ದೇಶ- ವಿದೇಶ

ಜಮ್ಮು-ಕಾಶ್ಮೀರದಲ್ಲಿ ಬಿಜೆಪಿಗೆ ಭಾರೀ ಮುಖಭಂಗ

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ಪಕ್ಷಕ್ಕೆ ಭಾರೀ ಮುಖಭಂಗವಾಗಿದ್ದು, ಕಾಂಗ್ರೆಸ್‌ ಮತ್ತು ಎನ್‌ಸಿ ಮೈತ್ರಿಕೂಟ ಗೆಲುವು ಸಾಧಿಸಿದೆ.

ಬಿಜೆಪಿ 25ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಬಿಜೆಪಿಗೆ ಹೀನಾಯ ಸೋಲಾಗಿದೆ. ಆರ್ಟಿಕಲ್‌ 370 ರದ್ದನ್ನು ಜಮ್ಮು-ಕಾಶ್ಮೀರದ ಜನತೆ ಒಪ್ಪಿಕೊಂಡಿದ್ದರು ಎನ್ನಲಾಗಿದ್ದು, ಬಿಜೆಪಿ ಸೋಲಿಗೆ ಕಾರಣ ಏನು ಎಂಬುದನ್ನು ಅಧ್ಯಯನ ಮಾಡಬೇಕಿದೆ.

90 ವಿಧಾನಸಭಾ ಕ್ಷೇತ್ರಗಳಿರುವ ಜಮ್ಮು-ಕಾಶ್ಮೀರದಲ್ಲಿ ದಶಕದ ಬಳಿಕ ಚುನಾವಣೆ ನಡೆದಿದೆ. ಆದರೆ ನಾವೇ ಹ್ಯಾಟ್ರಿಕ್‌ ಗೆಲುವು ಸಾಧಿಸುತ್ತೇವೆ ಎಂಬ ಆಸೆಯಲ್ಲಿದ್ದ ಬಿಜೆಪಿ ನಾಯಕರಿಗೆ ಈಗ ಬಿಗ್‌ ಶಾಕ್‌ ಎದುರಾಗಿದೆ.

ಚುನಾವಣೋತ್ತರ ಸಮೀಕ್ಷೆಗಳು ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್-ನ್ಯಾಷನಲ್‌ ಕಾನ್ಫರೆನ್ಸ್‌ ಮೈತ್ರಿಕೂಟಕ್ಕೆ ಮುನ್ನಡೆ ಇಲ್ಲವೇ ಸರಳ ಬಹುಮತದ ಸುಳಿವು ನೀಡಿದ್ದವು. ಈ ಸಮೀಕ್ಷೆ ವರದಿಗಳು ಈಗ ನಿಜವಾಗಿದ್ದು, ಕಾಂಗ್ರೆಸ್‌ ಹಾಗೂ ನ್ಯಾಷನಲ್‌ ಕಾನ್ಫರೆನ್ಸ್‌ ಮೈತ್ರಿಕೂಟದ ನಾಯಕರ ಮುಖದಲ್ಲಿ ಮಂದಹಾಸ ಮನೆಮಾಡಿದೆ.

ಜಮ್ಮು-ಕಾಶ್ಮೀರದ 90 ವಿಧಾನಸಭಾ ಸ್ಥಾನಗಳಿಗೆ ಸೆಪ್ಟೆಂಬರ್.‌18ರಿಂದ ಮೂರು ಹಂತಗಳಲ್ಲಿ ಮತದಾನ ನಡೆದಿತ್ತು. ಕಾಂಗ್ರೆಸ್‌ ಮತ್ತು ನ್ಯಾಷನಲ್‌ ಕಾನ್ಫರೆನ್ಸ್ ಪಕ್ಷಗಳು ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡರೆ, ಬಿಜೆಪಿ ಹಾಗೂ ಪಿಡಿಪಿ ಏಕಾಂಗಿಯಾಗಿ ಅಖಾಡದಲ್ಲಿದ್ದವು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

12 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

12 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

12 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

12 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

1 day ago