ಸುಲ್ತಾನಪುರ(ಉತ್ತರ ಪ್ರದೇಶ): ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ಅಕ್ಟೋಬರ್ 1 ಕ್ಕೆ ಮುಂದೂಡಲಾಗಿದೆ.
ಬಾರ್ ಅಸೋಸಿಯೇಷನ್ನಲ್ಲಿ ಆರೋಗ್ಯ ಶಿಬಿರ ಆಯೋಜಿಸಿದ್ದರಿಂದ ವಿಶೇಷ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದಲ್ಲಿ ನಡೆಯಬೇಕಿದ್ದ ಮಾನನಷ್ಟ ಮೊಕದ್ದಮೆಯನ್ನು ವಿಚಾರಣೆಯನ್ನು ಇಂದು ಮುಂದೂಡಲಾಗಿದೆ.
ಸ್ಥಳೀಯ ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು ಕೇಂದ್ರ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ಅ.1ಕ್ಕೆ ಮುಂದೂಡಿದೆ.
2018 ರ ವೇಳೆ ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿದ್ದ ಅಮಿತ್ ಶಾ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಂಸದ ರಾಹುಲ್ ಗಾಂಧಿ ಅವರ ವಿರುದ್ಧ ಸ್ಥಳೀಯ ಬಿಜೆಪಿ ನಾಯಕ ವಿಜಯ್ಮಿಶ್ರಾ ಅವರು ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದರು.
ವಿಪಕ್ಷ ನಾಯಕ ರಾಗಾ ಅವರು ʼಭಾರತ್ ಜೋಡೊ ನ್ಯಾಯ ಯಾತ್ರೆʼಯ ಸಂದರ್ಭದಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗಿದ್ದರು. ರಾಹುಲ್ ಅವರಿಗೆ ಈ ಪ್ರಕರಣದಲ್ಲಿ ನ್ಯಾಯಾಲಯದಿಂದ ಜಾಮೀನು ಮಂಜೂರು ಮಾಡಲಾಗಿತ್ತು.
ಜಾಮೀನು ಮಂಜೂರಾದ ನಂತರ ರಾಗಾ ಅವರಿಗೆ ಅಮಿತ್ ಶಾ ಅವರ ವಿರುದ್ಧದ ಹೇಳಿಕೆ ದಾಖಲಿಸುವಂತೆ ಹಲವು ಬಾರಿ ನೋಟಿಸ್ ನೀಡಲಾಗಿತ್ತು. ಆದರೆ, ರಾಹುಲ್ ಅವರು ಲೋಕಸಭೆ ಚುನಾವಣೆಯಿಂದಾಗಿ ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ಬಳಿಕ ಜು.26 ರಂದು ರಾಹುಲ್ ನ್ಯಾಯಾಲಯದಲ್ಲಿ ತಮ್ಮ ಹೇಳೀಕೆಗಳನ್ನು ದಾಖಲು ಮಾಡಿದ್ದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…