ದೇಶ- ವಿದೇಶ

ಕೋವಿಡ್ ಲಸಿಕೆ ಬಗ್ಗೆ ತಪ್ಪು ಮಾಹಿತಿ ನೀಡುವುದನ್ನು ನಿಲ್ಲಿಸುವಂತೆ ಬಾಬಾ ರಾಮದೇವ್‌ಗೆ ದೆಹಲಿ ಹೈಕೋರ್ಟ್ ತಾಕೀತು

ನವದೆಹಲಿ: ತಮ್ಮ ಸಂಸ್ಥೆಯ ಉತ್ಪಾದನೆ ಕೊರೊನಿಲ್ ಸಮರ್ಥಿಸಿಕೊಳ್ಳುವ ಭರದಲ್ಲಿ ಕೋವಿಡ್-19 ಲಸಿಕೆಗಳು ಮತ್ತು ಅಲೋಪೆಥಿ ಔಷಧಗಳ ವಿಚಾರವಾಗಿ ಸಾರ್ವಜನಿಕರಿಗೆ ಆಧಾರರಹಿತ ತಪ್ಪು ಮಾಹಿತಿ ನೀಡುವುದನ್ನು ನಿಲ್ಲಿಸುವಂತೆ ದೆಹಲಿ ಹೈಕೋರ್ಟ್ ಯೋಗ ಗುರು ಬಾಬಾ ರಾಮದೇವ್ ಅವರಿಗೆ ತಾಕೀತು ಮಾಡಿದೆ.

‘ನೀವು ಶಿಷ್ಯರನ್ನು ಹೊಂದಿರುವುದು ಮತ್ತು ದೇಶದಾದ್ಯಂತ ನಿಮಗೆ ಅನುಯಾಯಿಗಳಿರುವುದು ಸ್ವಾಗತಾರ್ಹವೇ, ಆದರೆ ಅಧಿಕೃತವಾದ ಮಾಹಿತಿಗಿಂತ ಹೆಚ್ಚಿನದನ್ನು ಸಾರ್ವಜನಕರಿಗೆ ಹೇಳಿ ಅವರನ್ನು ತಪ್ಪು ದಾರಿಗೆಳೆಯಬೇಡಿ. ಆಯುರ್ವೇದ ಹೊಂದಿರುವ ಕೀರ್ತಿ ಮತ್ತು ಒಳ್ಳೆಯ ಹೆಸರನ್ನು ಉಳಿಸುವುದಷ್ಟೇ ನನ್ನ ಕಾಳಜಿಯಾಗಿದೆ. ಹಾಗೆಯೇ ಅಲೋಪೆಥಿ ಬಗ್ಗೆ ಯಾವುದೇ ತಪ್ಪು ಮಾಹಿತಿ ರವಾನೆಯಾಗಬಾರದೆನ್ನುವುದು ನನ್ನ ಖಚಿತ ಅಭಿಮತವಾಗಿದೆ,’ ಎಂದು ನ್ಯಾಯಮೂರ್ತಿ ಅನೂಪ್ ಭಂಭಾನಿ ಹೇಳಿದರು.

ರಾಮದೇವ್ ಅವರು ಕೋವಿಡ್ ಲಸಿಕೆಗಳ ಬಗ್ಗೆ ಆಧಾರರಹಿತ ಮಾಹಿತಿಯನ್ನು ನೀಡಿ ಜನರನ್ನು ತಪ್ಪು ದಾರಿಗೆಳೆಯುತ್ತಿದ್ದಾರೆ ಎಂದು ಆರೋಪಿಸಿ ನಾನಾ ವೈದ್ಯ ಸಂಘಗಳು ದೆಹಲಿ ಹೈಕೋರ್ಟ್ ನಲ್ಲಿ ಹೂಡಿದ ದಾವೆಯ ವಿಚಾರಣೆ ನಡೆಸುವಾಗ ನ್ಯಾಯಮೂರ್ತಿಗಳು ಮೇಲಿನಂತೆ ಅಭಿಪ್ರಾಯ ವ್ಯಕ್ತಪಡಿಸಿದರು. ದೂರುದಾರರ ಪರವಾಗಿ ವಾದಿಸಿದ ಹಿರಿಯ ವಕೀಲ ಅಖಿಲ್ ಸಿಬಲ್ ಅವರು ಯೋಗ ಗುರುಗಳ ಹಲವಾರು ಹೇಳಿಕೆಗಳನ್ನು ನ್ಯಾಯಾಲಯದ ಗಮನಕ್ಕೆ ತಂದರು.

ಮುಂದುವರಿದು ವಾದಿಸಿದ ಸಿಬಲ್ ಕೊರೋನಿಲ್ ಗೆ ನೀಡಿರುವ ಪರವಾನಗಿಯಲ್ಲ್ಲಿ ಎಲ್ಲೂ ಕೊವಿಡ್-19 ಅಂತ ಉಲ್ಲೇಖವಾಗಿಲ್ಲ ಎಂದು ಹೇಳಿದರು. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಬಗ್ಗೆ ಮಾತ್ರ ಅದರಲ್ಲಿ ಉಲ್ಲೇಖಿಸಲಾಗಿದೆ ಎಂದು ಅವರು ವಾದಿಸಿದರು.

ಪ್ರಕರಣ ಇತ್ಯರ್ಥಗೊಳ್ಳುವವರೆಗೆ ಕೊರೊನಿಲ್ ಬಗ್ಗೆ ಯಾವುದೇ ಹೇಳಿಕೆ ನೀಡಬಾರದೆಂದು ನ್ಯಾಯಾಲಯ ರಾಮದೇವ್ ಅವರಿಗೆ ಸೂಚನೆ ನೀಡಿತು. ಆದರೆ, ಅವರ ವಕೀಲ ಆ ಬಗ್ಗೆ ಯಾವುದೇ ಭರವಸೆಯನ್ನು ನ್ಯಾಯಾಲಯಕ್ಕೆ ನೀಡಲಿಲ್ಲ.

ಎರಡು ಮೂರು ಬಾರಿ ಕೋವಿಡ್ ಲಸಿಕೆ ತೆಗೆದುಕೊಂಡರೂ ಯುಎಸ್ ಅಧ್ಯಕ್ಷ ಜೋ ಬೈಡೆನ್ ಅವರಿಗೆ ಸೋಂಕು ತಗುಲಿದೆ, ಇದು ‘ವೈದ್ಯಕೀಯ ವಿಜ್ಞಾನದ ವೈಫಲ್ಯ’ ಅಂತ ರಾಮದೇವ್ ನೀಡಿರುವ ಹೇಳಿಕೆಯನ್ನು ಸಹ ಕೋರ್ಟ್ ಪ್ರಶ್ನಿಸಿತು.

‘ಮೊಟ್ಟ ಮೊದಲ ಸಂಗತಿಯೆಂದರೆ ನಾನು ಆಯುರ್ವೇದ ಶಾಸ್ತ್ರದ ಖ್ಯಾತಿಯ ಬಗ್ಗೆ ಕಾಳಜಿಯುಳ್ಳವನಾಗಿದ್ದೇನೆ ಮತ್ತು ಅದಕ್ಕೆಲ್ಲಿ ಅಪಖ್ಯಾತಿ ತಗುಲಿಕೊಳ್ಳುತ್ತೋ ಅಂತ ಚಿಂತಿತನಾಗಿದ್ದೇನೆ. ಎರಡನೆಯ ವಿಚಾರವೆಂದರೆ ಜನರ ಹೆಸರುಗಳನ್ನು ನೀವು ಉಲ್ಲೇಖಿಸುತ್ತಿರುವುದು, ಇದು ನಮ್ಮ ದೇಶದ ಅಂತರರಾಷ್ಟ್ರೀಯ ಸಂಬಂಧಗಳ ಮೇಲೆ ಪರಿಣಾಮ ಬೀರುತ್ತದೆ…’ ಎಂದು ಹೇಳಿದ ಭಂಭಾನಿ ಅವರು, ‘ನಾನು ಲಸಿಕೆ ಹಾಕಿಸಿಕೊಳ್ಳಲಾರೆ ಅಂತ ಹೇಳುವುದು ಸರಿಯೆನಿಸಬಹುದು ಆದರೆ, ಲಸಿಕೆಯನ್ನು ಮರೆತುಬಿಡಿ ಅದು ನಿಷ್ಪ್ರಯೋಜಕ, ನಮ್ಮ ಔಷಧಿಯನ್ನು ತೆಗೆದುಕೊಳ್ಳಿ ಅಂತ ಹೇಳುವುದು ಸರ್ವಥಾ ಸರಿಯಲ್ಲ,’ ಎಂದರು.

ಈ ವಿವಾದವನ್ನು ಬಿಜೆಪಿ ವರ್ಸಸ್ ಕಾಂಗ್ರೆಸ್ ಅಂತ ಪರಿವರ್ತಿಸಲಾಗಿದೆ ಎಂದು ರಾಮದೇವ್ ಅವರ ವಕೀಲ ಮಾಡಿದ ನಿವೇದನೆಗೆ ನ್ಯಾಯಾಲಯವು, ‘ನ್ಯಾಯಾಲದಲ್ಲಿ ರಾಜಕೀಯಕ್ಕೆ ಯಾವುದೇ ಅವಕಾಶವಿಲ್ಲ,’ ಎಂದು ಖಾರವಾಗಿ ಹೇಳಿದರು.

ಸದರಿ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಆಗಸ್ಟ್ 23 ಕ್ಕೆ ಮುಂದೂಡಿತು.

andolana

Recent Posts

ಸಿಲಿಂಡರ್ ಸ್ಪೋಟ ಪ್ರಕರಣ : ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…

8 hours ago

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

12 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

12 hours ago

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…

13 hours ago

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

14 hours ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

14 hours ago