ಹೊಸದಿಲ್ಲಿ : ದಿಲ್ಲಿ ಕಾರು ಸ್ಛೋಟ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಸೋಮವಾರ ಜಮ್ಮು ಮತ್ತು ಕಾಶ್ಮೀರ ಹಾಗೂ ಉತ್ತರ ಪ್ರದೇಶದ ಹಲವು ಕಡೆಗಳಲ್ಲಿ ಕಾರ್ಯಾಚರಣೆ ನಡೆಸಿತು . ಈ ರಾಜ್ಯಗಳ ವಿವಿಧ ಜಿಲ್ಲೆಗಳಲ್ಲಿ ಪ್ರಕರಣದಲ್ಲಿ ಭಾಗಿಯಾದವರೊಂದಿಗೆ ಸಂಪರ್ಕ ಹೊಂದಿರುವ ಸ್ಥಳಗಳಲ್ಲಿ ಶಂಕಿತರಿಗಾಗಿ ಶೋಧ ನಡೆಸಲಾಯಿತು.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಮತ್ತು ಶೋಪಿಯಾನ್ ಜಿಲ್ಲೆಗಳಲ್ಲಿ ಬಂಧಿತ ಆರೋಪಿಗಳು ಮತ್ತು ಅವರ ಸಹಚರರ ನಿವಾಸಗಳಲ್ಲಿ ಶೋಧ ಕಾರ್ಯ ನಡೆಯಿತು ಎಂದು ಮೂಲಗಳು ತಿಳಿಸಿವೆ. ನ. ೧೦ರಂದು ನಡೆದ ಭೀಕರ ಕಾರು ಸ್ಛೋಟದಲ್ಲಿ ೧೫ ಜನರು ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳನೇ ಆರೋಪಿ ಫರೀದಾಬಾದ್ನ ಧೌಜ್ನ ಸೋಯಾಬ್ ಎಂಬಾತನನ್ನು ಬಂಽಸಿದ ಕೆಲವು ದಿನಗಳ ನಂತರ ಎನ್ಐಎ ಈ ದಾಳಿ ನಡೆಸುತ್ತಿದೆ. ಭಯೋತ್ಪಾದಕ ಕೃತ್ಯಕ್ಕೆ ಸ್ವಲ್ಪ ಮೊದಲು ಸೋಯಾಬ್ ಎಂಬಾತ ಬಾಂಬರ್ ಉಮರ್ ಉನ್ ನಬಿಗೆ ಆಶ್ರಯ ನೀಡಿದ್ದ ಎನ್ನಲಾಗಿದೆ. ಉಮರ್ಗೆ ಆಶ್ರಯ ನೀಡಿದ್ದಲ್ಲದೆ ದಾಳಿಗೂ ಮುನ್ನ ಭಯೋತ್ಪಾದಕರ ಚಲನವಲನಕ್ಕೆ ಲಾಜಿಸ್ಟಿಕಲ್ ಬೆಂಬಲವನ್ನೂ ನೀಡಿದ್ದ ಎಂಬುದು ತಿಳಿದು ಬಂದಿದೆ.
ಇದನ್ನೂ ಓದಿ :-ದಿತ್ವಾ ಚಂಡಮಾರುತ : ಮೈಸೂರು, ಬೆಂಗಳೂರು ಸೇರಿದಂತೆ ವಿವಿಧೆಡೆ ಚಳಿ ಹೆಚ್ಚಳ
ನ.೨೦ರಂದು ತನಿಖಾ ತಂಡವು ಶಾಹೀನ್ ಸಯೀದ್ ಜೊತೆಗೆ ಪುಲ್ವಾಮಾದ ಡಾ.ಮುಜಮ್ಮಿಲ್ ಶಕೀಲ್ ಗನೈ, ಅನಂತನಾಗ್ನ ಡಾ.ಅದೀಲ್ ಅಹ್ಮದ್ ರಾಥರ್ ಮತ್ತು ಶೋಪಿಯಾನ್ನ ಮುಫ್ತಿ ಇರ್ಫಾನ್ ಅಹ್ಮದ್ ವಾಗೆ ಎಂಬವರನ್ನು ಬಂಽಸಿತ್ತು. ಪಟಿಯಾಲ ಹೌಸ್ ನ್ಯಾಯಾಲಯದಲ್ಲಿ ಜಿಲ್ಲಾ ಸೆಷನ್ಸ್ ನ್ಯಾಯಾಽಶರು ನೀಡಿದ ಆದೇಶದ ಮೇರೆಗೆ ಶ್ರೀನಗರದಲ್ಲಿ ಎನ್ಐಎ ಈ ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದೆ.
ಇದಕ್ಕೂ ಮೊದಲು ಎನ್ಐಎ, ಸ್ಛೋಟಕ್ಕೆ ಬಳಸಲಾದ ಕಾರನ್ನು ನೋಂದಾಯಿಸಲಾಗಿದ್ದ ಅಮೀರ್ ರಶೀದ್ ಅಲಿ ಮತ್ತು ಮಾರಕ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕನಿಗೆ ತಾಂತ್ರಿಕ ನೆರವು ನೀಡಿದ್ದ ಜಾಸಿರ್ ಬಿಲಾಲ್ ವಾನಿ ಅಲಿಯಾಸ್ ಡ್ಯಾನಿಶ್ ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿತ್ತು.
ಮೈಸೂರು : ಕೆಎಸ್ಆರ್ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…
ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…
ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…
ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…
ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…