ದೇಶ- ವಿದೇಶ

ದಿಲ್ಲಿ ಕಾರು ಬಾಂಬ್‌ ಸ್ಪೋಟ ಪ್ರಕರಣ : 9mmನ ಕಾಟ್ರ್ರಿಡ್ಜ್ ಪತ್ತೆ ; ಭಯೋತ್ಪಾದಕ ನಂಟು ದೃಢ..?

ಹೊಸದಿಲ್ಲಿ : ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆಯ ಮೆಟ್ರೊ ನಿಲ್ದಾಣ ಸಮೀಪ ಕಾರ್ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಸ್ಥಳೀಯ ಪೊಲೀಸರು ಘಟನಾ ಸ್ಥಳದಲ್ಲಿ 9 ಎಂಎಂನ ಮೂರು ಕಾಟ್ರ್ರಿಡ್ಜ್ ಗಳನ್ನು ವಶಪಡಿಸಿಕೊಂಡಿದ್ದಾರೆ.

ಅಧಿಕಾರಿಗಳ ಪ್ರಕಾರ, ಎರಡು ಕಾಟ್ರ್ರಿಜ್‍ಗಳು ಜೀವಂತ ಗುಂಡುಗಳಾಗಿದ್ದರೆ, ಮೂರನೆಯದು ಖಾಲಿ ಶೆಲ್ ಆಗಿದೆ. 9 ಎಂಎಂ ಮದ್ದುಗುಂಡುಗಳನ್ನು ಸಾಮಾನ್ಯವಾಗಿ ಭದ್ರತಾ ಪಡೆಗಳು ಮತ್ತು ಪೊಲೀಸ್ ಸಿಬ್ಬಂದಿ ಬಳಸುವುದರಿಂದ ಈ ಆವಿಷ್ಕಾರ ಮಹತ್ವದ್ದಾಗಿದೆ. ಆದಾಗ್ಯೂ, ಸ್ಥಳದಲ್ಲಿ ಯಾವುದೇ ಪಿಸ್ತೂಲ್ ಅಥವಾ ಶಸ್ತ್ರಾಸ್ತ್ರದ ಭಾಗ ಕಂಡುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದು, ಗುಂಡುಗಳು ಅಲ್ಲಿಗೆ ಹೇಗೆ ಬಂದವು ಎಂಬ ಪ್ರಶ್ನೆಗಳು ಎದ್ದಿವೆ.

ನವೆಂಬರ್ 10ರಂದು ಪ್ರಮುಖ ಶಂಕಿತ ಡಾ. ಉಮರ್ ನಬಿ ಚಲಾಯಿಸುತ್ತಿದ್ದ ಹುಂಡೈ ಐ20 ಕಾರಿನ ಸಂಪೂರ್ಣ ಚಲನೆಯನ್ನು ಪತ್ತೆಹಚ್ಚುವ 43 ಸಿಸಿಟಿವಿ ಚಿತ್ರಗಳು ಲಭ್ಯವಾಗಿವೆ. ಸ್ಫೋಟದ ಸ್ಥಳದಿಂದ ತೆಗೆದ ಡಿಎನ್‍ಎ ಉಮರ್‍ನ ತಾಯಿಯಿಂದ ತೆಗೆದ ಮಾದರಿಗಳಿಗೆ ಹೊಂದಿಕೆಯಾದ ಬಳಿಕ, ದಾಳಿಗೆ ಉಮರ್‍ನ ಡಿಎನ್‍ಎಯನ್ನು ಔಪಚಾರಿಕವಾಗಿ ಜೋಡಿಸಿದ ನಂತರ ಅಧಿಕಾರಿಗಳು ಅವನ ಗುರುತನ್ನು ದೃಢಪಡಿಸಿದ್ದಾರೆ.

ಇದನ್ನು ಓದಿ: ದೆಹಲಿ ಕಾರು ಬಾಂಬ್‌ ಸ್ಫೋಟ ಘಟನೆ ಖಂಡಿಸಿ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ

ಈ ಹಿಂದೆಂದೂ ನೋಡಿರದ ಚಿತ್ರಗಳು, ಸ್ಫೋಟಕ್ಕೆ ಕೆಲವೇ ಗಂಟೆಗಳ ಮೊದಲು ಫರೀದಾಬಾದ್ ವಿಶ್ವವಿದ್ಯಾಲಯದ ಕ್ಯಾಂಪಸ್‍ನಿಂದ ಹಳೆ ದೆಹಲಿಯವರೆಗೆ ಉಮರ್‍ನ ಚಲನವಲನಗಳನ್ನು ಖಚಿತಪಡಿಸಿವೆ. ದೆಹಲಿ-ಎನ್‍ಸಿಆರ್‍ನ ಅನೇಕ ಜಿಲ್ಲೆಗಳು, ಹೆದ್ದಾರಿಗಳು ಮತ್ತು ಪ್ರಮುಖ ಚೆಕ್‍ಪೋಸ್ಟ್‍ಗಳಾದ್ಯಂತ 5,000ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳನ್ನು ಬಳಸಿಕೊಂಡು ಅಧಿಕಾರಿಗಳು ಈ ಮಾರ್ಗವನ್ನು ಒಟ್ಟುಗೂಡಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕೆಂಪುಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1ರ ಬಳಿ ಸಂಭವಿಸಿದ ಸ್ಫೋಟಕ್ಕೆ ಕಾರಣವಾದ ಅಮೋನಿಯಂ ನೈಟ್ರೇಟ್‍ಗಿಂತ ಹೆಚ್ಚು ಶಕ್ತಿಶಾಲಿಯಾದ ಕನಿಷ್ಠ ಒಂದು ಮಾದರಿಯನ್ನು ವಿಧಿವಿಜ್ಞಾನ ತಂಡಗಳು ಸ್ಥಳದಿಂದ ಗುರುತಿಸಿವೆ.

ಕಾಕಾಟ್ರ್ರಿಡ್ಜ್ ಗಳು, ಜೀವಂತ ಗುಂಡುಗಳು ಮತ್ತು ಬಳಸಿದ ಸ್ಫೋಟಕಗಳ ಅವಶೇಷಗಳು ಸೇರಿದಂತೆ 40ಕ್ಕೂ ಹೆಚ್ಚು ಪುರಾವೆಗಳನ್ನು ಎಫ್‍ಎಸ್‍ಎಲ್ ತಂಡ ಸ್ಥಳದಿಂದ ಸಂಗ್ರಹಿಸಿದೆ. ವಿಧಿವಿಜ್ಞಾನ ವಿಶ್ಲೇಷಣೆಯು ಕಾರಿನಲ್ಲಿ ಸರಿಸುಮಾರು 30ರಿಂದ 40 ಕೆಜಿ ಅಮೋನಿಯಂ ನೈಟ್ರೇಟ್ ಇರುವುದನ್ನು ಸೂಚಿಸಿದೆ, ಈ ಪ್ರಮಾಣವು ಸ್ಫೋಟದ ಪ್ರಮಾಣ ಮತ್ತು ಬಲಕ್ಕೆ ಅನುಗುಣವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಜ್ಯ ಸರ್ಕಾರ ಪಾಪರ್‌ ಆಗಿದೆ: ವಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಪ್ರತಿ ಇಲಾಖೆಯಲ್ಲಿಯೂ ನಡೆಯುತ್ತಿದೆ. ಸರ್ಕಾರ ದಿವಾಳಿಯಾಗಿದ್ದು, ಲೂಟಿ ಮಾಡುವುದನ್ನೇ ಕಾಯಕವನ್ನಾಗಿ ಮಾಡಿಕೊಂಡಿದೆ ಎಂದು ವಿಪಕ್ಷ…

16 mins ago

ಚಾಮರಾಜನಗರ| ಫ್ಲೋರೈಡ್‌ ಮಿಶ್ರಿತ ನೀರು ಸೇವಿಸಿ ಕಿಡ್ನಿ ಕಳೆದುಕೊಂಡ 47 ಜನ

ಚಾಮರಾಜನಗರ: ಫ್ಲೋರೈಡ್‌ ಮಿಶ್ರಿತ ನೀರು ಕುಡಿದು 47 ಮಂದಿ ಕಿಡ್ನಿ ಕಳೆದುಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹನೂರು…

26 mins ago

ಹುಣಸೂರು: ಬಾರ್‌ ತೆರೆಯಲು ಅವಕಾಶ ನೀಡದಂತೆ ಗ್ರಾಮಸ್ಥರ ಆಗ್ರಹ

ಹುಣಸೂರು: ತಾಲ್ಲೂಕಿನ ಬೋಳನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸರಾಮನಹಳ್ಳಿ ಗ್ರಾಮದಲ್ಲಿ ಬಾರ್‌ ತೆರೆಯಲು ಅನುಮತಿ ನೀಡದಂತೆ ಒತ್ತಾಯಿಸಿ ಗ್ರಾಮಸ್ಥರು ಪಿಡಿಓಗೆ…

1 hour ago

ಪೆನ್ನಾರ್‌ ನದಿ ಜಲವಿವಾದ: ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಆದೇಶ

ನವದೆಹಲಿ: ಕರ್ನಾಟಕ ಹಾಗೂ ತಮಿಳುನಾಡು ನಡುವಿನ ದಕ್ಷಿಣ ಪಿನಾಕಿನಿ ಎಂದೇ ಹೆಸರುವಾಸಿಯಾಗಿರುವ ಪೆನ್ನಾರ್‌ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಪತ್ನಿ, ಪುತ್ರನಿಗೆ ಎಸ್‌ಐಟಿ ಬುಲಾವ್‌

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ತನಿಖೆ ಚುರುಕುಗೊಂಡಿದ್ದು, ವಿಶೇಷ ತನಿಖಾ ತಂಡವು ಪತ್ನಿ ಹಾಗೂ ಮಗನನ್ನು…

3 hours ago

ಬೈಕ್‌ ಟ್ಯಾಕ್ಸಿಗೆ ಒಪ್ಪಿಗೆ: ಸುಪ್ರೀಂಕೋರ್ಟ್‌ ಮೊರೆ ಹೋಗಲಿದೆ ಸರ್ಕಾರ?

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಅಪ್ಲಿಕೇಶನ್‌ ಆಧಾರಿತ ಟ್ಯಾಕ್ಸಿ ನೀಡುವ ಕಂಪನಿಗಳ ನಡುವೆ ಬೈಕ್‌ ಟ್ಯಾಕ್ಸಿ ವಿಚಾರಕ್ಕೆ ಜಟಾಪಟಿ ನಡೆದಿತ್ತು.…

3 hours ago