ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆ ಮುಕ್ತಾಯಗೊಳ್ಳುತ್ತಿದ್ದಂತೆ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟಗೊಂಡಿವೆ. ಅಚ್ಚರಿಯೆಂದರೆ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಬಹುತೇಕ ಸಮೀಕ್ಷೆಗಳು ಭವಿಷ್ಯ ನುಡಿದಿವೆ.
MATRIZE ಸಮೀಕ್ಷೆಯ ಪ್ರಕಾರ ಬಿಜೆಪಿ 35-40, ಆಪ್ 32-37, ಕಾಂಗ್ರೆಸ್ 1 ಸ್ಥಾನ ಗೆಲ್ಲಲಿದೆ ಎಂದು ಹೇಳಿದೆ. ಇನ್ನು ಜೆವಿಸಿ ಸಮೀಕ್ಷೆಯಲ್ಲಿ ಬಿಜೆಪಿ 39-45, ಆಪ್ 22-31, ಕಾಂಗ್ರೆಸ್ 2 ಸ್ಥಾನ ಗೆಲ್ಲಬಹುದು ಎಂದು ಹೇಳಿದೆ.
ಒಟ್ಟು 70 ಕ್ಷೇತ್ರಗಳಲ್ಲಿ 699 ಅಭ್ಯರ್ಥಿಗಳು ಕಣದಲ್ಲಿದ್ದು, ಅದೃಷ್ಟ ಪರೀಕ್ಷಿಸಿಕೊಳ್ಳುತ್ತಿದ್ದಾರೆ. ಇದೇ ಫೆಬ್ರವರಿ.8ರಂದು ಫಲಿತಾಂಶ ಹೊರಬೀಳಲಿದೆ.
ಒಂದು ವೇಳೆ ಸಮೀಕ್ಷೆಗಳ ಪ್ರಕಾರ ಬಿಜೆಪಿ ದೆಹಲಿಯ ಚುಕ್ಕಾಣಿ ಹಿಡಿದರೆ 27 ವರ್ಷದ ಬಳಿಕ ಗದ್ದುಗೆ ಏರಿದಂತಾಗುತ್ತದೆ.
ಸಮೀಕ್ಷೆ ಹೊರಬೀಳುತ್ತಿದ್ದಂತೆ ಬಿಜೆಪಿ ನಾಯಕರ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದ್ದು, ಆಪ್ ನಾಯಕರು ಎಕ್ಸಿಟ್ ಪೋಲ್ಗಳು ಸುಳ್ಳಾಗಲಿವೆ ಎಂದು ಹೇಳುತ್ತಿದ್ದಾರೆ.
ಈ ಎಲ್ಲಾ ಸಮೀಕ್ಷೆಗಳು ನಿಜವಾಗುತ್ತಾ ಅಥವಾ ಸುಳ್ಳಾಗುತ್ತಾ ಎಂಬುದು ಫೆಬ್ರವರಿ.8ರಂದು ಗೊತ್ತಾಗಲಿದೆ.
ಬೆಂಗಳೂರು: ಸುಮಾರು 1ಕೋಟಿ ರೂ. ವರೆಗಿನ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.…
ಬೆಂಗಳೂರು: ಬೇಲೂರು ತಾಲೂಕಿನ ಕೋಗೋಡು ಗ್ರಾಮದಲ್ಲಿ 45 ವರ್ಷದ ಮಹಿಳೆಯೊಬ್ಬರು ಕಾಡಾನೆ ದಾಳಿಯಿಂದ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ, ಈ…
ಬೆಂಗಳೂರು: ಜಲ ಸಂರಕ್ಷಣೆ ವಿಚಾರವಾಗಿ ರಾಜ್ಯದಲ್ಲಿ ಒಂದು ತಿಂಗಳುಗಳ ಕಾಲ ʼಜಲ ಸಂರಕ್ಷಣಾ ಅಭಿಯಾನʼ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿಕೆ…
ಬೆಂಗಳೂರು: ಸರ್ವಜ್ಞ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಯನ್ನು ಕ್ಷೇತ್ರದ ಶಾಸಕರಾದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಪರಿಶೀಲನೆ ನಡೆಸಿದರು.…
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಸ್ಥಾಪನೆಯಾಗಿರುವ 7 ವಿಶ್ವವಿದ್ಯಾಲಯಗಳನ್ನು ಮುಚ್ಚುವುದಾಗಿ ನಾವು ಎಲ್ಲಿಯೂ ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾಸಭೆಯಲ್ಲಿ…
ಬೆಂಗಳೂರು: ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿತ್ತಿರುವ ತಜ್ಞ ವೈದ್ಯರ ನಿವೃತ್ತಿ ವಯಸ್ಸನ್ನು…