ದೇಶ- ವಿದೇಶ

ದೆಹಲಿ| 23 ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್‌: ದ್ವಿತೀಯ ಪಿಯುಸಿ ವಿದ್ಯಾರ್ಥಿ ಬಂಧನ

ನವದೆಹಲಿ: ಇಲ್ಲಿನ 23 ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಕಳುಹಿಸಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಯನ್ನು ಬಂಧಿಸಿ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಅಧಿಕಾರಿಗಳಿಂದ ತಿಳಿದು ಬಂದಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಪೊಲೀಸ್‌ ಅಧಿಕಾರಿಗಳು, ದ್ವಿತೀಯ ಪಿಯುಸಿ ವಿದ್ಯಾರ್ಥಿಯೇ ನವದೆಹಲಿಯ 23 ಶಾಲೆಗಳಿಗೆ ಬಾಂಬ್‌ ಬೆದರಿಕೆ ಸಂದೇಶವನ್ನು ಇ-ಮೇಲ್‌ ಮೂಲಕ ಕಳುಹಿಸಿದ್ದಾನೆ ಬಂದು ಬಹಿರಂಗಪಡಿಸಿದ್ದಾರೆ.

ಇತ್ತೀಚಿಗೆ ಕೆಲವು ತಿಂಗಳಿನಿಂದ ದೆಹಲಿಯ ಹಲವು ಶಾಲೆಗಳಿಗೆ ಸರಣಿ ಬಾಂಬ್‌ ಸ್ಫೋಟದ ಬೆದರಿಕೆ ಸಂದೇಶ ಬರುತ್ತಿದ್ದು, ಇದು ದೆಹಲಿ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿತ್ತು. ಆದರೆ ಇದೀಗ ಮೂಲ ಪತ್ತೆ ಹಚ್ಚಿರುವ ಪೊಲೀಸರಿಗೆ ಶಾಕ್‌ ಆಗಿದೆ. ಏಕೆಂದರೆ ಬಂಧನವಾರುವ ವಿದ್ಯಾರ್ಥಿಯೇ, ತಾನು ಪರೀಕ್ಷೆಯಿಂದ ತಪ್ಪಿಸಿಕೊಳ್ಳಲೆಂದು ದೆಹಲಿಯಲ್ಲಿರುವ ವಿವಿಧ ಶಾಲೆಗಳಿಗೆ ಬಾಂಬ್‌ ಬೆದರಿಕೆ ಸಂದೇಶವನ್ನು ಇ-ಮೇಲ್‌ ಮೂಲಕ ರವಾನಿಸಲಾಗಿತ್ತು ಎಂದು ಹೇಳಿಕೆ ನೀಡಿದ್ದೇನೆ. ಹೀಗಾಗಿ ಈ ಬಗ್ಗೆ ದೆಹಲಿಯ ಡಿಎಸ್‌ಪಿ ಅಂಕಿತ್‌ ಚೌಹಾಣ್‌ ಮಾಹಿತಿ ನೀಡಿದ್ದಾರೆ.

ಮದರ್ಸ್‌ ಇಂಟರ್‌ ನ್ಯಾಷನಲ್‌ ಸ್ಕೂಲ್‌, ಮಾಡರ್ನ್‌ ಸ್ಕೂಲ್‌, ಸ್ಪ್ರಿಂಗ್‌ಡೇಲ್‌ ಸ್ಕೂಲ್‌, ಜಿಡಿ ಗೋಯೆಂಕಾ ಪಬ್ಲಿಕ್‌ ಸ್ಕೂಲ್‌, ಸೇಂಟ್‌ ಕೊಲಂಬಾಸ್‌ ಸ್ಕೂಲ್‌, ಸಲ್ವಾನ್‌ ಪಬ್ಲಿಕ್‌ ಸ್ಕೂಲ್‌ ಸೇರಿದಂತೆ 23 ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್‌ ಬೆದರಿಕೆ ಸಂದೇಶ ಕಳುಹಿಸಲಾಗಿತ್ತು ಎಂದು ತಿಳಿಸಿದ್ದಾರೆ. ಆದರೆ ಇದೀಗ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಆರೋಪಿಯೂ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ.

ಅರ್ಚನ ಎಸ್‌ ಎಸ್

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

9 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

10 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

10 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

13 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

15 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

16 hours ago