ದೇಶ- ವಿದೇಶ

ಜಾಮೀನು ವಿಚಾರಣೆಗೂ ಮೊದಲೇ ಸಿಬಿಐನಿಂದ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಬಂಧನ

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ತಿಹಾರ್‌ ಜೈಲಿನಲ್ಲಿದ್ದರು. ಸುಪ್ರಿಂ ಕೋರ್ಟ್‌ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆ ನಡೆಸಬೇಕಿತ್ತು. ಅದಕ್ಕೂ ಮೊದಲೇ ಸಿಬಿಐ ಅರವಿಂದ್‌ ಕೇಜ್ರಿವಾಲ್‌ರನ್ನು ಬಂಧಿಸಿ ತನ್ನ ವಶಕ್ಕೆ ಪಡೆದುಕೊಂಡಿದೆ.

ಇಡಿ ಮನಿ ಲಾಂಡರಿಂಗ್‌ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ಜಾಮೀನಿನ ವಿಚಾರಣೆಗೂ ಮುನ್ನ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್ ಅವರನ್ನು ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಇಂದು ಸಂಜೆ ತಿಹಾರ್‌ ಜೈಲಿನಿಂದ ಬಂಧಿಸಿದೆ.

ಕೇಂದ್ರೀಯ ತನಿಖಾ ದಳ ಇಂದು ತಿಹಾರ್‌ ಜೈಲಿನಲ್ಲಿ ಕೇಜ್ರಿವಾಲ್‌ ಅವರನ್ನು ಪರೀಕ್ಷಿಸಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಹೇಳಿಕೆಯನ್ನು ದಾಖಲಿಸಿದೆ. ನಾಳೆ ಸಂಬಂಧಪಟ್ಟ ವಿಚಾರಣಾ ನ್ಯಾಯಾಲಯದ ಮುಂದೆ ಕೇಜ್ರಿವಾಲ್‌ರನ್ನು ಹಾಜರುಪಡಿಸಲು ಸಿಬಿಐ ಅನುಮತಿ ಪಡೆದಿದೆ. ಅವರನ್ನು ನಾಳೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.

ದೆಹಲಿ ಅಕ್ರಮ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್‌ ಕೇಜ್ರಿವಾಲ್‌ರನ್ನು ಕಳೆದ ಮಾರ್ಚ್‌.21ರಂದು ಇಡಿ ಬಂಧಿಸಿತ್ತು. ಲೋಕಸಭೆ ಚುನಾವಣೆಯ ಪ್ರಚಾರಕ್ಕಾಗಿ ಸುಪ್ರೀಂಕೋರ್ಟ್‌ ಜೂನ್.‌1ರವರೆಗೆ ಮಧ್ಯಂತರ ಜಾಮೀನು ನೀಡಿತ್ತು. ಜೂನ್.‌2ರಂದು ಅವರು ಮತ್ತೆ ನ್ಯಾಯಾಲಯದ ಮುಂದೆ ಶರಣಾಗಿದ್ದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

5 hours ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

13 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

13 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

13 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

13 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

13 hours ago