ದೇಶ- ವಿದೇಶ

ದಿಲ್ಲಿ ಕಾರು ಬಾಂಬ್‌ ಸ್ಪೋಟ ಪ್ರಕರಣ : 9mmನ ಕಾಟ್ರ್ರಿಡ್ಜ್ ಪತ್ತೆ ; ಭಯೋತ್ಪಾದಕ ನಂಟು ದೃಢ..?

ಹೊಸದಿಲ್ಲಿ : ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆಯ ಮೆಟ್ರೊ ನಿಲ್ದಾಣ ಸಮೀಪ ಕಾರ್ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಸ್ಥಳೀಯ ಪೊಲೀಸರು ಘಟನಾ ಸ್ಥಳದಲ್ಲಿ 9 ಎಂಎಂನ ಮೂರು ಕಾಟ್ರ್ರಿಡ್ಜ್ ಗಳನ್ನು ವಶಪಡಿಸಿಕೊಂಡಿದ್ದಾರೆ.

ಅಧಿಕಾರಿಗಳ ಪ್ರಕಾರ, ಎರಡು ಕಾಟ್ರ್ರಿಜ್‍ಗಳು ಜೀವಂತ ಗುಂಡುಗಳಾಗಿದ್ದರೆ, ಮೂರನೆಯದು ಖಾಲಿ ಶೆಲ್ ಆಗಿದೆ. 9 ಎಂಎಂ ಮದ್ದುಗುಂಡುಗಳನ್ನು ಸಾಮಾನ್ಯವಾಗಿ ಭದ್ರತಾ ಪಡೆಗಳು ಮತ್ತು ಪೊಲೀಸ್ ಸಿಬ್ಬಂದಿ ಬಳಸುವುದರಿಂದ ಈ ಆವಿಷ್ಕಾರ ಮಹತ್ವದ್ದಾಗಿದೆ. ಆದಾಗ್ಯೂ, ಸ್ಥಳದಲ್ಲಿ ಯಾವುದೇ ಪಿಸ್ತೂಲ್ ಅಥವಾ ಶಸ್ತ್ರಾಸ್ತ್ರದ ಭಾಗ ಕಂಡುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದು, ಗುಂಡುಗಳು ಅಲ್ಲಿಗೆ ಹೇಗೆ ಬಂದವು ಎಂಬ ಪ್ರಶ್ನೆಗಳು ಎದ್ದಿವೆ.

ನವೆಂಬರ್ 10ರಂದು ಪ್ರಮುಖ ಶಂಕಿತ ಡಾ. ಉಮರ್ ನಬಿ ಚಲಾಯಿಸುತ್ತಿದ್ದ ಹುಂಡೈ ಐ20 ಕಾರಿನ ಸಂಪೂರ್ಣ ಚಲನೆಯನ್ನು ಪತ್ತೆಹಚ್ಚುವ 43 ಸಿಸಿಟಿವಿ ಚಿತ್ರಗಳು ಲಭ್ಯವಾಗಿವೆ. ಸ್ಫೋಟದ ಸ್ಥಳದಿಂದ ತೆಗೆದ ಡಿಎನ್‍ಎ ಉಮರ್‍ನ ತಾಯಿಯಿಂದ ತೆಗೆದ ಮಾದರಿಗಳಿಗೆ ಹೊಂದಿಕೆಯಾದ ಬಳಿಕ, ದಾಳಿಗೆ ಉಮರ್‍ನ ಡಿಎನ್‍ಎಯನ್ನು ಔಪಚಾರಿಕವಾಗಿ ಜೋಡಿಸಿದ ನಂತರ ಅಧಿಕಾರಿಗಳು ಅವನ ಗುರುತನ್ನು ದೃಢಪಡಿಸಿದ್ದಾರೆ.

ಇದನ್ನು ಓದಿ: ದೆಹಲಿ ಕಾರು ಬಾಂಬ್‌ ಸ್ಫೋಟ ಘಟನೆ ಖಂಡಿಸಿ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ

ಈ ಹಿಂದೆಂದೂ ನೋಡಿರದ ಚಿತ್ರಗಳು, ಸ್ಫೋಟಕ್ಕೆ ಕೆಲವೇ ಗಂಟೆಗಳ ಮೊದಲು ಫರೀದಾಬಾದ್ ವಿಶ್ವವಿದ್ಯಾಲಯದ ಕ್ಯಾಂಪಸ್‍ನಿಂದ ಹಳೆ ದೆಹಲಿಯವರೆಗೆ ಉಮರ್‍ನ ಚಲನವಲನಗಳನ್ನು ಖಚಿತಪಡಿಸಿವೆ. ದೆಹಲಿ-ಎನ್‍ಸಿಆರ್‍ನ ಅನೇಕ ಜಿಲ್ಲೆಗಳು, ಹೆದ್ದಾರಿಗಳು ಮತ್ತು ಪ್ರಮುಖ ಚೆಕ್‍ಪೋಸ್ಟ್‍ಗಳಾದ್ಯಂತ 5,000ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳನ್ನು ಬಳಸಿಕೊಂಡು ಅಧಿಕಾರಿಗಳು ಈ ಮಾರ್ಗವನ್ನು ಒಟ್ಟುಗೂಡಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕೆಂಪುಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1ರ ಬಳಿ ಸಂಭವಿಸಿದ ಸ್ಫೋಟಕ್ಕೆ ಕಾರಣವಾದ ಅಮೋನಿಯಂ ನೈಟ್ರೇಟ್‍ಗಿಂತ ಹೆಚ್ಚು ಶಕ್ತಿಶಾಲಿಯಾದ ಕನಿಷ್ಠ ಒಂದು ಮಾದರಿಯನ್ನು ವಿಧಿವಿಜ್ಞಾನ ತಂಡಗಳು ಸ್ಥಳದಿಂದ ಗುರುತಿಸಿವೆ.

ಕಾಕಾಟ್ರ್ರಿಡ್ಜ್ ಗಳು, ಜೀವಂತ ಗುಂಡುಗಳು ಮತ್ತು ಬಳಸಿದ ಸ್ಫೋಟಕಗಳ ಅವಶೇಷಗಳು ಸೇರಿದಂತೆ 40ಕ್ಕೂ ಹೆಚ್ಚು ಪುರಾವೆಗಳನ್ನು ಎಫ್‍ಎಸ್‍ಎಲ್ ತಂಡ ಸ್ಥಳದಿಂದ ಸಂಗ್ರಹಿಸಿದೆ. ವಿಧಿವಿಜ್ಞಾನ ವಿಶ್ಲೇಷಣೆಯು ಕಾರಿನಲ್ಲಿ ಸರಿಸುಮಾರು 30ರಿಂದ 40 ಕೆಜಿ ಅಮೋನಿಯಂ ನೈಟ್ರೇಟ್ ಇರುವುದನ್ನು ಸೂಚಿಸಿದೆ, ಈ ಪ್ರಮಾಣವು ಸ್ಫೋಟದ ಪ್ರಮಾಣ ಮತ್ತು ಬಲಕ್ಕೆ ಅನುಗುಣವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟ: ಅಕ್ರಮ ಪತ್ತೆಗೆ ಎಸ್‌ಐಟಿ ರಚಿಸಿ ಎಂದ ಸಿ.ಟಿ.ರವಿ

ಬೆಳಗಾವಿ: ಅನ್ನಭಾಗ್ಯ ಅಕ್ಕಿ ವಿದೇಶಕ್ಕೆ ರಫ್ತಾಗುತ್ತಿದ್ದು, ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಅಕ್ರಮ ಪತ್ತೆಗೆ ಎಸ್‌ಐಟಿ ರಚಿಸುವಂತೆ ಎಂಎಲ್‌ಸಿ ಸಿ.ಟಿ.ರವಿ ಆಗ್ರಹಿಸಿದರು. ಇಂದು…

18 mins ago

ಸ್ವಾತಂತ್ರ್ಯ ಚಳುವಳಿಗೆ ವಂದೇ ಮಾತರಂ ಶಕ್ತಿ ತುಂಬಿತು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…

2 hours ago

ಸಿಎಂ ಸಿದ್ದರಾಮಯ್ಯಗೆ ಬಿಗ್‌ಶಾಕ್‌ ಕೊಟ್ಟ ಸುಪ್ರೀಂಕೋರ್ಟ್‌

ನವದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್‌ ನೋಟಿಸ್‌ ನೀಡಿದೆ. ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ…

2 hours ago

ಬೆಳಗಾವಿ ಚಳಿಗಾಲದ ಅಧಿವೇಶನ: ಮೊದಲಿಗೆ ಅಗಲಿದ ಗಣ್ಯರಿಗೆ ಸಂತಾಪ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿದರು. ವಿಧಾನಸಭೆಯಲ್ಲಿ ವಂದೇಮಾತರಂ ಗೀತೆ…

2 hours ago

ಮುಂದುವರಿದ ಇಂಡಿಗೋ ಸಮಸ್ಯೆ: ದೇಶಾದ್ಯಂತ 450ಕ್ಕೂ ಹೆಚ್ಚು ವಿಮಾನಗಳು ರದ್ದು

ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಇಂದು 127…

2 hours ago

ನಟಿ ಮೇಲೆ ಅತ್ಯಾಚಾರ ಕೇಸ್‌: ಮಲಯಾಳಂ ಸ್ಟಾರ್‌ ನಟ ದಿಲೀಪ್‌ ಖುಲಾಸೆ

ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…

3 hours ago