ಹೊಸದಿಲ್ಲಿ : ಇಲ್ಲಿನ ಕೆಂಪು ಕೋಟೆ ಬಳಿ ನ. 10ರಂದು ಸಂಭವಿಸಿದ ಕಾರು ಸ್ಛೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಮತ್ತೆ ನಾಲ್ವರು ಪ್ರಮುಖ ಸಂಚುಕೋರರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬಂಧಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಕಾಶ್ಮೀರದಲ್ಲಿ ಆರು ಜನರನ್ನು ಬಂಧಿಸಿದಂತಾಗಿದೆ.
ಪುಲ್ವಾಮಾದ ಡಾ. ಮುಜಮ್ಮಿಲ್ ಶಕೀಲ್ ಗನಾಯಿ, ಅನಂತನಾಗ್ ಜಿಲ್ಲೆಯ ಡಾ.ಆದೀಲ್ ಅಹ್ಮದ್, ಲಖನೌದ ಡಾ.ಶಾಹೀನ್ ಸಯೀದ್, ಶೋಪಿಯಾನ್ ಜಿಲ್ಲೆಯ ಮುಫ್ತಿ ಇರ್ಫಾನ್ ಅಹ್ಮದ್ ವಾಗೆಯನ್ನು ಶ್ರೀನಗರದಲ್ಲಿ ವಶಕ್ಕೆ ಪಡೆಯಲಾಯಿತು.
ನಾಲ್ವರ ಬಂಧನಕ್ಕೆ ಸಂಬಂಧಿಸಿದಂತೆ, ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ನೀಡಿದ ಆದೇಶವನ್ನು ಶ್ರೀನಗರದ ನ್ಯಾಯಾಲಯಕ್ಕೆ ಸಲ್ಲಿಸಿದ ಎನ್ಐಎ ಅಧಿಕಾರಿಗಳು, ನಾಲ್ವರನ್ನೂ ತಮ್ಮ ವಶಕ್ಕೆ ಪಡೆದುಕೊಂಡರು.
ಈ ನಾಲ್ವರು ಕೂಡ ಕೆಂಪುಕೋಟೆ ಸಮೀಪ ಸಂಭವಿಸಿದ ಸ್ಛೋಟಕ್ಕೆ ಯೋಜನೆ ರೂಪಿಸುವ ಜೊತೆಗೆ ಆರ್ಥಿಕ ನೆರವು ನೀಡಿದ್ದರು ಎಂದು ಎನ್ಐಎ ತಿಳಿಸಿದೆ. ಸ್ಛೋಟಕ್ಕೆ ಬಳಕೆಯಾದ ಕಾರು ಜಸೀರ್ ಬಿಲಾಲ್ ವಾನಿ ಹೆಸರಿನಲ್ಲಿ ನೋಂದಣಿಯಾಗಿತ್ತು. ಬಾಂಬ್ ತಯಾರಿಕೆಗೆ ತಾಂತ್ರಿಕ ನೆರವು ನೀಡಿದ ಆರೋಪದ ಅಡಿಯಲ್ಲಿ ಅಮೀರ್ ರಷೀದ್ ಅಲಿಯನ್ನು ಎನ್ಐಎ ಈ ಹಿಂದೆಯೇ ಬಂಧಿಸಿತ್ತು.
ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ…
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…