ದೇಶ- ವಿದೇಶ

ಡೆಹ್ರಾಡೂನ್:‌ ಬಸ್‌ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಐವರಿಂದ ಸಾಮೂಹಿಕ ಅತ್ಯಾಚಾರ

ಡೆಹ್ರಾಡೂನ್: ಕೋಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಕಾವಿನ ನಡುವೆಯೇ ಮತ್ತೊಂದು ಅತ್ಯಾಚಾರ ಪ್ರಕರಣ ವರದಿಯಾಗಿದೆ.

ಡೆಹ್ರಾಡೂನ್‍ನ ಅಂತಾರಾಜ್ಯ ಬಸ್ ನಲ್ಲಿ ಹೊರಟಿದ್ದ ಅಪ್ರಾಪ್ತ ಬಾಲಕಿ ಮೇಲೆ ಐವರು ನೀಚರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಆ.13ರಂದು ನಡೆದಿದೆ. ಈ ಸಂಬಂಧ ದೂರು ದಾಖಲಿಸಿಕೊಂಡ ಪೊಲೀಸರು ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ನಡುರಾತ್ರಿ ಯುವತಿಯೊಬ್ಬಳು ಬಸ್‍ಸ್ಟ್ಯಾಂಡ್‍ನಲ್ಲಿ ಕುಳಿತಿರುವ ಬಗ್ಗೆ ಡೆಹ್ರಾಡೂನ್ ಮಕ್ಕಳ ಕಲ್ಯಾಣ ಸಮಿತಿಗೆ ಕರೆಯೊಂದು ಬಂದಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿ ಯುವತಿಯನ್ನು ಸರ್ಕಾರಿ ಹೋಂಗೆ ಕಳುಹಿಸಿ ವಿಚಾರಣೆ ನಡೆಸಿದಾಗ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಬಗ್ಗೆ ಹೇಳಿಕೊಂಡಿದ್ದಾಳೆ.

ಬಸ್‌ ಸಿಬ್ಬಂದಿ ಅಪ್ರಾಪ್ತ ಬಾಲಕಿಯನ್ನು ದೆಹಲಿಯಿಂದ ಡೆಹ್ರಾಡೂನ್‌ಗೆ ಕರೆತಂದಿದ್ದರು. ಇಬ್ಬರು ಬಸ್‌ ಚಾಲಕರು, ಕಂಡಕ್ಟರ್, ಕ್ಯಾಶಿಯರ್ ಹಾಗೂ ಇತರ ಇಬ್ಬರು ಚಾಲಕರು ಸೇರಿ ಅದೇ ಬಸ್‌ನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಡೆಹ್ರಾಡೂನ್‌ ಎಸ್‌ಎಸ್‌ಪಿ ಅಜಯ್‌ಸಿಂಗ್‌ ತಿಳಿಸಿದ್ದಾರೆ.

ಎಲ್ಲಾ ಐವರು ಆರೋಪಿಗಳಾದ ಧರ್ಮೇಂದ್ರ ಕುಮಾರ್(32), ರಾಜ್‍ಪಾಲ್(57), ದೇವೇಂದ್ರ (52), ರಾಜೇಶ್ ಕುಮಾರ್ ಸೋನಕ್(38), ಹಾಗೂ ರವಿಕುಮಾರ್(34)ನನ್ನು ಪೋಲಿಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಕೃತ್ಯ ನಡೆಸಿರುವುದನ್ನು ಆರೋಪಿಗಳು ಬಾಯ್ಬಿಟ್ಟಿದ್ದಾರೆ.

ಘಟನೆ ಹಿನ್ನೆಲೆ:
ಯುವತಿ ಪಂಜಾಬ್‍ಗೆ ಹೇಗೆ ಹೋಗಬೇಕೆಂದು ಬಸ್ ಚಾಲಕ ದೇವೇಂದ್ರನ ಬಳಿಕ ಕೇಳಿದ್ದಳು. ಈ ವೇಳೆ ಡೆಹ್ರಾಡೂನ್‍ಗೆ ಬಂದು ಅಲ್ಲಿಂದ ಬಸ್‍ನಲ್ಲಿ ಹೋಗಬಹುದೆಂದು ಯುವತಿಗೆ ಚಾಲಕ ಹೇಳಿದ್ದಾನೆ. ಡೆಹ್ರಾಡೂನ್ ತಲುಪುವ ಮೊದಲೇ ಎಲ್ಲಾ ಬಸ್ ಪ್ರಯಾಣಿಕರು ಇಳಿದ ಕಾರಣ ಬಸ್ ಖಾಲಿಯಾಗಿತ್ತು. ಯುವತಿ ಒಬ್ಬಳೇ ಇದ್ದಳು. ಟರ್ಮಿನಲ್ ತಲುಪುತ್ತಿದ್ದಂತೆ ದೇವೇಂದ್ರ ಮತ್ತು ಧರ್ಮೇಂದ್ರ ಬಸ್‍ನ್ನು ಪಾರ್ಕ್ ಮಾಡಿ ಆಕೆ ಮೇಲೆ ಅತ್ಯಾಚಾರ ಎಸಗಿ ಕ್ರೌರ್ಯ ಮೆರೆದಿದ್ದಾರೆ.

ಇದಾದ ಬಳಿಕ ರವಿ ಮತ್ತು ರಾಜ್‍ಪಾಲ್ ಕೂಡ ಆಕೆಯನ್ನು ಅತ್ಯಾಚಾರ ಮಾಡಿದ್ದಾರೆ.  ವಿಷಯ ತಿಳಿದು ಸ್ಥಳಕ್ಕೆ ಬಂದ ಕ್ಯಾಶಿಯರ್ ಕೂಡ ನೀಚರ ಜೊತೆ ಸೇರಿ ಅತ್ಯಾಚಾರ ಮಾಡಿ ಅಟ್ಟಹಾಸ ಮೆರೆದಿದ್ದಾನೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

3 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

5 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

7 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

7 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

9 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

10 hours ago