ದೇಶ- ವಿದೇಶ

ದಿಲ್ಲಿ ಕಾರು ಬಾಂಬ್‌ ಸ್ಪೋಟ ಪ್ರಕರಣ : 9mmನ ಕಾಟ್ರ್ರಿಡ್ಜ್ ಪತ್ತೆ ; ಭಯೋತ್ಪಾದಕ ನಂಟು ದೃಢ..?

ಹೊಸದಿಲ್ಲಿ : ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆಯ ಮೆಟ್ರೊ ನಿಲ್ದಾಣ ಸಮೀಪ ಕಾರ್ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಸ್ಥಳೀಯ ಪೊಲೀಸರು ಘಟನಾ ಸ್ಥಳದಲ್ಲಿ 9 ಎಂಎಂನ ಮೂರು ಕಾಟ್ರ್ರಿಡ್ಜ್ ಗಳನ್ನು ವಶಪಡಿಸಿಕೊಂಡಿದ್ದಾರೆ.

ಅಧಿಕಾರಿಗಳ ಪ್ರಕಾರ, ಎರಡು ಕಾಟ್ರ್ರಿಜ್‍ಗಳು ಜೀವಂತ ಗುಂಡುಗಳಾಗಿದ್ದರೆ, ಮೂರನೆಯದು ಖಾಲಿ ಶೆಲ್ ಆಗಿದೆ. 9 ಎಂಎಂ ಮದ್ದುಗುಂಡುಗಳನ್ನು ಸಾಮಾನ್ಯವಾಗಿ ಭದ್ರತಾ ಪಡೆಗಳು ಮತ್ತು ಪೊಲೀಸ್ ಸಿಬ್ಬಂದಿ ಬಳಸುವುದರಿಂದ ಈ ಆವಿಷ್ಕಾರ ಮಹತ್ವದ್ದಾಗಿದೆ. ಆದಾಗ್ಯೂ, ಸ್ಥಳದಲ್ಲಿ ಯಾವುದೇ ಪಿಸ್ತೂಲ್ ಅಥವಾ ಶಸ್ತ್ರಾಸ್ತ್ರದ ಭಾಗ ಕಂಡುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದು, ಗುಂಡುಗಳು ಅಲ್ಲಿಗೆ ಹೇಗೆ ಬಂದವು ಎಂಬ ಪ್ರಶ್ನೆಗಳು ಎದ್ದಿವೆ.

ನವೆಂಬರ್ 10ರಂದು ಪ್ರಮುಖ ಶಂಕಿತ ಡಾ. ಉಮರ್ ನಬಿ ಚಲಾಯಿಸುತ್ತಿದ್ದ ಹುಂಡೈ ಐ20 ಕಾರಿನ ಸಂಪೂರ್ಣ ಚಲನೆಯನ್ನು ಪತ್ತೆಹಚ್ಚುವ 43 ಸಿಸಿಟಿವಿ ಚಿತ್ರಗಳು ಲಭ್ಯವಾಗಿವೆ. ಸ್ಫೋಟದ ಸ್ಥಳದಿಂದ ತೆಗೆದ ಡಿಎನ್‍ಎ ಉಮರ್‍ನ ತಾಯಿಯಿಂದ ತೆಗೆದ ಮಾದರಿಗಳಿಗೆ ಹೊಂದಿಕೆಯಾದ ಬಳಿಕ, ದಾಳಿಗೆ ಉಮರ್‍ನ ಡಿಎನ್‍ಎಯನ್ನು ಔಪಚಾರಿಕವಾಗಿ ಜೋಡಿಸಿದ ನಂತರ ಅಧಿಕಾರಿಗಳು ಅವನ ಗುರುತನ್ನು ದೃಢಪಡಿಸಿದ್ದಾರೆ.

ಇದನ್ನು ಓದಿ: ದೆಹಲಿ ಕಾರು ಬಾಂಬ್‌ ಸ್ಫೋಟ ಘಟನೆ ಖಂಡಿಸಿ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ

ಈ ಹಿಂದೆಂದೂ ನೋಡಿರದ ಚಿತ್ರಗಳು, ಸ್ಫೋಟಕ್ಕೆ ಕೆಲವೇ ಗಂಟೆಗಳ ಮೊದಲು ಫರೀದಾಬಾದ್ ವಿಶ್ವವಿದ್ಯಾಲಯದ ಕ್ಯಾಂಪಸ್‍ನಿಂದ ಹಳೆ ದೆಹಲಿಯವರೆಗೆ ಉಮರ್‍ನ ಚಲನವಲನಗಳನ್ನು ಖಚಿತಪಡಿಸಿವೆ. ದೆಹಲಿ-ಎನ್‍ಸಿಆರ್‍ನ ಅನೇಕ ಜಿಲ್ಲೆಗಳು, ಹೆದ್ದಾರಿಗಳು ಮತ್ತು ಪ್ರಮುಖ ಚೆಕ್‍ಪೋಸ್ಟ್‍ಗಳಾದ್ಯಂತ 5,000ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳನ್ನು ಬಳಸಿಕೊಂಡು ಅಧಿಕಾರಿಗಳು ಈ ಮಾರ್ಗವನ್ನು ಒಟ್ಟುಗೂಡಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕೆಂಪುಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1ರ ಬಳಿ ಸಂಭವಿಸಿದ ಸ್ಫೋಟಕ್ಕೆ ಕಾರಣವಾದ ಅಮೋನಿಯಂ ನೈಟ್ರೇಟ್‍ಗಿಂತ ಹೆಚ್ಚು ಶಕ್ತಿಶಾಲಿಯಾದ ಕನಿಷ್ಠ ಒಂದು ಮಾದರಿಯನ್ನು ವಿಧಿವಿಜ್ಞಾನ ತಂಡಗಳು ಸ್ಥಳದಿಂದ ಗುರುತಿಸಿವೆ.

ಕಾಕಾಟ್ರ್ರಿಡ್ಜ್ ಗಳು, ಜೀವಂತ ಗುಂಡುಗಳು ಮತ್ತು ಬಳಸಿದ ಸ್ಫೋಟಕಗಳ ಅವಶೇಷಗಳು ಸೇರಿದಂತೆ 40ಕ್ಕೂ ಹೆಚ್ಚು ಪುರಾವೆಗಳನ್ನು ಎಫ್‍ಎಸ್‍ಎಲ್ ತಂಡ ಸ್ಥಳದಿಂದ ಸಂಗ್ರಹಿಸಿದೆ. ವಿಧಿವಿಜ್ಞಾನ ವಿಶ್ಲೇಷಣೆಯು ಕಾರಿನಲ್ಲಿ ಸರಿಸುಮಾರು 30ರಿಂದ 40 ಕೆಜಿ ಅಮೋನಿಯಂ ನೈಟ್ರೇಟ್ ಇರುವುದನ್ನು ಸೂಚಿಸಿದೆ, ಈ ಪ್ರಮಾಣವು ಸ್ಫೋಟದ ಪ್ರಮಾಣ ಮತ್ತು ಬಲಕ್ಕೆ ಅನುಗುಣವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

7 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

11 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

11 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

12 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

16 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

16 hours ago