ದೇಶ- ವಿದೇಶ

ಕೋವಿಡ್ ಲಸಿಕೆ ಅಡ್ಡಪರಿಣಾಮಗಳಿಂದ ಸಾವು: ತುರ್ತು ಪರಿಹಾರ ಕ್ರಮಕ್ಕೆ ಕೇರಳ ಹೈಕೋರ್ಟ್ ಸೂಚನೆ

ತಿರುವನಂತಪುರ: ಕೋವಿಡ್ ಲಸಿಕೆ ಅಡ್ಡಪರಿಣಾಮದಿಂದ ಸಾವನ್ನಪ್ಪಿದ ವ್ಯಕ್ತಿಗಳ ಕುಟುಂಬಗಳಿಗೆ ಪರಿಹಾರ ವಿತರಿಸಲು ತುರ್ತಾಗಿ ಮಾರ್ಗಸೂಚಿ ರೂಪಿಸುವಂತೆ ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಕೇರಳ ಹೈಕೋರ್ಟ್ ಬುಧವಾರ ಸೂಚಿಸಿದೆ

ಸಮಸ್ಯೆ ಗಂಭೀರವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ತುರ್ತಾಗಿ ಪರಿಹಾರ ಒದಗಿಸುವುದನ್ನು ಪರಿಗಣಿಸಬೇಕು ಎಂದು ನ್ಯಾಯಮೂರ್ತಿ ವಿ ಜಿ ಅರುಣ್ ಅಭಿಪ್ರಾಯಪಟ್ಟರು.

ಇದು ನಾವು ಎದುರಿಸಿದ ರಾಷ್ಟ್ರೀಯ ವಿಪತ್ತು. ಪ್ರಸ್ತುತ ಪ್ರಕರಣ ಅತ್ಯಂತ ನೈಜವಾದುದಾಗಿದ್ದು ಅದನ್ನು ಇತ್ಯರ್ಥಪಡಿಸಬೇಕಿದೆ. ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದಂತೆ, ಇತರ ರಾಜ್ಯಗಳಲ್ಲಿಯೂ ಇದೇ ರೀತಿಯ ಸಮಸ್ಯೆಗಳು ಕಂಡುಬಂದಿವೆ. ಈ ವ್ಯಕ್ತಿಗಳಿಗೆ ಪರಿಹಾರ ನೀಡಲು ಸೂಕ್ತ ಮಾರ್ಗಸೂಚಿ, ಸರಿಯಾದ ಯೋಜನೆ ರೂಪಿಸುವ ಪ್ರಯತ್ನ ಅಗತ್ಯವಿದ್ದು ಅದನ್ನು ಮಾಡಬೇಕಿದೆ. ಸುಖಾಸುಮ್ಮನೆ ಆದೇಶ ನೀಡುವ ಬದಲು ತರ್ಕಬದ್ಧ ತೀರ್ಪು ನೀಡುವ ಸಲುವಾಗಿ ಅವರು ಯಾವ ಕ್ರಮ ತೆಗೆದುಕೊಂಡಿದ್ದಾರೆ ಎಂಬುದನ್ನು ದಾಖಲೆಯಲ್ಲಿ ನೀಡಲಿ. ಇದು ನಗೆಪಾಟಲಿನ ವಿಚಾರವಲ್ಲ, ನಾನಿದನ್ನು ತುಂಬಾ ಗಂಭೀರವಾಗಿ ಪರಿಗಣಿಸುತ್ತೇನೆ” ಎಂದು ಅವರು ಮೌಖಿಕವಾಗಿ ಟೀಕಿಸಿದರು.

ಕುಟುಂಬದ ಆಧಾರವಾಗಿದ್ದವರು ಸಾವಿಗೀಡಾಗಿರುವ ಹಿನ್ನೆಲೆಯಲ್ಲಿ ಅವರನ್ನು ಅವಲಂಬಿಸಿದ್ದ ಕುಟುಂಬ ಸದಸ್ಯರು ತೀವ್ರ ತೊಂದರೆ ಎದುರಿಸುತ್ತಿದ್ದು ಪರಿಹಾರ ಪ್ರಕ್ರಿಯೆ‌ ತ್ವರಿತಗೊಳಿಸಬೇಕು ಎಂಬ ಅರ್ಜಿದಾರರ ವಾದದ ಗಂಭೀರತೆಯನ್ನು ನ್ಯಾಯಾಲಯ ಮನ್ನಿಸಿತು.

“ಅರ್ಜಿದಾರರ ಪರ ವಕೀಲರು ಎತ್ತಿರುವ ಅನುಮಾನಗಳು ಸಾಧಾರವಾಗಿವೆ ಎಂದು ನನಗನಿಸುತ್ತಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಡೆಯಿಂದ ತುರ್ತು ಕ್ರಮದ ಅಗತ್ಯವಿದೆ” ಎಂದು ನ್ಯಾಯಮೂರ್ತಿಗಳು ತಿಳಿಸಿದರು. ಆಗಸ್ಟ್‌ 30ಕ್ಕೆ ಪ್ರಕರಣದ ಮುಂದಿನ ವಿಚಾರಣೆ ನಿಗದಿಯಾಗಿದೆ.

andolana

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

10 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

14 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

15 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

16 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

16 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

16 hours ago