ನವದೆಹಲಿ: 1984ರಲ್ಲಿ ನಡೆದ ಸಿಖ್ ವಿರೋಧಿ ದಂಗೆಗೆ ಸಂಬಂಧಿಸಿದಂತೆ ಹತ್ಯೆ ಪ್ರಕರಣವೊಂದರ ಅಪರಾಧಿ ಸಜ್ಜನ್ ಕುಮಾರ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ ಎಂದು ದೆಹಲಿ ಹೈಕೋರ್ಟ್ ತೀರ್ಪು ಪ್ರಕಟಿಸಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು(ಫೆಬ್ರವರಿ.25) ದೆಹಲಿಯ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಅಪರಾಧಿ ಸಜ್ಜನ್ ಕುಮಾರ್ಗೆ ಶಿಕ್ಷೆ ನೀಡುವ ಬಗ್ಗೆ ಕಾಯ್ದಿರಿಸಿದ್ದ ತೀರ್ಪನ್ನು ವಿಚಾರಣೆ ನಡೆಸಿ ಜೀವಾವಧಿ ಶಿಕ್ಷೆ ನೀಡಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ.
ಏನಿದು ಪ್ರಕರಣ?
ಸಿಖ್ ವಿರೋಧಿ ದಂಗೆಯ ಸಂದರ್ಭದಲ್ಲಿ ಸರಸ್ವತಿ ವಿಹಾರ್ ಬಳ ಜಸ್ವಂತ್ ಸಿಂಗ್ ಹಾಗೂ ಅವರ ಮಗ ತರುಣ್ದೀಪ್ ಸಿಂಗ್ ಅವರನ್ಮು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಸಜ್ಜನ್ ಕುಮಾರ್ ಅವರಿಗೆ ಮರಣದಂಡನೆ ವಿಧಿಸುವಂತೆ ಜಸ್ವಂತ್ ಅವರ ಪತ್ನಿ ಕೋರಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ದೆಹಲಿ ನ್ಯಾಯಾಲಯವು ಫೆ.12 ರಂದು ಸಜ್ಜನ್ ಕುಮಾರ್ ಅವರು ಪ್ರಕರಣದ ಅಪರಾಧಿ ಎಂದು ಪರಿಗಣಿಸಿ ತೀರ್ಪು ನೀಡಿತ್ತು. ಆದರೆ ಆ ತೀರ್ಪಿನಲ್ಲಿ ಶಿಕ್ಷೆಯನ್ನು ಕಾಯ್ದಿರಿಸಿದ ಕೋರ್ಟ್ ತಿಹಾರ್ ಕೇಂದ್ರ ಕಾರಾಗೃಹದ ಅಧಿಕಾರಿಗಳಿಗೆ ಸಜ್ಜನ್ ಕುಮಾರ್ ಅವರ ಮಾನಸಿಕ ಸ್ಥಿತಿಯ ಬಗ್ಗೆ ವರದಿ ನೀಡುವಂತೆ ಸೂಚನೆ ನೀಡಿತ್ತು. ಅಧಿಕಾರಿಗಳು ವರದಿ ಸಲ್ಲಿಸಿದ ಬಳಿಕ ಇಂದು ಅಂತಿಮವಾಗಿ ಜೀವಾವಧಿ ಶಿಕ್ಷೆ ಘೋಷಣೆ ಮಾಡಿದೆ.
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…