ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಅರವಿಂದ್ ಕೇಜ್ರಿವಾಲ್ ತಿಹಾರ್ ಜೈಲಿನಲ್ಲಿದ್ದರು. ಸುಪ್ರಿಂ ಕೋರ್ಟ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆ ನಡೆಸಬೇಕಿತ್ತು. ಅದಕ್ಕೂ ಮೊದಲೇ ಸಿಬಿಐ ಅರವಿಂದ್ ಕೇಜ್ರಿವಾಲ್ರನ್ನು ಬಂಧಿಸಿ ತನ್ನ ವಶಕ್ಕೆ ಪಡೆದುಕೊಂಡಿದೆ.
ಇಡಿ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ನ ಜಾಮೀನಿನ ವಿಚಾರಣೆಗೂ ಮುನ್ನ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಇಂದು ಸಂಜೆ ತಿಹಾರ್ ಜೈಲಿನಿಂದ ಬಂಧಿಸಿದೆ.
ಕೇಂದ್ರೀಯ ತನಿಖಾ ದಳ ಇಂದು ತಿಹಾರ್ ಜೈಲಿನಲ್ಲಿ ಕೇಜ್ರಿವಾಲ್ ಅವರನ್ನು ಪರೀಕ್ಷಿಸಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಹೇಳಿಕೆಯನ್ನು ದಾಖಲಿಸಿದೆ. ನಾಳೆ ಸಂಬಂಧಪಟ್ಟ ವಿಚಾರಣಾ ನ್ಯಾಯಾಲಯದ ಮುಂದೆ ಕೇಜ್ರಿವಾಲ್ರನ್ನು ಹಾಜರುಪಡಿಸಲು ಸಿಬಿಐ ಅನುಮತಿ ಪಡೆದಿದೆ. ಅವರನ್ನು ನಾಳೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.
ದೆಹಲಿ ಅಕ್ರಮ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ರನ್ನು ಕಳೆದ ಮಾರ್ಚ್.21ರಂದು ಇಡಿ ಬಂಧಿಸಿತ್ತು. ಲೋಕಸಭೆ ಚುನಾವಣೆಯ ಪ್ರಚಾರಕ್ಕಾಗಿ ಸುಪ್ರೀಂಕೋರ್ಟ್ ಜೂನ್.1ರವರೆಗೆ ಮಧ್ಯಂತರ ಜಾಮೀನು ನೀಡಿತ್ತು. ಜೂನ್.2ರಂದು ಅವರು ಮತ್ತೆ ನ್ಯಾಯಾಲಯದ ಮುಂದೆ ಶರಣಾಗಿದ್ದರು.
ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…
ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…
ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…
ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…
ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…
ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…