ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿರುವ ರಾಜಕೀಯ ಚಟುವಟಿಕೆಗಳ ನಡುವೆ ನೂತನ ಸಿಎಂ ಆಗಿ ಆಯ್ಕೆಯಾದ ಆತಿಶಿ ಅವರು, ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಧನ್ಯವಾದ ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆತಿಶಿ ಅವರು, ನನ್ನ ರಾಜಕೀಯ ಗುರು ಅರವಿಂದ್ ಕೇಜ್ರಿವಾಲ್. ಅವರಿಂದಲೇ ನಾನು ಈ ಸ್ಥಾನಕ್ಕೆ ಏರಿದ್ದೇನೆ. ಮೊದಲು ನಾನು ನನ್ನ ಗುರು ಅರವಿಂದ್ ಕೇಜ್ರಿವಾಲ್ಗೆ ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ.
ಅವರು ನನ್ನ ಮೇಲೆ ನಂಬಿಕೆ ಇರಿಸಿ ಅಂತಹ ದೊಡ್ಡ ಜವಾಬ್ದಾರಿಯನ್ನು ನೀಡಿದ್ದಾರೆ. ಇದು ಕೇವಲ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಎಎಪಿಯಲ್ಲಿ ಮಾತ್ರ ನಡೆಯಲು ಸಾಧ್ಯ. ನಾನು ಸಾಮಾನ್ಯ ಕುಟುಂಬದಿಂದ ಬಂದ ಹೆಣ್ಣುಮಗಳಾಗಿದ್ದು, ನನಗೆ ಟೀಕೆಟ್ ನೀಡುವುದೇ ಕೂಡ ಕಷ್ಟವಾಗಿತ್ತು.
ಹೀಗಿರುವಾಗ ಅರವಿಂದ್ ಕೇಜ್ರಿವಾಲ್ ಅವರು ನನ್ನನ್ನು ನಂಬಿ ಸಿಎಂ ಜವಾಬ್ದಾರಿಯನ್ನು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ನನಗೆ ತುಂಬಾ ಸಂತೋಷವಾಗಿದೆ. ದೆಹಲಿಯ ಏಕೈಕ ಮುಖ್ಯಮಂತ್ರಿ ಎಂದರೆ ಅದು ಅರವಿಂದ್ ಕೇಜ್ರಿವಾಲ್ ಮಾತ್ರ ಎಂದು ಹೇಳಲು ಬಯಸುತ್ತೇನೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ನಂಜನಗೂಡು ತಾಲ್ಲೂಕು ಬಾಗೂರು ಅಣೆಕಟ್ಟೆ ದೊಡ್ಡ ಅಣೆಕಟ್ಟೆಯಾಗಿದೆ. ಹಿಂದೆ ಅನೇಕ ಹಳ್ಳಿಗಳಿಗೆ ಕೋಡಿ ತುಂಬಿ ಯಥೇಚ್ಛವಾಗಿ ಇದರಿಂದ ನೀರು ಹರಿದು…
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಇದೇ ಹಗರಣಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ…
ಸಾಂಸ್ಕೃತಿಕ ನಗರಿ, ಅರೆಮನೆ ನಗರಿ, ಸ್ವಚ್ಛನಗರಿ, ಹಿರಿಯ ನಾಗರಿಕರ ಸ್ವರ್ಗ ಎಂದೆಲ್ಲಾ ಹೆಸರುವಾಸಿಯಾಗಿರುವ ಮೈಸೂರಿನಲ್ಲೂ ಈಗಿನ ಕಾನೂನು ವ್ಯವಸ್ಥೆಯ ಬಗ್ಗೆ…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ದೇವರು, ಧರ್ಮ ಮತ್ತು ಪುರಾಣಗಳ ಗೊತ್ತಿಲ್ಲದ ಮತ್ತು ಅನುಮಾನಗೊಂಡ ಹಾಗೂ ಅರ್ಥವಾಗದ ವಿಷಯಗಳ…
ರಾಮನಾಥ ಎಸ್. ಹೆಚ್.ಕೆ.ದ್ವಾರಕಾನಾಥ್, ಕರ್ನಾಟಕ ರಂಗಭೂಮಿಗೆ ರಂಗಭೀಷ್ಮ ಬಿ.ವಿ.ಕಾರಂತರಿತ್ತ ಕೊಡುಗೆ. ಚಾಮರಾಜೇಂದ್ರ ದೃಶ್ಯ ಕಲಾ ಅಕಾಡೆಮಿಯಲ್ಲಿ ಓದುತ್ತಾ, ಬದುಕಿಗಾಗಿ ಬವಣೆಪಡುತ್ತಾ,…
ಶೇಷಾದ್ರಿ ಗಂಜೂರು ದೆಹಲಿಯ ಜಂತರ್ ಮಂತರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಪ್ರತಿಭಟನೆಯಲ್ಲಿ ಬಳಕೆ ಯಾದ ‘ಅಸಭ್ಯ ಭಾಷೆ’ ಅದರಲ್ಲೂ ಹುಡುಗಿಯರು…