ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ ಆರೋಪದ ಮೇಲೆ ಎಂಟು ಜನರನ್ನು ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಿಂದ ಬಂಧಿಸಲಾಗಿದೆ.
ತಮಿಳುನಾಡಿನ ತಿರುಪ್ಪೂರು ಜಿಲ್ಲೆಯ ಉಡುಪು ಉತ್ಪಾದನಾ ಘಟಕಗಳಿಂದ ಮಿಜಾನೂರ್ ರೆಹಮಾನ್, ಮೊಹಮ್ಮದ್ ಶಬತ್, ಉಮರ್, ಮೊಹಮ್ಮದ್ ಲಿಟನ್, ಮೊಹಮ್ಮದ್ ಶಾಹಿದ್ ಮತ್ತು ಮೊಹಮ್ಮದ್ ಉಜ್ಜಲ್ ಎಂಬ ಆರು ಶಂಕಿತರನ್ನು ಬಂಧಿಸಲಾಗಿದ್ದು, ಇಬ್ಬರನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿದೆ. ಬಂಧಿತ ಶಂಕಿತರಲ್ಲಿ ಬಾಂಗ್ಲಾದೇಶಿ ಪ್ರಜೆಗಳೂ ಸೇರಿದ್ದಾರೆ.
ಆರೋಪಿಗಳು ಗುರುತಿನ ಚೀಟಿಗಾಗಿ ನಕಲಿ ಆಧಾರ್ ಕಾರ್ಡ್ಗಳನ್ನು ಬಳಸುತ್ತಿದ್ದರು. ಶಂಕಿತರಿಂದ ಎಂಟು ಮೊಬೈಲ್ ಫೋನ್ಗಳು ಮತ್ತು 16 ಸಿಮ್ ಕಾರ್ಡ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಮಿಳುನಾಡು ಪೊಲೀಸರು ಶಂಕಿತರನ್ನು ಬಂಧಿಸಿ ದೆಹಲಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.
ಪಾಕಿಸ್ತಾನದ ಲಷ್ಕರ್-ಎ-ತೊಯ್ಬಾ ಸಂಘಟನೆಯು ದೆಹಲಿಯ ಕೆಂಪು ಕೋಟೆ ಮತ್ತು ಚಾಂದನಿ ಚೌಕ್ನಲ್ಲಿರುವ ದೇವಾಲಯ ಸೇರಿದಂತೆ ದೇಶಾದ್ಯಂತ ಪ್ರಮುಖ ಧಾರ್ಮಿಕ ಸ್ಥಳಗಳ ಬಳಿ ಸ್ಛೋಟಕ್ಕೆ ಸಂಚು ರೂಪಿಸಿದೆ ಎಂದು ಮೂಲಗಳು ಎಚ್ಚರಿಸಿದ್ದವು. ಹೀಗೆ ತಿಳಿಸಿದ ಒಂದು ದಿನದ ಬೆನ್ನಲ್ಲೇ 8 ಮಂದಿಯನ್ನು ಬಂಧಿಸಲಾಗಿದೆ. ದೇಶದ ಅನೇಕ ಭಾಗಗಳಲ್ಲಿ ವಿಧ್ವಂಸಕ ಚಟುವಟಿಕೆಗಳನ್ನು ಯೋಜಿಸುತ್ತಿರುವ ಶಂಕಿತ ಭಯೋತ್ಪಾದಕ ಮಾಡ್ಯೂಲ್ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಬೆನ್ನಲ್ಲೇ ದೆಹಲಿಯ ಪ್ರಮುಖ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಕೇಂದ್ರ ಭದ್ರತಾ ಸಂಸ್ಥೆಗಳು ಸ್ಥಳೀಯ ಪೊಲೀಸ್ಗೆ ಸಹಾಯ ಮಾಡುತ್ತಿವೆ. ತನಿಖೆ ಮುಂದುವರೆದಿದ್ದು, ಇನ್ನೂ ಹೆಚ್ಚಿನ ಬಂಧನಗಳು ಸಾಧ್ಯವಿದೆ ಎಂದು ಮೂಲಗಳು ತಿಳಿಸಿವೆ.
ಹಣಕಾಸು ಸಂಪರ್ಕ!
ಇವರು ವಿದೇಶಿ ಮೂಲಗಳಿಂದ ಹಣ ಪಡೆದಿದ್ದಾರೆ ಎಂಬ ಮಾಹಿತಿಯೂ ತನಿಖೆಯಲ್ಲಿ ಹೊರಬಂದಿದೆ. ಆ ಹಣವನ್ನು ಭಾರತಕ್ಕೆ ಹೇಗೆ ಕಳುಹಿಸಲಾಯಿತು? ಯಾರ ಮೂಲಕ ವರ್ಗಾಯಿಸಲಾಯಿತು? ಎಂಬುದನ್ನು ಪತ್ತೆಹಚ್ಚಲು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಭಯೋತ್ಪಾದಕ ಜಾಲಕ್ಕೆ ಲಾಜಿಸ್ಟಿಕಲ್ ಬೆಂಬಲ ನೀಡುತ್ತಿದ್ದರೆಂಬ ಅನುಮಾನವೂ ಇದೆ.
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…