ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆಯ 70 ವಿಧಾನಸಭಾ ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ. ಬೆಳಿಗ್ಗೆ 7 ರಿಂದ ಮತದಾನ ಆರಂಭವಾಗಿದೆ.
ದೆಹಲಿಗೆ ಇದು 8ನೆಯ ವಿಧಾನಸಭೆ ಚುನಾವಣೆಯಾಗಿದ್ದು, ಬಿಗಿ ಭದ್ರತೆಯಲ್ಲಿ ಮತ ಚಲಾವಣೆ ನಡೆಯುತ್ತಿದೆ.
ಸಿಎಂ ಅತಿಶಿ ವಿರುದ್ಧ ಕಣಕ್ಕಿಳಿದಿರುವ ಕಾಂಗ್ರೆಸ್ ಅಭ್ಯರ್ಥಿ ಅಲ್ಕಾ ಲಂಬಾ ಅವರು ಬೆಳಂಬೆಳಗ್ಗೆ ಮತ ಕೇಂದ್ರಕ್ಕೆ ಆಗಮಿಸಿ ಮತ ಚಲಾಯಿಸಿದರು. ಬಳಿಕ ಮಾತನಾಡಿದ ಅವರು, ದಿಲ್ಲಿ ಮತದಾರರು ಬದಲಾವಣೆ ಬಯಸಿದ್ದಾರೆ. ಖಂಡಿತ ಈ ಬಾರಿ ಬದಲಾವಣೆಯಾಗಿ ದಿಲ್ಲಿ ಅಭಿವೃದ್ಧಿಯತ್ತ ಸಾಗುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು.
ಗಣ್ಯರಿಂದ ಮತದಾನ: ರಾಷ್ಟ್ರಪತಿ ದ್ರೌಪದಿ ಮುರ್ಮು, ವಿಪಕ್ಷ ನಾಯಕ ರಾಹುಲ್ ಗಾಂಧಿ, ಬಿಜೆಪಿ ಸಂಸದೆ ಸುಷ್ಮ ಸ್ವರಾಜ್, ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, ಆಪ್ ನಾಯಕ ಮನೀಶ್ ಸಿಸೋಡಿಯಾ ಅವರು ಸೇರಿದಂತೆ ಇನ್ನಿತರರು ತಮಗೆ ನಿಗದಿ ಪಡಿಸಿದ ಕೇಂದ್ರಗಳಲ್ಲಿ ಮತ ಚಲಾವಣೆ ಮಾಡಿದರು.
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…