ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಕೇಂದ್ರ ಗೃಹ ಸಚಿವಾಲಯ ಬಿಗ್ ಶಾಕ್ ನೀಡಿದ್ದು, ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದೆ.
ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಒಳಪಡಿಸಲು ಕೇಂದ್ರ ಗೃಹ ಸಚಿವಾಲಯ ಇಡಿಗೆ ಅನುಮತಿ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೇಂದ್ರ ತನಿಖಾ ಸಂಸ್ಥೆಯು 56 ವರ್ಷದ ರಾಜಕಾರಣಿಯ ವಿರುದ್ಧ ಕಳೆದ ವರ್ಷ ಮಾರ್ಚ್ನಲ್ಲಿ ಬಂಧಿಸಿದ ನಂತರ ಅವರ ವಿರುದ್ಧ ವಿಶೇಷ ಹಣ ವರ್ಗಾವಣೆ ತಡೆ ಕಾಯ್ದೆ ನ್ಯಾಯಾಲಯದ ಮುಂದೆ ಆರೋಪಪಟ್ಟಿ ಸಲ್ಲಿಸಿದೆ.
ಫೆಬ್ರವರಿ.5ರಂದು ನಿಗದಿಯಾಗಿರುವ ದೆಹಲಿ ವಿಧಾನಸಭೆ ಚುನಾವಣೆಗೂ ಮುನ್ನ ಈ ಬೆಳವಣಿಗೆ ನಡೆದಿದೆ.
ಇನ್ನು ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಅಬಕಾರಿ ಹಗರಣದ ಪ್ರಮುಖ ಆರೋಪಿ ಹಾಗೂ ಪ್ರಮುಖ ಸಂಚುಕೋರ ಎಂದು ಇಡಿ ಕರೆದಿದೆ.
ಇದರ ಜೊತೆಗೆ ದೆಹಲಿ ಸರ್ಕಾರದ ಸಚಿವರು, ಎಎಪಿ ನಾಯಕರು ಮತ್ತು ಇತರರೊಂದಿಗೆ ಕೇಜ್ರಿವಾಲ್ ಅವರು ಶಾಮೀಲಾಗಿದ್ದಾರೆ ಎಂದು ಇಡಿ ಆರೋಪಿಸಿದೆ.
ಒಟ್ಟಾರೆಯಾಗಿ ದೆಹಲಿ ಚುನಾವಣೆಗೂ ಮುನ್ನವೇ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಕೇಂದ್ರ ಗೃಹ ಸಚಿವಾಲಯ ಬಿಗ್ ಶಾಕ್ ನೀಡಿದ್ದು, ಇಡಿ ಅಧಿಕಾರಿಗಳು ಈ ವಾರದಲ್ಲೇ ನೋಟಿಸ್ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ. ಒಂದು ವೇಳೆ ಇಡಿ ಅಧಿಕಾರಿಗಳ ತನಿಖೆಯಿಂದ ಕೇಜ್ರಿವಾಲ್ ವಿರುದ್ಧದ ಆರೋಪ ಸಾಬೀತಾದರೆ, ಚುನಾವಣೆಯ ಮೇಲೆ ಭಾರೀ ಪರಿಣಾಮ ಬೀರಲಿದೆ ಎನ್ನಲಾಗುತ್ತಿದೆ.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…