ದೇಶ- ವಿದೇಶ

ದಿಲ್ಲಿ ಕಾರು ಬಾಂಬ್‌ ಸ್ಪೋಟ ಪ್ರಕರಣ : 9mmನ ಕಾಟ್ರ್ರಿಡ್ಜ್ ಪತ್ತೆ ; ಭಯೋತ್ಪಾದಕ ನಂಟು ದೃಢ..?

ಹೊಸದಿಲ್ಲಿ : ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆಯ ಮೆಟ್ರೊ ನಿಲ್ದಾಣ ಸಮೀಪ ಕಾರ್ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಸ್ಥಳೀಯ ಪೊಲೀಸರು ಘಟನಾ ಸ್ಥಳದಲ್ಲಿ 9 ಎಂಎಂನ ಮೂರು ಕಾಟ್ರ್ರಿಡ್ಜ್ ಗಳನ್ನು ವಶಪಡಿಸಿಕೊಂಡಿದ್ದಾರೆ.

ಅಧಿಕಾರಿಗಳ ಪ್ರಕಾರ, ಎರಡು ಕಾಟ್ರ್ರಿಜ್‍ಗಳು ಜೀವಂತ ಗುಂಡುಗಳಾಗಿದ್ದರೆ, ಮೂರನೆಯದು ಖಾಲಿ ಶೆಲ್ ಆಗಿದೆ. 9 ಎಂಎಂ ಮದ್ದುಗುಂಡುಗಳನ್ನು ಸಾಮಾನ್ಯವಾಗಿ ಭದ್ರತಾ ಪಡೆಗಳು ಮತ್ತು ಪೊಲೀಸ್ ಸಿಬ್ಬಂದಿ ಬಳಸುವುದರಿಂದ ಈ ಆವಿಷ್ಕಾರ ಮಹತ್ವದ್ದಾಗಿದೆ. ಆದಾಗ್ಯೂ, ಸ್ಥಳದಲ್ಲಿ ಯಾವುದೇ ಪಿಸ್ತೂಲ್ ಅಥವಾ ಶಸ್ತ್ರಾಸ್ತ್ರದ ಭಾಗ ಕಂಡುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದು, ಗುಂಡುಗಳು ಅಲ್ಲಿಗೆ ಹೇಗೆ ಬಂದವು ಎಂಬ ಪ್ರಶ್ನೆಗಳು ಎದ್ದಿವೆ.

ನವೆಂಬರ್ 10ರಂದು ಪ್ರಮುಖ ಶಂಕಿತ ಡಾ. ಉಮರ್ ನಬಿ ಚಲಾಯಿಸುತ್ತಿದ್ದ ಹುಂಡೈ ಐ20 ಕಾರಿನ ಸಂಪೂರ್ಣ ಚಲನೆಯನ್ನು ಪತ್ತೆಹಚ್ಚುವ 43 ಸಿಸಿಟಿವಿ ಚಿತ್ರಗಳು ಲಭ್ಯವಾಗಿವೆ. ಸ್ಫೋಟದ ಸ್ಥಳದಿಂದ ತೆಗೆದ ಡಿಎನ್‍ಎ ಉಮರ್‍ನ ತಾಯಿಯಿಂದ ತೆಗೆದ ಮಾದರಿಗಳಿಗೆ ಹೊಂದಿಕೆಯಾದ ಬಳಿಕ, ದಾಳಿಗೆ ಉಮರ್‍ನ ಡಿಎನ್‍ಎಯನ್ನು ಔಪಚಾರಿಕವಾಗಿ ಜೋಡಿಸಿದ ನಂತರ ಅಧಿಕಾರಿಗಳು ಅವನ ಗುರುತನ್ನು ದೃಢಪಡಿಸಿದ್ದಾರೆ.

ಇದನ್ನು ಓದಿ: ದೆಹಲಿ ಕಾರು ಬಾಂಬ್‌ ಸ್ಫೋಟ ಘಟನೆ ಖಂಡಿಸಿ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ

ಈ ಹಿಂದೆಂದೂ ನೋಡಿರದ ಚಿತ್ರಗಳು, ಸ್ಫೋಟಕ್ಕೆ ಕೆಲವೇ ಗಂಟೆಗಳ ಮೊದಲು ಫರೀದಾಬಾದ್ ವಿಶ್ವವಿದ್ಯಾಲಯದ ಕ್ಯಾಂಪಸ್‍ನಿಂದ ಹಳೆ ದೆಹಲಿಯವರೆಗೆ ಉಮರ್‍ನ ಚಲನವಲನಗಳನ್ನು ಖಚಿತಪಡಿಸಿವೆ. ದೆಹಲಿ-ಎನ್‍ಸಿಆರ್‍ನ ಅನೇಕ ಜಿಲ್ಲೆಗಳು, ಹೆದ್ದಾರಿಗಳು ಮತ್ತು ಪ್ರಮುಖ ಚೆಕ್‍ಪೋಸ್ಟ್‍ಗಳಾದ್ಯಂತ 5,000ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳನ್ನು ಬಳಸಿಕೊಂಡು ಅಧಿಕಾರಿಗಳು ಈ ಮಾರ್ಗವನ್ನು ಒಟ್ಟುಗೂಡಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕೆಂಪುಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1ರ ಬಳಿ ಸಂಭವಿಸಿದ ಸ್ಫೋಟಕ್ಕೆ ಕಾರಣವಾದ ಅಮೋನಿಯಂ ನೈಟ್ರೇಟ್‍ಗಿಂತ ಹೆಚ್ಚು ಶಕ್ತಿಶಾಲಿಯಾದ ಕನಿಷ್ಠ ಒಂದು ಮಾದರಿಯನ್ನು ವಿಧಿವಿಜ್ಞಾನ ತಂಡಗಳು ಸ್ಥಳದಿಂದ ಗುರುತಿಸಿವೆ.

ಕಾಕಾಟ್ರ್ರಿಡ್ಜ್ ಗಳು, ಜೀವಂತ ಗುಂಡುಗಳು ಮತ್ತು ಬಳಸಿದ ಸ್ಫೋಟಕಗಳ ಅವಶೇಷಗಳು ಸೇರಿದಂತೆ 40ಕ್ಕೂ ಹೆಚ್ಚು ಪುರಾವೆಗಳನ್ನು ಎಫ್‍ಎಸ್‍ಎಲ್ ತಂಡ ಸ್ಥಳದಿಂದ ಸಂಗ್ರಹಿಸಿದೆ. ವಿಧಿವಿಜ್ಞಾನ ವಿಶ್ಲೇಷಣೆಯು ಕಾರಿನಲ್ಲಿ ಸರಿಸುಮಾರು 30ರಿಂದ 40 ಕೆಜಿ ಅಮೋನಿಯಂ ನೈಟ್ರೇಟ್ ಇರುವುದನ್ನು ಸೂಚಿಸಿದೆ, ಈ ಪ್ರಮಾಣವು ಸ್ಫೋಟದ ಪ್ರಮಾಣ ಮತ್ತು ಬಲಕ್ಕೆ ಅನುಗುಣವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ವಸತಿ ರಹಿತರಿಗೆ 5 ಲಕ್ಷ ನಿವೇಶನ : ಸಿಎಂ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದ…

4 hours ago

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

6 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

8 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

8 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

14 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

14 hours ago