ದೇಶ- ವಿದೇಶ

ದಿಲ್ಲಿ ಸ್ಫೋಟದ ಆರೋಪಿ ಡಾ.ಉಮರ್‌ ಮನೆ ನೆಲಸಮ : ಮುಂದುವರೆದ ತನಿಖೆ

ಪುಲ್ವಾಮಾ : ನವೆಂಬರ್ 10ರಂದು ದೆಹಲಿಯ ಕೆಂಪು ಕೋಟೆ ಬಳಿ ಭೀಕರ ಕಾರು ಸ್ಫೋಟದ ಮುಖ್ಯ ಆರೋಪಿ ಡಾ.ಉಮರ್ ನಬಿ ಅಲಿಯಾಸ್ ಉಮರ್ ಉನ್-ನಬಿಯ ಕಾಶ್ಮೀರದ ಮನೆಯನ್ನು ಭದ್ರತಾ ಪಡೆಗಳು ನೆಲಸಮಗೊಳಿಸಿವೆ.

ಉಮರ್ ಮನೆ ಧ್ವಂಸವು ಭಯೋತ್ಪಾದಕರಿಗೆ ಕಠಿಣ ಸಂದೇಶ ರವಾನಿಸಿದೆ. ಇಂತಹ ಕೃತ್ಯಗಳು ಎಷ್ಟೇ ದೊಡ್ಡ ಬೆಲೆ ತೆರಬೇಕಾದರೂ ತೆರಬೇಕು ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಿದೆ. ತನಿಖೆ ಇನ್ನೂ ಮುಂದುವರಿದಿದೆ. ಉಳಿದ ಜಾಲ ಸದಸ್ಯರ ಪತ್ತೆಗೆ ದೇಶಾದ್ಯಂತ ಶೋಧ ಚುರುಕುಗೊಂಡಿದೆ. ಈ ಘಟನೆ ಒಂದು ಭೀಕರ ಎಚ್ಚರಿಕೆಯಾಗಿದೆ.

ಕಳೆದ ಮಧ್ಯರಾತ್ರಿ ಪುಲ್ವಾಮಾ ಜಿಲ್ಲೆಯ ಕೊಯಿಲ್ ಗ್ರಾಮದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಡಾ. ಉಮರ್ ನಬಿಯನ್ನು ಆತ್ಮಹತ್ಯಾ ಬಾಂಬರ್ ಎಂದು ಗುರುತಿಸಲಾಗಿದ್ದು, ಆತನ ಮನೆಯಲ್ಲಿ ಭದ್ರತಾ ಪಡೆಗಳು ಧ್ವಂಸ ಮಾಡಿದ್ದಾರೆ.

ಸೋಮವಾರ ಸಂಜೆ ಸುಮಾರು 6:50ಕ್ಕೆ ಸ್ಫೋಟಕಗಳಿಂದ ತುಂಬಿದ ಹುಂಡೈ ಐ20 ಕಾರನ್ನು ಡಾ. ಉಮರ್ ಚಲಾಯಿಸಿ ಕೆಂಪು ಕೋಟೆ ಬಳಿ ಸ್ಫೋಟಿಸಿದ್ದ. ಈ ದಾಳಿಯಲ್ಲಿ 13 ಜನರು ಸಾವನಪ್ಪಿದ್ರೆ, ಹಲವರು ಗಾಯಗೊಂಡಿದ್ದಾರೆ. ಸ್ಫೋಟದ ಆಘಾತಕ್ಕೆ ಸುತ್ತಮುತ್ತಲಿನ ವಾಹನಗಳು ಛಿದ್ರಗೊಂಡು, ಹಲವು ಸಾವು ನೋವುಗಳು ಸಂಭವಿಸಿವೆ. ತನಿಖೆಯಲ್ಲಿ ಸ್ಫೋಟ ಸ್ಥಳದಿಂದ ಸಂಗ್ರಹಿಸಿದ ಡಿಎನ್‍ಎ ಮಾದರಿಗಳು ಉಮರ್ ತಾಯಿಯ ಡಿಎನ್‍ಎಗೆ ಹೊಂದಿಕೊಂಡಿದ್ದು, ಆತನೇ ಸ್ಫೋಟಕಾರಿ ಎಂಬುದು 100% ದೃಢಪಟ್ಟಿದೆ.

ಇದನ್ನು ಓದಿ: ಕರ್ನಾಟಕದ ಜೈಲುಗಳು ಭಯೋತ್ಪಾದಕರಿಗೆ ಸ್ವರ್ಗವಿದ್ದಂತೆ: ಆರ್.‌ಅಶೋಕ್‌ ಆಕ್ರೋಶ

ತನ್ನ ಊರಿನಲ್ಲಿ ಶಿಕ್ಷಣದಲ್ಲಿ ಉತ್ತಮ ಸಾಧನೆ ಮಾಡಿದ ವೈದ್ಯ ಎಂದು ಹೆಸರಾಗಿದ್ದ ಉಮರ್ ಕಳೆದ ಎರಡು ವರ್ಷಗಳಲ್ಲಿ ತೀವ್ರವಾದಿಯಾಗಿ ಮಾರ್ಪಟ್ಟಿದ್ದ. ಸಾಮಾಜಿಕ ಜಾಲತಾಣದಲ್ಲಿ ಮೂಲಭೂತವಾದಿ ಗುಂಪುಗಳನ್ನು ಸೇರಿಕೊಂಡು ತೀವ್ರ ಸಂದೇಶಗಳನ್ನು ಕಳುಹಿಸುತ್ತಿದ್ದ ಎಂಬ ಆರೋಪವಿದೆ. ಸಿಸಿಟಿವಿ ದೃಶ್ಯಗಳಲ್ಲಿ ಆತನ ಚಲನವಲನ ಸ್ಪಷ್ಟವಾಗಿ ಕಂಡುಬಂದಿದೆ. ಸ್ಫೋಟಕ್ಕೆ 24 ನಿಮಿಷ ಮೊದಲು ಸುನೇಹ್ರಿ ಮಸೀದಿ ಪಾರ್ಕಿಂಗ್‍ನಲ್ಲಿ ಮಧ್ಯಾಹ್ನ 3:19ಕ್ಕೆ ಕಾರು ನಿಲ್ಲಿಸಿ, ಸಂಜೆ 6:28ಕ್ಕೆ ಹೊರಟಿದ್ದ ದೃಶ್ಯವೂ ಸಿಕ್ಕಿದೆ.

`ವೈಟ್ ಕಾಲರ್” ಭಯೋತ್ಪಾದಕ ಮಾಡ್ಯೂಲ್‍ನ ಪ್ರಮುಖ ಸದಸ್ಯ ಈ ಡಾ. ಉಮರ್ ನಬಿ. ಜೈಶ್-ಎ-ಮೊಹಮ್ಮದ್, ಅನ್ಸರ್ ಘಜ್ವತ್-ಉಲ್-ಹಿಂದ್ ಜೊತೆ ಸಂಪರ್ಕ ಹೊಂದಿದ್ದ ಈ ಜಾಲವನ್ನು ಪೊಲೀಸರು ಭೇದಿಸಿ ಮೂರು ವೈದ್ಯರು ಸೇರಿ ಎಂಟು ಜನರನ್ನು ಬಂಧಿಸಿದ್ದರು. ಜಮ್ಮು-ಕಾಶ್ಮೀರ, ಹರಿಯಾಣ, ಉತ್ತರ ಪ್ರದೇಶದಲ್ಲಿ 3,000 ಕೆಜಿ ಅಮೋನಿಯಂ ನೈಟ್ರೇಟ್, ಪೊಟ್ಯಾಸಿಯಂ ಕ್ಲೋರೇಟ್, ಸಲ್ಫರ್ ವಶಪಡಿಸಿಕೊಳ್ಳಲಾಗಿದೆ.
ಅಧಿಕಾರಿಗಳ ಮಾಹಿತಿಯ ಪ್ರಕಾರ, ಈ ಸ್ಫೋಟವನ್ನು ಯೋಜಿತ ಪಿತೂರಿಯ ಭಾಗವಾಗಿ ನಡೆಸಲಾಗಿತ್ತು ಎಂದು ಹೇಳಬಹುದು. ಡಾ.ನಬಿ ಮತ್ತು ಡಾ. ಮುಜಮ್ಮಿಲ್ ಡೈರಿಗಳನ್ನು ಡಾ. ಉಮರ್ ಕೊಠಡಿ ಸಂಖ್ಯೆ ನಾಲ್ಕು ಮತ್ತು ಮುಜಮ್ಮಿಲ್ ಕೊಠಡಿ ಸಂಖ್ಯೆ 13 ರಿಂದ ವಶಪಡಿಸಿಕೊಳ್ಳಲಾಗಿದೆ. ಅದು ಯೋಜನೆಯ ಪಿತೂರಿಯನ್ನು ಬಯಲು ಮಾಡಿದೆ.

ಡಾ. ಉಮರ್ ಮತ್ತು ಡಾ. ಮುಜಮ್ಮಿಲ್ ಅವರ ಡೈರಿಗಳನ್ನು ಭದ್ರತಾ ಸಂಸ್ಥೆಗಳು ವಶಪಡಿಸಿಕೊಂಡಿದ್ದು, ಈ ಡೈರಿಯಲ್ಲಿ ಸುಮಾರು 25 ವ್ಯಕ್ತಿಗಳ ಹೆಸರುಗಳಿವೆ. ಹೆಚ್ಚಿನವರು ಜಮ್ಮು-ಕಾಶ್ಮೀರ ಮತ್ತು ಫರಿದಾಬಾದ್ ಮೂಲದವರು. ಮಂಗಳ-ಬುಧವಾರ ಉಮರ್‍ನ ಕೊಠಡಿ ಸಂಖ್ಯೆ 4 ಮತ್ತು ಮುಜಮ್ಮಿಲ್‍ನ ಕೊಠಡಿ ಸಂಖ್ಯೆ 13ರಿಂದ ಡೈರಿಗಳು ವಶಕ್ಕೆ ಪಡೆಯಲಾಗಿದೆ. ಅಲ್-ಫಲಾಹ್ ವಿಶ್ವವಿದ್ಯಾಲಯದಿಂದ ಕೇವಲ 300 ಮೀಟರ್ ದೂರದ ಧೌಜ್‍ನಲ್ಲಿ 360 ಕೆಜಿ ಸ್ಫೋಟಕಗಳು ಪತ್ತೆಯಾಗಿದೆ.

ಡೈರಿಗಳು ಕೆಲವು ಸಂಕೇತ ಪದಗಳನ್ನು ಹೊಂದಿವೆ. ತನಿಖಾಧಿಕಾರಿಗಳು ಅವುಗಳನ್ನು ಒಟ್ಟುಗೂಡಿಸುತ್ತಿದ್ದಾರೆ. ಇದರಲ್ಲಿ ಭಾರತದ ನಾಲ್ಕು ಸ್ಥಳಗಳಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ. ಇಂಡಿಯಾ ಗೇಟ್?, ಕಾಶಿ, ಅಯೋಧ್ಯೆಯಂತಹ ಪ್ರಮುಖ ಸ್ಥಳಗಳನ್ನು ಉಗ್ರರು ಟಾರ್ಗೆಟ್? ಮಾಡಿಕೊಂಡಿದ್ದರು ಎಂಬುದು ಬಯಲಾಗಿದೆ.

ಆಂದೋಲನ ಡೆಸ್ಕ್

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

11 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

11 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

12 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

12 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

12 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

13 hours ago