ದೇಶ- ವಿದೇಶ

ಜಮ್ಮು-ಕಾಶ್ಮೀರದಲ್ಲಿ ಬಿಜೆಪಿಗೆ ಭಾರೀ ಮುಖಭಂಗ

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ಪಕ್ಷಕ್ಕೆ ಭಾರೀ ಮುಖಭಂಗವಾಗಿದ್ದು, ಕಾಂಗ್ರೆಸ್‌ ಮತ್ತು ಎನ್‌ಸಿ ಮೈತ್ರಿಕೂಟ ಗೆಲುವು ಸಾಧಿಸಿದೆ.

ಬಿಜೆಪಿ 25ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಬಿಜೆಪಿಗೆ ಹೀನಾಯ ಸೋಲಾಗಿದೆ. ಆರ್ಟಿಕಲ್‌ 370 ರದ್ದನ್ನು ಜಮ್ಮು-ಕಾಶ್ಮೀರದ ಜನತೆ ಒಪ್ಪಿಕೊಂಡಿದ್ದರು ಎನ್ನಲಾಗಿದ್ದು, ಬಿಜೆಪಿ ಸೋಲಿಗೆ ಕಾರಣ ಏನು ಎಂಬುದನ್ನು ಅಧ್ಯಯನ ಮಾಡಬೇಕಿದೆ.

90 ವಿಧಾನಸಭಾ ಕ್ಷೇತ್ರಗಳಿರುವ ಜಮ್ಮು-ಕಾಶ್ಮೀರದಲ್ಲಿ ದಶಕದ ಬಳಿಕ ಚುನಾವಣೆ ನಡೆದಿದೆ. ಆದರೆ ನಾವೇ ಹ್ಯಾಟ್ರಿಕ್‌ ಗೆಲುವು ಸಾಧಿಸುತ್ತೇವೆ ಎಂಬ ಆಸೆಯಲ್ಲಿದ್ದ ಬಿಜೆಪಿ ನಾಯಕರಿಗೆ ಈಗ ಬಿಗ್‌ ಶಾಕ್‌ ಎದುರಾಗಿದೆ.

ಚುನಾವಣೋತ್ತರ ಸಮೀಕ್ಷೆಗಳು ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್-ನ್ಯಾಷನಲ್‌ ಕಾನ್ಫರೆನ್ಸ್‌ ಮೈತ್ರಿಕೂಟಕ್ಕೆ ಮುನ್ನಡೆ ಇಲ್ಲವೇ ಸರಳ ಬಹುಮತದ ಸುಳಿವು ನೀಡಿದ್ದವು. ಈ ಸಮೀಕ್ಷೆ ವರದಿಗಳು ಈಗ ನಿಜವಾಗಿದ್ದು, ಕಾಂಗ್ರೆಸ್‌ ಹಾಗೂ ನ್ಯಾಷನಲ್‌ ಕಾನ್ಫರೆನ್ಸ್‌ ಮೈತ್ರಿಕೂಟದ ನಾಯಕರ ಮುಖದಲ್ಲಿ ಮಂದಹಾಸ ಮನೆಮಾಡಿದೆ.

ಜಮ್ಮು-ಕಾಶ್ಮೀರದ 90 ವಿಧಾನಸಭಾ ಸ್ಥಾನಗಳಿಗೆ ಸೆಪ್ಟೆಂಬರ್.‌18ರಿಂದ ಮೂರು ಹಂತಗಳಲ್ಲಿ ಮತದಾನ ನಡೆದಿತ್ತು. ಕಾಂಗ್ರೆಸ್‌ ಮತ್ತು ನ್ಯಾಷನಲ್‌ ಕಾನ್ಫರೆನ್ಸ್ ಪಕ್ಷಗಳು ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡರೆ, ಬಿಜೆಪಿ ಹಾಗೂ ಪಿಡಿಪಿ ಏಕಾಂಗಿಯಾಗಿ ಅಖಾಡದಲ್ಲಿದ್ದವು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…

8 hours ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

11 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

12 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

12 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

13 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

13 hours ago