ದೇಶ- ವಿದೇಶ

ಸಿಖ್‌ ವಿರೋಧಿ ದಂಗೆ| ಸಜ್ಜನ್‌ ಕುಮಾರ್‌ಗೆ ಜೀವಾವಧಿ ಶಿಕ್ಷೆ: ದೆಹಲಿ ಹೈಕೋರ್ಟ್‌

ನವದೆಹಲಿ: 1984ರಲ್ಲಿ ನಡೆದ ಸಿಖ್‌ ವಿರೋಧಿ ದಂಗೆಗೆ ಸಂಬಂಧಿಸಿದಂತೆ ಹತ್ಯೆ ಪ್ರಕರಣವೊಂದರ ಅಪರಾಧಿ ಸಜ್ಜನ್‌ ಕುಮಾರ್‌ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ ಎಂದು ದೆಹಲಿ ಹೈಕೋರ್ಟ್‌ ತೀರ್ಪು ಪ್ರಕಟಿಸಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು(ಫೆಬ್ರವರಿ.25) ದೆಹಲಿಯ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಅಪರಾಧಿ ಸಜ್ಜನ್‌ ಕುಮಾರ್‌ಗೆ ಶಿಕ್ಷೆ ನೀಡುವ ಬಗ್ಗೆ ಕಾಯ್ದಿರಿಸಿದ್ದ ತೀರ್ಪನ್ನು ವಿಚಾರಣೆ ನಡೆಸಿ ಜೀವಾವಧಿ ಶಿಕ್ಷೆ ನೀಡಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ.

ಏನಿದು ಪ್ರಕರಣ?

ಸಿಖ್‌ ವಿರೋಧಿ ದಂಗೆಯ ಸಂದರ್ಭದಲ್ಲಿ ಸರಸ್ವತಿ ವಿಹಾರ್‌ ಬಳ ಜಸ್ವಂತ್‌ ಸಿಂಗ್‌ ಹಾಗೂ ಅವರ ಮಗ ತರುಣ್‌ದೀಪ್‌ ಸಿಂಗ್‌ ಅವರನ್ಮು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಸಜ್ಜನ್‌ ಕುಮಾರ್‌ ಅವರಿಗೆ ಮರಣದಂಡನೆ ವಿಧಿಸುವಂತೆ ಜಸ್ವಂತ್‌ ಅವರ ಪತ್ನಿ ಕೋರಿ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ದೆಹಲಿ ನ್ಯಾಯಾಲಯವು ಫೆ.12 ರಂದು ಸಜ್ಜನ್‌ ಕುಮಾರ್‌ ಅವರು ಪ್ರಕರಣದ ಅಪರಾಧಿ ಎಂದು ಪರಿಗಣಿಸಿ ತೀರ್ಪು ನೀಡಿತ್ತು. ಆದರೆ ಆ ತೀರ್ಪಿನಲ್ಲಿ ಶಿಕ್ಷೆಯನ್ನು ಕಾಯ್ದಿರಿಸಿದ ಕೋರ್ಟ್‌ ತಿಹಾರ್‌ ಕೇಂದ್ರ ಕಾರಾಗೃಹದ ಅಧಿಕಾರಿಗಳಿಗೆ ಸಜ್ಜನ್‌ ಕುಮಾರ್‌ ಅವರ ಮಾನಸಿಕ ಸ್ಥಿತಿಯ ಬಗ್ಗೆ ವರದಿ ನೀಡುವಂತೆ ಸೂಚನೆ ನೀಡಿತ್ತು. ಅಧಿಕಾರಿಗಳು ವರದಿ ಸಲ್ಲಿಸಿದ ಬಳಿಕ ಇಂದು ಅಂತಿಮವಾಗಿ ಜೀವಾವಧಿ ಶಿಕ್ಷೆ ಘೋಷಣೆ ಮಾಡಿದೆ.

ಅರ್ಚನ ಎಸ್‌ ಎಸ್

Recent Posts

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

1 hour ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

2 hours ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

2 hours ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

2 hours ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

3 hours ago

ಶಿಕ್ಷಣದಿಂದ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯ: ಡಾ.ಕುಮಾರ

ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…

3 hours ago