ದೇಶ- ವಿದೇಶ

ತಿದ್ದುಪಡಿ ಮಸೂದೆಗೆ ಸೋಲು: ಕರಾಳ ಇತಿಹಾಸ ಮರುಕಳಿಸಲಿದೆ ಎಂದ ಎಚ್.ಡಿ.ಕುಮಾರಸ್ವಾಮಿ ಕಿಡಿ

ನವದೆಹಲಿ: ತಿದ್ದುಪಡಿ ಮಸೂದೆ ಸೋಲುವ ಮೂಲಕ ಲೋಕಸಭೆಯಲ್ಲಿ ಮೂವತ್ತು ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಲೋಕಸಭೆಯಲ್ಲಿ ಪ್ರತಿಪಕ್ಷಗಳ ಬೆಂಬಲ ಸಿಗದೆ ಮಸೂದೆ ಬಿದ್ದುಹೋದ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು, 1996 ರಿಂದ 2026; ಕರಾಳ ಇತಿಹಾಸ ಮರುಕಳಿಸಿದೆ. ಮೂರು ದಶಕಗಳ ನಂತರವೂ ಕಾಂಗ್ರೆಸ್ ಪಕ್ಷದ ಮಹಿಳಾ ವಿರೋಧಿ ಮನಸ್ಥಿತಿ ಕೊಂಚವೂ ಬದಲಾಗಿಲ್ಲ ಎನ್ನುವುದಕ್ಕೆ ಲೋಕಸಭೆ ಮತ್ತೊಮ್ಮೆ ಸಾಕ್ಷಿಯಾಯಿತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಅಂದು ಹೆಚ್.ಡಿ. ದೇವೇಗೌಡರ ನೇತೃತ್ವದ ಸಂಯುಕ್ತ ರಂಗ ಸರಕಾರವು ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲು ನೀಡುವ ಕ್ರಾಂತಿಕಾರಿ ನಿರ್ಧಾರ ಕೈಗೊಂಡು ಸಂಸತ್ತಿನಲ್ಲಿ ಮಸೂದೆ ಮಂಡಿಸಿತ್ತು. ಅಂದು ಇದೇ ಕಾಂಗ್ರೆಸ್ ಮತ್ತು ಅದರ ಸಹಚರ ಶಕ್ತಿಗಳು ಆ ಪ್ರಯತ್ನವನ್ನು ಸಂಘಟಿತವಾಗಿ ವಿಫಲಗೊಳಿಸಿದ್ದವು. ಇಂದು ಆವತ್ತು ಮಹಿಳೆಯರಿಗೆ ಆಗಿದ್ದ ಐತಿಹಾಸಿಕ ಅನ್ಯಾಯ ಸರಿಪಡಿಸಲು ಪ್ರಧಾನಿ ನರೇಂದ್ರ ಮೋದಿ ಅವರು ದಿಟ್ಟಹೆಜ್ಜೆ ಇರಿಸಿದ್ದರು. ಪುನಾ ಅದೇ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳು ಸೇರಿ ಸನ್ಮಾನ್ಯ ಮೋದಿ ಅವರ ಪ್ರಯತ್ನಕ್ಕೆ ತಡೆಯೊಡ್ಡಿವೆ ಎಂದು ಅವರು ಕಿಡಿಕಾರಿದ್ದಾರೆ.

ಮಹಿಳಾ ಮೀಸಲು ಮಸೂದೆಯನ್ನು ಸೋಲಿಸಿದ ಕೂಟದ ಶಕ್ತಿಗಳನ್ನು ರಾಷ್ಟ್ರದ ನಾರಿಶಕ್ತಿ ಎಂದಿಗೂ ಕ್ಷಮಿಸುವುದಿಲ್ಲ. ಇದು ಮಾತೃಶಕ್ತಿಗೆ ಆಗಿರುವ ಅಪಮಾನ. ಇದಕ್ಕೆ ಕಾರಣರಾದ ಎಲ್ಲರೂ ತಕ್ಕ ಶಾಸ್ತಿ ಅನುಭವಿಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ರಾಷ್ಟ್ರದ ನಾರಿಶಕ್ತಿಗೆ ನನ್ನ ಮನವಿ ಇಷ್ಟೇ, ನಿಮಗೆ ನಿರಾಶೆ ಬೇಕಿಲ್ಲ. ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಮುಂದೊಂದು ದಿನ ನಿಮಗೆ ಅಗ್ರಮನ್ನಣೆ ಸಿಕ್ಕೇ ಸಿಗುತ್ತದೆ. 33% ಮಹಿಳಾ ಮೀಸಲು ಗುರಿ ಸಾಧಿಸುವುದು ಶತಸಿದ್ಧ ಎಂದು ಅವರು ಭರವಸೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

2 mins ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

1 hour ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

7 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

14 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

14 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

14 hours ago