ದೇಶ- ವಿದೇಶ

ಮಾದಕ‌ ವಸ್ತುಗಳ ನಿರ್ಮೂಲನೆಗೆ ನಿರ್ಧಾರ : ಅಮಿತ್ ಶಾ

ಹೊಸದಿಲ್ಲಿ : ನರೇಂದ್ರಮೋದಿ ಸರ್ಕಾರವು ದೇಶದಿಂದ ಎಲ್ಲಾ ರೀತಿಯ ಮಾದಕ ದ್ರವ್ಯಗಳನ್ನು ನಿರ್ಮೂಲನೆ ಮಾಡಲು ನಿರ್ಧರಿಸಿದೆ ಮತ್ತು ಈ ಗುರಿಯನ್ನು ಸಾಧಿಸಲು ಸರ್ವಪ್ರಯತ್ನ ಮಾಡುತ್ತಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಹೇಳಿದ್ದಾರೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ (ಎಎನ್‌ಟಿಎಫ್) ಮುಖ್ಯಸ್ಥರ ಎರಡನೇ ರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಅವರು, ಡ್ರಗ್ಸ್ ಹಾವಳಿಯ ವಿರುದ್ಧ ಕ್ರಮದ ಪ್ರಮಾಣವನ್ನು ಬದಲಾಯಿಸುವ ಸಮಯ ಬಂದಿದೆ. ಇದರಿಂದ ಮುಂಬರುವ ದಿನಗಳಲ್ಲಿ ಹೆಚ್ಚಿನ ಯಶಸ್ಸುಗಳಿವೆ ಎಂದು ಹೇಳಿದರು.

ಪ್ರಪಂಚದ ಕೆಲವು ಭಾಗಗಳಲ್ಲಿ ಜನರು ರಾಷ್ಟ್ರದ ಅಭಿವೃದ್ಧಿ ಮತ್ತು ಮಾದಕ ದ್ರವ್ಯ ಸೇವನೆಯ ಸವಾಲಿನ ನಡುವಿನ ಸಂಬಂಧವನ್ನು ನೋಡಿದ್ದಾರೆ . ದುರದೃಷ್ಟವಶಾತ್, ಜಾಗತಿಕವಾಗಿ ಡ್ರಗ್?ಸ ಪೂರೈಕೆಯಾಗುವ ಎರಡು ಪ್ರದೇಶಗಳು ನಮಗೆ ತುಂಬಾ ಹತ್ತಿರದಲ್ಲಿವೆ. ಆದ್ದರಿಂದ ನಾವು ಅದರ ವಿರುದ್ಧ ಬಲವಾಗಿ ಹೋರಾಡುವ ಸಮಯ ಇದು ಎಂದು ಹೇಳಿದರು.

ಭಾರತವನ್ನು ಸಂಪೂರ್ಣ ಅಭಿವೃದ್ಧಿ ಹೊಂದಿದ ಮತ್ತು ಶ್ರೇಷ್ಠ ರಾಷ್ಟ್ರವನ್ನಾಗಿ ಮಾಡಲು ಪ್ರಧಾನಿ ಮೋದಿ ೨೦೪೭ರ ಗುರಿಯನ್ನು ಹೊಂದಿದ್ದಾರೆ. ಅವರ ಈ ಕನಸನ್ನು ನನಸಾಗಿಸಲು, ದೇಶವು ಸಂಪೂರ್ಣ ಸುಭದ್ರವಾಗಿರಬೇಕು. ಸಂಪೂರ್ಣ ಅಭಿವೃದ್ಧಿ ಹೊಂದಿದ ಭಾರತದ ಗುರಿಯನ್ನು ಸಾಽಸಲು, ಯುವ ಪೀಳಿಗೆಯನ್ನು ಮಾದಕ ವಸ್ತುಗಳಿಂದ ರಕ್ಷಿಸುವುದು ಬಹಳ ಮುಖ್ಯ. ಯಾವುದೇ ಮಹಾನ್ ರಾಜ್ಯದ ಅಡಿಪಾಯ ಅದರ ಯುವ ಪೀಳಿಗೆಯಾಗಿದೆ ಎಂದು ಶಾ ಹೇಳಿದರು.

ಇದೇ ವೇಳೆ ದೇಶದ ವಿವಿಧ ಭಾಗಗಳಲ್ಲಿ ವಶಪಡಿಸಿಕೊಂಡ ೪,೭೯೪ ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ನಾಶಪಡಿಸುವ ಪ್ರಕ್ರಿಯೆಗೆ ಗೃಹ ಸಚಿವರು ಚಾಲನೆ ನೀಡಿದರು.

ಎಲ್ಲಾ ಎಎನ್‌ಟಿಎಫ್‌ಗಳನ್ನು ಒಗ್ಗೂಡಿಸಿ ಡ್ರಗ್ಸ್ ಪಿಡುಗನ್ನು ನಿರ್ಮೂಲನೆ ಮಾಡಲು ಮೋದಿ ಸರ್ಕಾರ ನಿರ್ಧರಿಸಿದೆ. ಅವರು ಎನ್‌ಸಿಬಿಯ ವಾರ್ಷಿಕ ವರದಿ ೨೦೨೪ ಅನ್ನು ಸಹ ಬಿಡುಗಡೆ ಮಾಡಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

17 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

17 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

17 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

17 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

17 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

17 hours ago