ನವದೆಹಲಿ: ನವದೆಹಲಿಯ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ಗೆ 8ನೇ ಚಾರ್ಜ್ ಶೀಟ್ ಸಲ್ಲಿಸಿರುವ ಇಡಿ(ಜಾರಿ ನಿರ್ದೇಶನಾಲಯ) ಇಡೀ ಆಮ್ ಆದ್ಮಿ ಪಕ್ಷವನ್ನೇ ಆರೋಪಿಯನ್ನಾಗಿ ದೂರಿದೆ.
ಅಬಕಾರಿ ನೀತಿ ಜಾರಿ ವೇಳೆ ಹಗರಣ ನಡೆದಿದೆ ಎನ್ನಲಾದ ಈ ಪ್ರಕರಣದಲ್ಲಿ ಜೈಲು ಸೇರಿ, ಜಾಮೀನಿನ ಮೇಲೆ ಹೊರ ಬಂದಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ.
ಇಡಿ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಅಬಕಾರಿ ನೀತಿಯಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಹಿತ ಇಡೀ ಆಮ್ಆದ್ಮಿ ಪಕ್ಷವನ್ನು ಆರೋಪಿಗಳು ಎಂದು ಪ್ರಸ್ತಾಪಿಸಿ ಪೂರಕ ಆರೋಪ ಪಟ್ಟಿ ಸಲ್ಲಿಸಿದ್ದಾರೆ.
ಮದ್ಯ ಮಾರಾಟಗಾರರಿಗೆ ಅನುಕೂಲವಾಗಲಿ ಎಂಬ ದಿಸೆಯಿಂದ ಸಿಎಂ ಅರವಿಂದ್ ಕೇಜ್ರಿವಾಲ್, ಡಿಸಿಎಂ ಮನೀಶ್ ಸಿಸೋಡಿಯಾ ಸೇರಿ ಹಲವು ನಾಯಕರು ಈ ಕಾನೂನನ್ನು ರೂಪಿಸಿದ್ದಾರೆ. ದಕ್ಷಿಣ ಭಾರತ ಹಲವು ವ್ಯಕ್ತಿಗಳು ಇದರ ಲಾಭ ಪಡೆದಿದ್ದು, ಲಾಭದ ಹಣದಲ್ಲಿ ಸ್ವಲ್ಪ ಭಾಗವನ್ನು ಎಎಪಿ ಪಕ್ಷಕ್ಕೆ ನೀಡಿದ್ದಾರೆ. ಬಂದ ಹಣವನ್ನು ಗೋವಾ ಚುನಾವಣೆಗೆ ಬಳಸಲಾಗಿದೆ ಎಂದು ಚಾರ್ಜ್ ಶೀಟ್ನಲ್ಲಿ ಉಲ್ಲೇಖಿಸಲಾಗಿದೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…