ದೇಶ- ವಿದೇಶ

ಮಾದಕ‌ ವಸ್ತುಗಳ ನಿರ್ಮೂಲನೆಗೆ ನಿರ್ಧಾರ : ಅಮಿತ್ ಶಾ

ಹೊಸದಿಲ್ಲಿ : ನರೇಂದ್ರಮೋದಿ ಸರ್ಕಾರವು ದೇಶದಿಂದ ಎಲ್ಲಾ ರೀತಿಯ ಮಾದಕ ದ್ರವ್ಯಗಳನ್ನು ನಿರ್ಮೂಲನೆ ಮಾಡಲು ನಿರ್ಧರಿಸಿದೆ ಮತ್ತು ಈ ಗುರಿಯನ್ನು ಸಾಧಿಸಲು ಸರ್ವಪ್ರಯತ್ನ ಮಾಡುತ್ತಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಹೇಳಿದ್ದಾರೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ (ಎಎನ್‌ಟಿಎಫ್) ಮುಖ್ಯಸ್ಥರ ಎರಡನೇ ರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಅವರು, ಡ್ರಗ್ಸ್ ಹಾವಳಿಯ ವಿರುದ್ಧ ಕ್ರಮದ ಪ್ರಮಾಣವನ್ನು ಬದಲಾಯಿಸುವ ಸಮಯ ಬಂದಿದೆ. ಇದರಿಂದ ಮುಂಬರುವ ದಿನಗಳಲ್ಲಿ ಹೆಚ್ಚಿನ ಯಶಸ್ಸುಗಳಿವೆ ಎಂದು ಹೇಳಿದರು.

ಪ್ರಪಂಚದ ಕೆಲವು ಭಾಗಗಳಲ್ಲಿ ಜನರು ರಾಷ್ಟ್ರದ ಅಭಿವೃದ್ಧಿ ಮತ್ತು ಮಾದಕ ದ್ರವ್ಯ ಸೇವನೆಯ ಸವಾಲಿನ ನಡುವಿನ ಸಂಬಂಧವನ್ನು ನೋಡಿದ್ದಾರೆ . ದುರದೃಷ್ಟವಶಾತ್, ಜಾಗತಿಕವಾಗಿ ಡ್ರಗ್?ಸ ಪೂರೈಕೆಯಾಗುವ ಎರಡು ಪ್ರದೇಶಗಳು ನಮಗೆ ತುಂಬಾ ಹತ್ತಿರದಲ್ಲಿವೆ. ಆದ್ದರಿಂದ ನಾವು ಅದರ ವಿರುದ್ಧ ಬಲವಾಗಿ ಹೋರಾಡುವ ಸಮಯ ಇದು ಎಂದು ಹೇಳಿದರು.

ಭಾರತವನ್ನು ಸಂಪೂರ್ಣ ಅಭಿವೃದ್ಧಿ ಹೊಂದಿದ ಮತ್ತು ಶ್ರೇಷ್ಠ ರಾಷ್ಟ್ರವನ್ನಾಗಿ ಮಾಡಲು ಪ್ರಧಾನಿ ಮೋದಿ ೨೦೪೭ರ ಗುರಿಯನ್ನು ಹೊಂದಿದ್ದಾರೆ. ಅವರ ಈ ಕನಸನ್ನು ನನಸಾಗಿಸಲು, ದೇಶವು ಸಂಪೂರ್ಣ ಸುಭದ್ರವಾಗಿರಬೇಕು. ಸಂಪೂರ್ಣ ಅಭಿವೃದ್ಧಿ ಹೊಂದಿದ ಭಾರತದ ಗುರಿಯನ್ನು ಸಾಽಸಲು, ಯುವ ಪೀಳಿಗೆಯನ್ನು ಮಾದಕ ವಸ್ತುಗಳಿಂದ ರಕ್ಷಿಸುವುದು ಬಹಳ ಮುಖ್ಯ. ಯಾವುದೇ ಮಹಾನ್ ರಾಜ್ಯದ ಅಡಿಪಾಯ ಅದರ ಯುವ ಪೀಳಿಗೆಯಾಗಿದೆ ಎಂದು ಶಾ ಹೇಳಿದರು.

ಇದೇ ವೇಳೆ ದೇಶದ ವಿವಿಧ ಭಾಗಗಳಲ್ಲಿ ವಶಪಡಿಸಿಕೊಂಡ ೪,೭೯೪ ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ನಾಶಪಡಿಸುವ ಪ್ರಕ್ರಿಯೆಗೆ ಗೃಹ ಸಚಿವರು ಚಾಲನೆ ನೀಡಿದರು.

ಎಲ್ಲಾ ಎಎನ್‌ಟಿಎಫ್‌ಗಳನ್ನು ಒಗ್ಗೂಡಿಸಿ ಡ್ರಗ್ಸ್ ಪಿಡುಗನ್ನು ನಿರ್ಮೂಲನೆ ಮಾಡಲು ಮೋದಿ ಸರ್ಕಾರ ನಿರ್ಧರಿಸಿದೆ. ಅವರು ಎನ್‌ಸಿಬಿಯ ವಾರ್ಷಿಕ ವರದಿ ೨೦೨೪ ಅನ್ನು ಸಹ ಬಿಡುಗಡೆ ಮಾಡಿದರು.

ಆಂದೋಲನ ಡೆಸ್ಕ್

Recent Posts

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

2 hours ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

2 hours ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

3 hours ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

3 hours ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

3 hours ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

3 hours ago