hd kumaraswamy
ನವದೆಹಲಿ: ತಿದ್ದುಪಡಿ ಮಸೂದೆ ಸೋಲುವ ಮೂಲಕ ಲೋಕಸಭೆಯಲ್ಲಿ ಮೂವತ್ತು ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಲೋಕಸಭೆಯಲ್ಲಿ ಪ್ರತಿಪಕ್ಷಗಳ ಬೆಂಬಲ ಸಿಗದೆ ಮಸೂದೆ ಬಿದ್ದುಹೋದ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು, 1996 ರಿಂದ 2026; ಕರಾಳ ಇತಿಹಾಸ ಮರುಕಳಿಸಿದೆ. ಮೂರು ದಶಕಗಳ ನಂತರವೂ ಕಾಂಗ್ರೆಸ್ ಪಕ್ಷದ ಮಹಿಳಾ ವಿರೋಧಿ ಮನಸ್ಥಿತಿ ಕೊಂಚವೂ ಬದಲಾಗಿಲ್ಲ ಎನ್ನುವುದಕ್ಕೆ ಲೋಕಸಭೆ ಮತ್ತೊಮ್ಮೆ ಸಾಕ್ಷಿಯಾಯಿತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಅಂದು ಹೆಚ್.ಡಿ. ದೇವೇಗೌಡರ ನೇತೃತ್ವದ ಸಂಯುಕ್ತ ರಂಗ ಸರಕಾರವು ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲು ನೀಡುವ ಕ್ರಾಂತಿಕಾರಿ ನಿರ್ಧಾರ ಕೈಗೊಂಡು ಸಂಸತ್ತಿನಲ್ಲಿ ಮಸೂದೆ ಮಂಡಿಸಿತ್ತು. ಅಂದು ಇದೇ ಕಾಂಗ್ರೆಸ್ ಮತ್ತು ಅದರ ಸಹಚರ ಶಕ್ತಿಗಳು ಆ ಪ್ರಯತ್ನವನ್ನು ಸಂಘಟಿತವಾಗಿ ವಿಫಲಗೊಳಿಸಿದ್ದವು. ಇಂದು ಆವತ್ತು ಮಹಿಳೆಯರಿಗೆ ಆಗಿದ್ದ ಐತಿಹಾಸಿಕ ಅನ್ಯಾಯ ಸರಿಪಡಿಸಲು ಪ್ರಧಾನಿ ನರೇಂದ್ರ ಮೋದಿ ಅವರು ದಿಟ್ಟಹೆಜ್ಜೆ ಇರಿಸಿದ್ದರು. ಪುನಾ ಅದೇ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳು ಸೇರಿ ಸನ್ಮಾನ್ಯ ಮೋದಿ ಅವರ ಪ್ರಯತ್ನಕ್ಕೆ ತಡೆಯೊಡ್ಡಿವೆ ಎಂದು ಅವರು ಕಿಡಿಕಾರಿದ್ದಾರೆ.
ಮಹಿಳಾ ಮೀಸಲು ಮಸೂದೆಯನ್ನು ಸೋಲಿಸಿದ ಕೂಟದ ಶಕ್ತಿಗಳನ್ನು ರಾಷ್ಟ್ರದ ನಾರಿಶಕ್ತಿ ಎಂದಿಗೂ ಕ್ಷಮಿಸುವುದಿಲ್ಲ. ಇದು ಮಾತೃಶಕ್ತಿಗೆ ಆಗಿರುವ ಅಪಮಾನ. ಇದಕ್ಕೆ ಕಾರಣರಾದ ಎಲ್ಲರೂ ತಕ್ಕ ಶಾಸ್ತಿ ಅನುಭವಿಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.
ರಾಷ್ಟ್ರದ ನಾರಿಶಕ್ತಿಗೆ ನನ್ನ ಮನವಿ ಇಷ್ಟೇ, ನಿಮಗೆ ನಿರಾಶೆ ಬೇಕಿಲ್ಲ. ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಮುಂದೊಂದು ದಿನ ನಿಮಗೆ ಅಗ್ರಮನ್ನಣೆ ಸಿಕ್ಕೇ ಸಿಗುತ್ತದೆ. 33% ಮಹಿಳಾ ಮೀಸಲು ಗುರಿ ಸಾಧಿಸುವುದು ಶತಸಿದ್ಧ ಎಂದು ಅವರು ಭರವಸೆ ನೀಡಿದ್ದಾರೆ.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…