ದೇಶ- ವಿದೇಶ

ಶಂಕಿತ ಮಂಕಿಪಾಲ್ಸ್‌ ವೈರಸ್‌ ಸೋಂಕಿತರ ಚಿಕಿತ್ಸೆಗೆ ಪ್ರೋಟೋಕಾಲ್‌ ಬಿಡುಗಡೆ

ನವದೆಹಲಿ: ಜಾಗತಿಕವಾಗಿ ಮಂಕಿಪಾಲ್ಸ್‌ ಪ್ರಕರಣಗಳ ಉಲ್ಬಣದ ನಡುವೆ ದೆಹಲಿಯ ಏಮ್ಸ್‌ ಆಸ್ಪತ್ರೆಯು ಪ್ರೋಟೋಕಾಲ್‌ ಬಿಡುಗಡೆ ಮಾಡಿದೆ.

ಶಂಖಿತ ಮಂಕಿಪಾಲ್ಸ್‌ ಹೊಂದಿರುವ ರೋಗಿಗಳನ್ನು ನಿರ್ವಹಿಸಲು ಏಮ್ಸ್‌ ಆಸ್ಪತ್ರೆ ಪ್ರೋಟೋಕಾಲ್‌ ಬಿಡುಗಡೆ ಮಾಡಿದ್ದು, ಮಂಕಿಪಾಲ್ಸ್‌ ಹರಡದಂತೆ ಭಾರತದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಮಂಕಿಪಾಲ್ಸ್‌ ಒಂದು ವೈರಲ್‌ ಝೂನೋಸಿಸ್‌ ಆಗಿದ್ದು, ಸಿಡುಬು ರೋಗಿಗಳಲ್ಲಿ ಈ ಹಿಂದೆ ಕಂಡುಬರುವ ರೋಗಲಕ್ಷಣಗಳನ್ನು ಹೋಲುತ್ತದೆ. ಆದರೂ ಪ್ರಾಯೋಗಿಕವಾಗಿ ಇದು ಕಡಿಮೆ ತೀವ್ರವಾಗಿರುತ್ತದೆ. ವಿಶ್ವ ಆರೋಗ್ಯ ಸಂಸ್ಥೆ ಮಂಕಿಪಾಲ್ಸ್‌ನ್ನು ಅಂತರಾಷ್ಟ್ರೀಯ ಕಾಳಜಿವ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸಿದೆ.

ಈ ಹಿಂದೆ ಮಂಕಿಪಾಲ್ಸ್‌ ಎಂದು ಕರೆಯಲ್ಪಡುವ ಎಂಪಾಕ್ಸ್‌ ಒಂದು ವೈರಲ್‌ ಕಾಯಿಲೆಯಾಗಿದ್ದು, ಅದು ಜ್ವರ, ತಲೆನೋವು ಹಾಗೂ ಸ್ನಾಯು ನೋವುಗಳನ್ನು ಉಂಟು ಮಾಡುತ್ತದೆ. ಇದರ ಜೊತೆಗೆ ಚರ್ಮದ ಮೇಲೆ ನೋವಿನ ಗುಳ್ಳೆಗಳನ್ನು ಉಂಟುಮಾಡುತ್ತದೆ. ಇದು ನಿಕಟವಾದ ಚರ್ಮದಿಂದ ಚರ್ಮದ ಸಂಪರ್ಕದ ಮೂಲಕ ವ್ಯಕ್ತಿಯಿಂದ ವ್ಯಕ್ತಿಗ ಹರಡುತ್ತದೆ.

ಈ ಹಿನ್ನೆಲೆಯಲ್ಲಿ ಜನತೆ ಬಹಳ ಎಚ್ಚರಿಕೆಯಿಂದ ಇರುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ರೋಗ ಲಕ್ಷಣ ಕಂಡು ಬಂದರೆ ಕೂಡಲೇ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ದಳಪತಿ ವಿಜಯ್‌ಗೆ ಮತ್ತೆ ಸಂಕಷ್ಟ : ಬಿಡುಗಡೆಗೂ ಮೊದಲೆ ʻಜನ ನಾಯಗನ್‌ʼ ಸೋರಿಕೆ.

ಚೆನ್ನೈ : ನಟ ಹಾಗೂ ರಾಜಕಾರಣಿ ದಳಪತಿ ವಿಜಯ್‌ ಅವರ ವೃತ್ತಿ ಜೀವನದ ಕೊನೆಯ ಹಾಗೂ ಬಹುನಿರೀಕ್ಷಿತ ʻಜನ ನಾಯಗನ್‌ʻ…

1 hour ago

ಆಂದೋಲನ ವರದಿ ಫಲಶ್ರುತಿ ; ಫುಟ್‌ಪಾತ್‌ನಲ್ಲಿದ್ದ ದ್ವಿಚಕ್ರ ವಾಹನಗಳ ತೆರವು

ಮೈಸೂರು : ಕುವೆಂಪುನಗರದ ನ್ಯೂ ಕಾಂತರಾಜ ಅರಸು ರಸ್ತೆಯಲ್ಲಿರುವ ಜನನಿಬಿಡ ಪ್ರದೇಶಗಳಾದ ಬಂದಂತಮ್ಮ ಕಾಳಮ್ಮ ದೇವಸ್ಥಾನ, ಐಗಿರಿ ಕೆಫೆ, ಸುಜ್ಹುಕಿ…

2 hours ago

ಗಾರೆ ಕೆಲಸ ಮಾಡುವವರ ಪುತ್ರಿಗೆ ಸಾಧಿಸುವ ಛಲ

ಮೈಸೂರು : ಎಲ್ಲ ಅನುಕೂಲತೆಗಳಿದ್ದರೂ ವಿದ್ಯೆ ತಲೆಗೆ ಹತ್ತುತ್ತಿಲ್ಲ ಎನ್ನುವ ವಿದ್ಯಾರ್ಥಿಗಳ ನಡುವೆ, ಗಾರೆ ಕೆಲಸ ಮಾಡುವವರ ಪುತ್ರಿಯೊಬ್ಬರು ದ್ವಿತೀಯ…

2 hours ago

ಪಿಯುಸಿ : ಕೋಟೆ ಟಾಪರ್‌ಗಳೆಲ್ಲರೂ ವಿದ್ಯಾರ್ಥಿನಿಯರೇ

ಮಂಜು ಕೋಟೆ ಎಚ್. ಡಿ. ಕೋಟೆ : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ತಾಲ್ಲೂಕಿನ ತುಂಬಸೋಗೆಯ ಎಂಎಂಕೆ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏ.11 ಶನಿವಾರ

4 hours ago

ವಾಹನ ದಟ್ಟನೆ : ಸುಗಮ ಸಂಚಾರಕ್ಕೆ ರೈಲ್ವೆ ಅಂಡರ್‌ ಬ್ರಿಡ್ಜ್‌ ವಿಸ್ತರಿಸಲು ಮನವಿ

ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…

15 hours ago