ್ಕೆ ಕೇರಳ ಹೈಕೋರ್ಟ್ ಸೂಚನೆ

ತಿರುವನಂತಪುರ: ಕೋವಿಡ್ ಲಸಿಕೆ ಅಡ್ಡಪರಿಣಾಮದಿಂದ ಸಾವನ್ನಪ್ಪಿದ ವ್ಯಕ್ತಿಗಳ ಕುಟುಂಬಗಳಿಗೆ ಪರಿಹಾರ ವಿತರಿಸಲು ತುರ್ತಾಗಿ ಮಾರ್ಗಸೂಚಿ ರೂಪಿಸುವಂತೆ ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಕೇರಳ ಹೈಕೋರ್ಟ್ ಬುಧವಾರ ಸೂಚಿಸಿದೆ

ಸಮಸ್ಯೆ ಗಂಭೀರವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ತುರ್ತಾಗಿ ಪರಿಹಾರ ಒದಗಿಸುವುದನ್ನು ಪರಿಗಣಿಸಬೇಕು ಎಂದು ನ್ಯಾಯಮೂರ್ತಿ ವಿ ಜಿ ಅರುಣ್ ಅಭಿಪ್ರಾಯಪಟ್ಟರು.

ಇದು ನಾವು ಎದುರಿಸಿದ ರಾಷ್ಟ್ರೀಯ ವಿಪತ್ತು. ಪ್ರಸ್ತುತ ಪ್ರಕರಣ ಅತ್ಯಂತ ನೈಜವಾದುದಾಗಿದ್ದು ಅದನ್ನು ಇತ್ಯರ್ಥಪಡಿಸಬೇಕಿದೆ. ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದಂತೆ, ಇತರ ರಾಜ್ಯಗಳಲ್ಲಿಯೂ ಇದೇ ರೀತಿಯ ಸಮಸ್ಯೆಗಳು ಕಂಡುಬಂದಿವೆ. ಈ ವ್ಯಕ್ತಿಗಳಿಗೆ ಪರಿಹಾರ ನೀಡಲು ಸೂಕ್ತ ಮಾರ್ಗಸೂಚಿ, ಸರಿಯಾದ ಯೋಜನೆ ರೂಪಿಸುವ ಪ್ರಯತ್ನ ಅಗತ್ಯವಿದ್ದು ಅದನ್ನು ಮಾಡಬೇಕಿದೆ. ಸುಖಾಸುಮ್ಮನೆ ಆದೇಶ ನೀಡುವ ಬದಲು ತರ್ಕಬದ್ಧ ತೀರ್ಪು ನೀಡುವ ಸಲುವಾಗಿ ಅವರು ಯಾವ ಕ್ರಮ ತೆಗೆದುಕೊಂಡಿದ್ದಾರೆ ಎಂಬುದನ್ನು ದಾಖಲೆಯಲ್ಲಿ ನೀಡಲಿ. ಇದು ನಗೆಪಾಟಲಿನ ವಿಚಾರವಲ್ಲ, ನಾನಿದನ್ನು ತುಂಬಾ ಗಂಭೀರವಾಗಿ ಪರಿಗಣಿಸುತ್ತೇನೆ” ಎಂದು ಅವರು ಮೌಖಿಕವಾಗಿ ಟೀಕಿಸಿದರು.

ಕುಟುಂಬದ ಆಧಾರವಾಗಿದ್ದವರು ಸಾವಿಗೀಡಾಗಿರುವ ಹಿನ್ನೆಲೆಯಲ್ಲಿ ಅವರನ್ನು ಅವಲಂಬಿಸಿದ್ದ ಕುಟುಂಬ ಸದಸ್ಯರು ತೀವ್ರ ತೊಂದರೆ ಎದುರಿಸುತ್ತಿದ್ದು ಪರಿಹಾರ ಪ್ರಕ್ರಿಯೆ‌ ತ್ವರಿತಗೊಳಿಸಬೇಕು ಎಂಬ ಅರ್ಜಿದಾರರ ವಾದದ ಗಂಭೀರತೆಯನ್ನು ನ್ಯಾಯಾಲಯ ಮನ್ನಿಸಿತು.

“ಅರ್ಜಿದಾರರ ಪರ ವಕೀಲರು ಎತ್ತಿರುವ ಅನುಮಾನಗಳು ಸಾಧಾರವಾಗಿವೆ ಎಂದು ನನಗನಿಸುತ್ತಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಡೆಯಿಂದ ತುರ್ತು ಕ್ರಮದ ಅಗತ್ಯವಿದೆ” ಎಂದು ನ್ಯಾಯಮೂರ್ತಿಗಳು ತಿಳಿಸಿದರು. ಆಗಸ್ಟ್‌ 30ಕ್ಕೆ ಪ್ರಕರಣದ ಮುಂದಿನ ವಿಚಾರಣೆ ನಿಗದಿಯಾಗಿದೆ.

andolana

Recent Posts

ಪ್ರಕೃತಿ ವಿಕೋಪ ನಿರ್ವಹಣೆ: ಜಿಲ್ಲೆಗಳ ಮೇಲುಸ್ತುವಾರಿಗೆ ಸಚಿವರ ನೇಮಕ

ಬೆಂಗಳೂರು: ರಾಜ್ಯದಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ಸಚಿವರಿಗೆ ವಿವಿಧ ಜಿಲ್ಲೆಗಳ ಮೇಲುಸ್ತುವಾರಿಯನ್ನು ಹಂಚಿಕೆ ಮಾಡಿ ಅಧಿಸೂಚನೆ…

13 mins ago

ವೆನಿಜುವೆಲಾ ದೇಶದಲ್ಲಿ ಕಂಡು ಕೇಳರಿಯದ ಭೀಕರ ಭೂಕಂಪ

ವೆನಿಜುವೆಲಾ: ವೆನಿಜುವೆಲಾ ದೇಶದ ಇತಿಹಾಸದಲ್ಲೇ ಕಂಡು ಕೇಳರಿಯದ ಭೀಕರ ಭೂಕಂಪ ಸಂಭವಿಸಿ ಸಾವಿರಾರು ಜನ ಸಾವನ್ನಪ್ಪಿದ್ದು, ಭಾರೀ ಪ್ರಮಾಣದ ಜನರು…

1 hour ago

ವೆನೆಜುವೆಲಾದಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ತುರ್ತು ಪರಿಸ್ಥಿತಿ ಘೋಷಣೆ

ಕ್ಯಾರಕಾಸ್‌ : ವೆನೆಜುವೆಲಾ ಕರಾವಳಿಯ ಸಮೀಪ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳು ದೇಶವನ್ನು ಬೆಚ್ಚಿಬೀಳಿಸಿವೆ. ರಿಕ್ಟರ್ ಮಾಪಕದಲ್ಲಿ…

4 hours ago

ಸಮ ಸಮಾಜದ ಕನಸು ಕಂಡಿದ್ದ ಹೋರಾಟಗಾರ ಜವರಪ್ಪಗೌಡ

ಪ್ರೊ.ಬಿ.ಜಯಪ್ರಕಾಶ್‌ಗೌಡ ಬದುಕಿದ್ದರೆ ೧೦೯ ವರ್ಷಗಳನ್ನು ಪೂರೈಸುತ್ತಿದ್ದ ಸ್ವಾತಂತ್ರ್ಯ ಹೋರಾಟಗಾರ ಪಿ. ಎನ್. ಜವರಪ್ಪಗೌಡರು ನಮಗೆಲ್ಲರಿಗೂ ಮಾರ್ಗದರ್ಶಕರಾಗಿದ್ದವರು. ಜವರಪ್ಪಗೌಡರು ಗಾಂಧೀಜಿಯಿಂದ ಪ್ರಭಾವಿತರಾಗಿದ್ದರು.…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 25  ಗುರುವಾರ  

6 hours ago

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

17 hours ago