ನವದೆಹಲಿ: ಇಲ್ಲಿನ 23 ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಯನ್ನು ಬಂಧಿಸಿ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಅಧಿಕಾರಿಗಳಿಂದ ತಿಳಿದು ಬಂದಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಪೊಲೀಸ್ ಅಧಿಕಾರಿಗಳು, ದ್ವಿತೀಯ ಪಿಯುಸಿ ವಿದ್ಯಾರ್ಥಿಯೇ ನವದೆಹಲಿಯ 23 ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶವನ್ನು ಇ-ಮೇಲ್ ಮೂಲಕ ಕಳುಹಿಸಿದ್ದಾನೆ ಬಂದು ಬಹಿರಂಗಪಡಿಸಿದ್ದಾರೆ.
ಇತ್ತೀಚಿಗೆ ಕೆಲವು ತಿಂಗಳಿನಿಂದ ದೆಹಲಿಯ ಹಲವು ಶಾಲೆಗಳಿಗೆ ಸರಣಿ ಬಾಂಬ್ ಸ್ಫೋಟದ ಬೆದರಿಕೆ ಸಂದೇಶ ಬರುತ್ತಿದ್ದು, ಇದು ದೆಹಲಿ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿತ್ತು. ಆದರೆ ಇದೀಗ ಮೂಲ ಪತ್ತೆ ಹಚ್ಚಿರುವ ಪೊಲೀಸರಿಗೆ ಶಾಕ್ ಆಗಿದೆ. ಏಕೆಂದರೆ ಬಂಧನವಾರುವ ವಿದ್ಯಾರ್ಥಿಯೇ, ತಾನು ಪರೀಕ್ಷೆಯಿಂದ ತಪ್ಪಿಸಿಕೊಳ್ಳಲೆಂದು ದೆಹಲಿಯಲ್ಲಿರುವ ವಿವಿಧ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶವನ್ನು ಇ-ಮೇಲ್ ಮೂಲಕ ರವಾನಿಸಲಾಗಿತ್ತು ಎಂದು ಹೇಳಿಕೆ ನೀಡಿದ್ದೇನೆ. ಹೀಗಾಗಿ ಈ ಬಗ್ಗೆ ದೆಹಲಿಯ ಡಿಎಸ್ಪಿ ಅಂಕಿತ್ ಚೌಹಾಣ್ ಮಾಹಿತಿ ನೀಡಿದ್ದಾರೆ.
ಮದರ್ಸ್ ಇಂಟರ್ ನ್ಯಾಷನಲ್ ಸ್ಕೂಲ್, ಮಾಡರ್ನ್ ಸ್ಕೂಲ್, ಸ್ಪ್ರಿಂಗ್ಡೇಲ್ ಸ್ಕೂಲ್, ಜಿಡಿ ಗೋಯೆಂಕಾ ಪಬ್ಲಿಕ್ ಸ್ಕೂಲ್, ಸೇಂಟ್ ಕೊಲಂಬಾಸ್ ಸ್ಕೂಲ್, ಸಲ್ವಾನ್ ಪಬ್ಲಿಕ್ ಸ್ಕೂಲ್ ಸೇರಿದಂತೆ 23 ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿತ್ತು ಎಂದು ತಿಳಿಸಿದ್ದಾರೆ. ಆದರೆ ಇದೀಗ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಆರೋಪಿಯೂ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ.
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…
ಚಾಮರಾಜನಗರ : ಇತ್ತೀಚೆಗೆ ಸುರಿದ ಗಾಳಿ ಸಹಿತ ಮಳೆಯಿಂದಾಗಿ ತಾಲ್ಲೂಕು ವ್ಯಾಪ್ತಿಯ ದೊಡ್ಡಮೋಳೆ, ಕಟ್ನವಾಡಿ, ಗ್ರಾಮಗಳಲ್ಲಿ ಮನೆ ಗೋಡೆ ಕುಸಿದಿದ್ದ…