ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆ ಮುಕ್ತಾಯಗೊಳ್ಳುತ್ತಿದ್ದಂತೆ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟಗೊಂಡಿವೆ. ಅಚ್ಚರಿಯೆಂದರೆ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಬಹುತೇಕ ಸಮೀಕ್ಷೆಗಳು ಭವಿಷ್ಯ ನುಡಿದಿವೆ.
MATRIZE ಸಮೀಕ್ಷೆಯ ಪ್ರಕಾರ ಬಿಜೆಪಿ 35-40, ಆಪ್ 32-37, ಕಾಂಗ್ರೆಸ್ 1 ಸ್ಥಾನ ಗೆಲ್ಲಲಿದೆ ಎಂದು ಹೇಳಿದೆ. ಇನ್ನು ಜೆವಿಸಿ ಸಮೀಕ್ಷೆಯಲ್ಲಿ ಬಿಜೆಪಿ 39-45, ಆಪ್ 22-31, ಕಾಂಗ್ರೆಸ್ 2 ಸ್ಥಾನ ಗೆಲ್ಲಬಹುದು ಎಂದು ಹೇಳಿದೆ.
ಒಟ್ಟು 70 ಕ್ಷೇತ್ರಗಳಲ್ಲಿ 699 ಅಭ್ಯರ್ಥಿಗಳು ಕಣದಲ್ಲಿದ್ದು, ಅದೃಷ್ಟ ಪರೀಕ್ಷಿಸಿಕೊಳ್ಳುತ್ತಿದ್ದಾರೆ. ಇದೇ ಫೆಬ್ರವರಿ.8ರಂದು ಫಲಿತಾಂಶ ಹೊರಬೀಳಲಿದೆ.
ಒಂದು ವೇಳೆ ಸಮೀಕ್ಷೆಗಳ ಪ್ರಕಾರ ಬಿಜೆಪಿ ದೆಹಲಿಯ ಚುಕ್ಕಾಣಿ ಹಿಡಿದರೆ 27 ವರ್ಷದ ಬಳಿಕ ಗದ್ದುಗೆ ಏರಿದಂತಾಗುತ್ತದೆ.
ಸಮೀಕ್ಷೆ ಹೊರಬೀಳುತ್ತಿದ್ದಂತೆ ಬಿಜೆಪಿ ನಾಯಕರ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದ್ದು, ಆಪ್ ನಾಯಕರು ಎಕ್ಸಿಟ್ ಪೋಲ್ಗಳು ಸುಳ್ಳಾಗಲಿವೆ ಎಂದು ಹೇಳುತ್ತಿದ್ದಾರೆ.
ಈ ಎಲ್ಲಾ ಸಮೀಕ್ಷೆಗಳು ನಿಜವಾಗುತ್ತಾ ಅಥವಾ ಸುಳ್ಳಾಗುತ್ತಾ ಎಂಬುದು ಫೆಬ್ರವರಿ.8ರಂದು ಗೊತ್ತಾಗಲಿದೆ.
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…
ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…
ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…
ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…
ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…
ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…