ದೇಶ- ವಿದೇಶ

ದಿಲ್ಲಿ ಕಾರು ಸ್ಫೋಟ ಪ್ರಕರಣ : ನಾಲ್ವರನ್ನು ಬಂಧಿಸಿ ಎನ್‌ಐಎ

ಹೊಸದಿಲ್ಲಿ : ಇಲ್ಲಿನ ಕೆಂಪು ಕೋಟೆ ಬಳಿ ನ. 10ರಂದು ಸಂಭವಿಸಿದ ಕಾರು ಸ್ಛೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಮತ್ತೆ ನಾಲ್ವರು ಪ್ರಮುಖ ಸಂಚುಕೋರರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಕಾಶ್ಮೀರದಲ್ಲಿ ಆರು ಜನರನ್ನು ಬಂಧಿಸಿದಂತಾಗಿದೆ.

ಪುಲ್ವಾಮಾದ ಡಾ. ಮುಜಮ್ಮಿಲ್ ಶಕೀಲ್ ಗನಾಯಿ, ಅನಂತನಾಗ್ ಜಿಲ್ಲೆಯ ಡಾ.ಆದೀಲ್ ಅಹ್ಮದ್, ಲಖನೌದ ಡಾ.ಶಾಹೀನ್ ಸಯೀದ್, ಶೋಪಿಯಾನ್ ಜಿಲ್ಲೆಯ ಮುಫ್ತಿ ಇರ್ಫಾನ್ ಅಹ್ಮದ್ ವಾಗೆಯನ್ನು ಶ್ರೀನಗರದಲ್ಲಿ ವಶಕ್ಕೆ ಪಡೆಯಲಾಯಿತು.

ನಾಲ್ವರ ಬಂಧನಕ್ಕೆ ಸಂಬಂಧಿಸಿದಂತೆ, ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ನೀಡಿದ ಆದೇಶವನ್ನು ಶ್ರೀನಗರದ ನ್ಯಾಯಾಲಯಕ್ಕೆ ಸಲ್ಲಿಸಿದ ಎನ್‌ಐಎ ಅಧಿಕಾರಿಗಳು, ನಾಲ್ವರನ್ನೂ ತಮ್ಮ ವಶಕ್ಕೆ ಪಡೆದುಕೊಂಡರು.

ಈ ನಾಲ್ವರು ಕೂಡ ಕೆಂಪುಕೋಟೆ ಸಮೀಪ ಸಂಭವಿಸಿದ ಸ್ಛೋಟಕ್ಕೆ ಯೋಜನೆ ರೂಪಿಸುವ ಜೊತೆಗೆ ಆರ್ಥಿಕ ನೆರವು ನೀಡಿದ್ದರು ಎಂದು ಎನ್‌ಐಎ ತಿಳಿಸಿದೆ. ಸ್ಛೋಟಕ್ಕೆ ಬಳಕೆಯಾದ ಕಾರು ಜಸೀರ್ ಬಿಲಾಲ್ ವಾನಿ ಹೆಸರಿನಲ್ಲಿ ನೋಂದಣಿಯಾಗಿತ್ತು. ಬಾಂಬ್ ತಯಾರಿಕೆಗೆ ತಾಂತ್ರಿಕ ನೆರವು ನೀಡಿದ ಆರೋಪದ ಅಡಿಯಲ್ಲಿ ಅಮೀರ್ ರಷೀದ್ ಅಲಿಯನ್ನು ಎನ್‌ಐಎ ಈ ಹಿಂದೆಯೇ ಬಂಧಿಸಿತ್ತು.

 

ಆಂದೋಲನ ಡೆಸ್ಕ್

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

2 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

2 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

2 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

2 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

14 hours ago