ದೇಶ- ವಿದೇಶ

ದಿಲ್ಲಿ ಕಾರು ಬಾಂಬ್‌ ಸ್ಪೋಟ ಪ್ರಕರಣ : 9mmನ ಕಾಟ್ರ್ರಿಡ್ಜ್ ಪತ್ತೆ ; ಭಯೋತ್ಪಾದಕ ನಂಟು ದೃಢ..?

ಹೊಸದಿಲ್ಲಿ : ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆಯ ಮೆಟ್ರೊ ನಿಲ್ದಾಣ ಸಮೀಪ ಕಾರ್ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಸ್ಥಳೀಯ ಪೊಲೀಸರು ಘಟನಾ ಸ್ಥಳದಲ್ಲಿ 9 ಎಂಎಂನ ಮೂರು ಕಾಟ್ರ್ರಿಡ್ಜ್ ಗಳನ್ನು ವಶಪಡಿಸಿಕೊಂಡಿದ್ದಾರೆ.

ಅಧಿಕಾರಿಗಳ ಪ್ರಕಾರ, ಎರಡು ಕಾಟ್ರ್ರಿಜ್‍ಗಳು ಜೀವಂತ ಗುಂಡುಗಳಾಗಿದ್ದರೆ, ಮೂರನೆಯದು ಖಾಲಿ ಶೆಲ್ ಆಗಿದೆ. 9 ಎಂಎಂ ಮದ್ದುಗುಂಡುಗಳನ್ನು ಸಾಮಾನ್ಯವಾಗಿ ಭದ್ರತಾ ಪಡೆಗಳು ಮತ್ತು ಪೊಲೀಸ್ ಸಿಬ್ಬಂದಿ ಬಳಸುವುದರಿಂದ ಈ ಆವಿಷ್ಕಾರ ಮಹತ್ವದ್ದಾಗಿದೆ. ಆದಾಗ್ಯೂ, ಸ್ಥಳದಲ್ಲಿ ಯಾವುದೇ ಪಿಸ್ತೂಲ್ ಅಥವಾ ಶಸ್ತ್ರಾಸ್ತ್ರದ ಭಾಗ ಕಂಡುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದು, ಗುಂಡುಗಳು ಅಲ್ಲಿಗೆ ಹೇಗೆ ಬಂದವು ಎಂಬ ಪ್ರಶ್ನೆಗಳು ಎದ್ದಿವೆ.

ನವೆಂಬರ್ 10ರಂದು ಪ್ರಮುಖ ಶಂಕಿತ ಡಾ. ಉಮರ್ ನಬಿ ಚಲಾಯಿಸುತ್ತಿದ್ದ ಹುಂಡೈ ಐ20 ಕಾರಿನ ಸಂಪೂರ್ಣ ಚಲನೆಯನ್ನು ಪತ್ತೆಹಚ್ಚುವ 43 ಸಿಸಿಟಿವಿ ಚಿತ್ರಗಳು ಲಭ್ಯವಾಗಿವೆ. ಸ್ಫೋಟದ ಸ್ಥಳದಿಂದ ತೆಗೆದ ಡಿಎನ್‍ಎ ಉಮರ್‍ನ ತಾಯಿಯಿಂದ ತೆಗೆದ ಮಾದರಿಗಳಿಗೆ ಹೊಂದಿಕೆಯಾದ ಬಳಿಕ, ದಾಳಿಗೆ ಉಮರ್‍ನ ಡಿಎನ್‍ಎಯನ್ನು ಔಪಚಾರಿಕವಾಗಿ ಜೋಡಿಸಿದ ನಂತರ ಅಧಿಕಾರಿಗಳು ಅವನ ಗುರುತನ್ನು ದೃಢಪಡಿಸಿದ್ದಾರೆ.

ಇದನ್ನು ಓದಿ: ದೆಹಲಿ ಕಾರು ಬಾಂಬ್‌ ಸ್ಫೋಟ ಘಟನೆ ಖಂಡಿಸಿ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ

ಈ ಹಿಂದೆಂದೂ ನೋಡಿರದ ಚಿತ್ರಗಳು, ಸ್ಫೋಟಕ್ಕೆ ಕೆಲವೇ ಗಂಟೆಗಳ ಮೊದಲು ಫರೀದಾಬಾದ್ ವಿಶ್ವವಿದ್ಯಾಲಯದ ಕ್ಯಾಂಪಸ್‍ನಿಂದ ಹಳೆ ದೆಹಲಿಯವರೆಗೆ ಉಮರ್‍ನ ಚಲನವಲನಗಳನ್ನು ಖಚಿತಪಡಿಸಿವೆ. ದೆಹಲಿ-ಎನ್‍ಸಿಆರ್‍ನ ಅನೇಕ ಜಿಲ್ಲೆಗಳು, ಹೆದ್ದಾರಿಗಳು ಮತ್ತು ಪ್ರಮುಖ ಚೆಕ್‍ಪೋಸ್ಟ್‍ಗಳಾದ್ಯಂತ 5,000ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳನ್ನು ಬಳಸಿಕೊಂಡು ಅಧಿಕಾರಿಗಳು ಈ ಮಾರ್ಗವನ್ನು ಒಟ್ಟುಗೂಡಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕೆಂಪುಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1ರ ಬಳಿ ಸಂಭವಿಸಿದ ಸ್ಫೋಟಕ್ಕೆ ಕಾರಣವಾದ ಅಮೋನಿಯಂ ನೈಟ್ರೇಟ್‍ಗಿಂತ ಹೆಚ್ಚು ಶಕ್ತಿಶಾಲಿಯಾದ ಕನಿಷ್ಠ ಒಂದು ಮಾದರಿಯನ್ನು ವಿಧಿವಿಜ್ಞಾನ ತಂಡಗಳು ಸ್ಥಳದಿಂದ ಗುರುತಿಸಿವೆ.

ಕಾಕಾಟ್ರ್ರಿಡ್ಜ್ ಗಳು, ಜೀವಂತ ಗುಂಡುಗಳು ಮತ್ತು ಬಳಸಿದ ಸ್ಫೋಟಕಗಳ ಅವಶೇಷಗಳು ಸೇರಿದಂತೆ 40ಕ್ಕೂ ಹೆಚ್ಚು ಪುರಾವೆಗಳನ್ನು ಎಫ್‍ಎಸ್‍ಎಲ್ ತಂಡ ಸ್ಥಳದಿಂದ ಸಂಗ್ರಹಿಸಿದೆ. ವಿಧಿವಿಜ್ಞಾನ ವಿಶ್ಲೇಷಣೆಯು ಕಾರಿನಲ್ಲಿ ಸರಿಸುಮಾರು 30ರಿಂದ 40 ಕೆಜಿ ಅಮೋನಿಯಂ ನೈಟ್ರೇಟ್ ಇರುವುದನ್ನು ಸೂಚಿಸಿದೆ, ಈ ಪ್ರಮಾಣವು ಸ್ಫೋಟದ ಪ್ರಮಾಣ ಮತ್ತು ಬಲಕ್ಕೆ ಅನುಗುಣವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಿಸಿ ಗಾಳಿ ; ಸಮವಸ್ತ್ರ ಕಡ್ಡಾಯಗೊಳಿಸದಂತೆ ಜಿಲ್ಲಾಧಿಕಾರಿ ಆದೇಶ

ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…

3 hours ago

ಪಿರಿಯಾಪಟ್ಟಣ : ಈಜಲು ನೀರಿಗಿಳಿದಿ ಯುವಕರಿಬ್ಬರು ಸಾವು

ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ…

3 hours ago

ನಮ್ಮ ಹಕ್ಕು ಕಸಿಯಲು ಅಮೆರಿಕ ಯಾರು? ; ಟ್ರಂಪ್‌ ವಿರುದ್ಧ ಇರಾನ್‌ ವಾಗ್ದಾಳಿ

ಟೆಹ್ರಾನ್ : ಇರಾನ್‌ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು…

3 hours ago

ಕಾವೇರಿ ನದಿಯಲ್ಲಿ ಆರು ಜನ ಸಾವು ; ಸಾವಿಗೀಡಾದವರೆಲ್ಲರೂ ಒಂದೇ ಕುಟುಂಬದವರು

ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…

13 hours ago

ಚಾ.ನಗರ ಆಕ್ಸಿಜನ್‌ ದುರಂತ : ಸಂತ್ರಸ್ಥರಿಗೆ ಕೊನೆಗೂ ಒಲಿದ ಸರ್ಕಾರಿ ನೌಕರಿ

ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…

13 hours ago

ಏ.20, 21 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…

14 hours ago