ದೇಶ- ವಿದೇಶ

ದಿಲ್ಲಿ ಕಾರು ಸ್ಛೋಟ ಪ್ರಕರಣ : ಉ.ಪ್ರ. ಜಮ್ಮು-ಕಾಶ್ಮೀರ ಸೇರಿ ಹಲವೆಡೆ ಎನ್‌ಐಎ ದಾಳಿ

ಹೊಸದಿಲ್ಲಿ : ದಿಲ್ಲಿ ಕಾರು ಸ್ಛೋಟ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಸೋಮವಾರ ಜಮ್ಮು ಮತ್ತು ಕಾಶ್ಮೀರ ಹಾಗೂ ಉತ್ತರ ಪ್ರದೇಶದ ಹಲವು ಕಡೆಗಳಲ್ಲಿ ಕಾರ್ಯಾಚರಣೆ ನಡೆಸಿತು . ಈ ರಾಜ್ಯಗಳ ವಿವಿಧ ಜಿಲ್ಲೆಗಳಲ್ಲಿ ಪ್ರಕರಣದಲ್ಲಿ ಭಾಗಿಯಾದವರೊಂದಿಗೆ ಸಂಪರ್ಕ ಹೊಂದಿರುವ ಸ್ಥಳಗಳಲ್ಲಿ ಶಂಕಿತರಿಗಾಗಿ ಶೋಧ ನಡೆಸಲಾಯಿತು.

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಮತ್ತು ಶೋಪಿಯಾನ್ ಜಿಲ್ಲೆಗಳಲ್ಲಿ ಬಂಧಿತ ಆರೋಪಿಗಳು ಮತ್ತು ಅವರ ಸಹಚರರ ನಿವಾಸಗಳಲ್ಲಿ ಶೋಧ ಕಾರ್ಯ ನಡೆಯಿತು ಎಂದು ಮೂಲಗಳು ತಿಳಿಸಿವೆ. ನ. ೧೦ರಂದು ನಡೆದ ಭೀಕರ ಕಾರು ಸ್ಛೋಟದಲ್ಲಿ ೧೫ ಜನರು ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳನೇ ಆರೋಪಿ ಫರೀದಾಬಾದ್‌ನ ಧೌಜ್‌ನ ಸೋಯಾಬ್ ಎಂಬಾತನನ್ನು ಬಂಽಸಿದ ಕೆಲವು ದಿನಗಳ ನಂತರ ಎನ್‌ಐಎ ಈ ದಾಳಿ ನಡೆಸುತ್ತಿದೆ. ಭಯೋತ್ಪಾದಕ ಕೃತ್ಯಕ್ಕೆ ಸ್ವಲ್ಪ ಮೊದಲು ಸೋಯಾಬ್ ಎಂಬಾತ ಬಾಂಬರ್ ಉಮರ್ ಉನ್ ನಬಿಗೆ ಆಶ್ರಯ ನೀಡಿದ್ದ ಎನ್ನಲಾಗಿದೆ. ಉಮರ್‌ಗೆ ಆಶ್ರಯ ನೀಡಿದ್ದಲ್ಲದೆ ದಾಳಿಗೂ ಮುನ್ನ ಭಯೋತ್ಪಾದಕರ ಚಲನವಲನಕ್ಕೆ ಲಾಜಿಸ್ಟಿಕಲ್ ಬೆಂಬಲವನ್ನೂ ನೀಡಿದ್ದ ಎಂಬುದು ತಿಳಿದು ಬಂದಿದೆ.

ಇದನ್ನೂ ಓದಿ :-ದಿತ್ವಾ ಚಂಡಮಾರುತ : ಮೈಸೂರು, ಬೆಂಗಳೂರು ಸೇರಿದಂತೆ ವಿವಿಧೆಡೆ ಚಳಿ ಹೆಚ್ಚಳ

ನ.೨೦ರಂದು ತನಿಖಾ ತಂಡವು ಶಾಹೀನ್ ಸಯೀದ್ ಜೊತೆಗೆ ಪುಲ್ವಾಮಾದ ಡಾ.ಮುಜಮ್ಮಿಲ್ ಶಕೀಲ್ ಗನೈ, ಅನಂತನಾಗ್‌ನ ಡಾ.ಅದೀಲ್ ಅಹ್ಮದ್ ರಾಥರ್ ಮತ್ತು ಶೋಪಿಯಾನ್‌ನ ಮುಫ್ತಿ ಇರ್ಫಾನ್ ಅಹ್ಮದ್ ವಾಗೆ ಎಂಬವರನ್ನು ಬಂಽಸಿತ್ತು. ಪಟಿಯಾಲ ಹೌಸ್ ನ್ಯಾಯಾಲಯದಲ್ಲಿ ಜಿಲ್ಲಾ ಸೆಷನ್ಸ್ ನ್ಯಾಯಾಽಶರು ನೀಡಿದ ಆದೇಶದ ಮೇರೆಗೆ ಶ್ರೀನಗರದಲ್ಲಿ ಎನ್‌ಐಎ ಈ ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದೆ.

ಇದಕ್ಕೂ ಮೊದಲು ಎನ್‌ಐಎ, ಸ್ಛೋಟಕ್ಕೆ ಬಳಸಲಾದ ಕಾರನ್ನು ನೋಂದಾಯಿಸಲಾಗಿದ್ದ ಅಮೀರ್ ರಶೀದ್ ಅಲಿ ಮತ್ತು ಮಾರಕ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕನಿಗೆ ತಾಂತ್ರಿಕ ನೆರವು ನೀಡಿದ್ದ ಜಾಸಿರ್ ಬಿಲಾಲ್ ವಾನಿ ಅಲಿಯಾಸ್ ಡ್ಯಾನಿಶ್ ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿತ್ತು.

ಆಂದೋಲನ ಡೆಸ್ಕ್

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

3 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

4 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

5 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

7 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

10 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

10 hours ago