ಹೊಸದಿಲ್ಲಿ: ಕೇಂದ್ರ ಸರ್ಕಾರ ನೀಡಿದ್ದ ಭರವಸೆಗಳಾದ ಕನಿಷ್ಠ ಬೆಂಬಲ ಬೆಲೆ(ಎಂಎಸ್ಪಿ), ಕೃಷಿ ಸಾಲ ಮನ್ನಾ ಸೇರಿದಂತೆ ಇನ್ನಿತರ ಭರವಸೆಗಳನ್ನು ಈಡೇರಿಸುವಂತೆ ಆಗ್ರಹಿಸಿ ʼದೆಹಲಿ ಚಲೋʼ ಹೋರಾಟ ಕೈಗೊಂಡಿರುವ ರೈತರ ಮೇಲೆ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ.
ಈ ಮೂಲಕ ರೈತರು ದೆಹಲಿಗೆ ಹೋಗದಂತೆ ತಡೆಹಿಡಿಯಲಾಗಿದೆ. ಪಂಜಾಬ್ ಮತ್ತು ಹರಿಯಾಣ ರೈತರು ದೆಹಲಿ ಚಲೋಗೆ ಕರೆಕೊಟ್ಟಿದ್ದು, ದೆಹಲಿಯತ್ತ ಹೊರಟಿದ್ದರು. ಈ ವೇಳೆ ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭುಗಡಿಯಲ್ಲಿ ಪೊಲೀಸರು ರಸ್ತೆಗೆ ಬೃಹತ್ ಮುಳ್ಳು ಬೇಲಿಗಳನ್ನು ಹಾಕುವ ಮೂಲಕ ರೈತರನ್ನು ತಡೆದಿದ್ದಾರೆ. ಅದನ್ನು ಲೆಕ್ಕಿಸದೇ ಮುಳ್ಳುತಂತಿ ಭೇದಿಸಲು ಮುಂದಾದ ರೈತರುಗಳ ಮೇಲೆ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ.
ಪ್ರತಿಭಟನೆ ನಿರತ ಹಲವಾರು ರೈತ ಮುಖಂಡರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ ಕೇಂದ್ರ ಸರ್ಕಾರ ಇದರ ಬಗ್ಗೆ ಪ್ರತಿಕ್ರಿಯಿಸಿ ಸಂಧಾನದ ಬಾಗಿಲು ಮುಚ್ಚಿವೆ ಎಂದು ಹೇಳಿದೆ.
ಕೇಂದ್ರ ಸರ್ಕಾರ ಜಾರಿ ಮಾಡಿದ್ದ ಮೂರು ಕೃಷಿ ಕಾನೂನುಗಳನ್ನು ರದ್ದುಮಾಡುವಂತೆ ಹಾಗೂ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ 2020 ರಲ್ಲಿ ಸುಮಾರು ಒಂದು ವರ್ಷಗಳ ಕಾಲ ರೈತರು ಸತತ ಹೋರಾಟ ಮಾಡಿದ್ದರು.ಇದರ ಫಲವಾಗಿ ಕೇಂದ್ರ ಸರ್ಕಾರ ಆ ಕಾಯ್ದೆಗಳನ್ನು ವಾಪಸ್ ಪಡೆಯುವುದರ ಜೊತೆಗೆ ಕೃಷಿ ಸಾಲ ಮನ್ನಾ, ಎಂಎಸ್ಪಿ ಯ ಭರವಸೆಗಳನ್ನು ನೀಡಿತ್ತು.
ಈಗ ಮೂರು ವರ್ಷ ಕಳೆದರೂ ಕೇಂದ್ರ ಸರ್ಕಾರ ತಾನು ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿರುವುದರಿಂದ ರೈತರು ದೆಹಲಿ ಚಲೋಗೆ ಕರೆ ನೀಡಿದ್ದರು. ಆದರೆ ಈಗ ರೈತರನ್ನು ಶಂಭು ಗಡಿಯಲ್ಲಿ ಪೊಲೀಸರು ತಡೆದಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…