ದೇಶ- ವಿದೇಶ

ಕೋವಿಡ್ ಲಸಿಕೆ ಬಗ್ಗೆ ತಪ್ಪು ಮಾಹಿತಿ ನೀಡುವುದನ್ನು ನಿಲ್ಲಿಸುವಂತೆ ಬಾಬಾ ರಾಮದೇವ್‌ಗೆ ದೆಹಲಿ ಹೈಕೋರ್ಟ್ ತಾಕೀತು

ನವದೆಹಲಿ: ತಮ್ಮ ಸಂಸ್ಥೆಯ ಉತ್ಪಾದನೆ ಕೊರೊನಿಲ್ ಸಮರ್ಥಿಸಿಕೊಳ್ಳುವ ಭರದಲ್ಲಿ ಕೋವಿಡ್-19 ಲಸಿಕೆಗಳು ಮತ್ತು ಅಲೋಪೆಥಿ ಔಷಧಗಳ ವಿಚಾರವಾಗಿ ಸಾರ್ವಜನಿಕರಿಗೆ ಆಧಾರರಹಿತ ತಪ್ಪು ಮಾಹಿತಿ ನೀಡುವುದನ್ನು ನಿಲ್ಲಿಸುವಂತೆ ದೆಹಲಿ ಹೈಕೋರ್ಟ್ ಯೋಗ ಗುರು ಬಾಬಾ ರಾಮದೇವ್ ಅವರಿಗೆ ತಾಕೀತು ಮಾಡಿದೆ.

‘ನೀವು ಶಿಷ್ಯರನ್ನು ಹೊಂದಿರುವುದು ಮತ್ತು ದೇಶದಾದ್ಯಂತ ನಿಮಗೆ ಅನುಯಾಯಿಗಳಿರುವುದು ಸ್ವಾಗತಾರ್ಹವೇ, ಆದರೆ ಅಧಿಕೃತವಾದ ಮಾಹಿತಿಗಿಂತ ಹೆಚ್ಚಿನದನ್ನು ಸಾರ್ವಜನಕರಿಗೆ ಹೇಳಿ ಅವರನ್ನು ತಪ್ಪು ದಾರಿಗೆಳೆಯಬೇಡಿ. ಆಯುರ್ವೇದ ಹೊಂದಿರುವ ಕೀರ್ತಿ ಮತ್ತು ಒಳ್ಳೆಯ ಹೆಸರನ್ನು ಉಳಿಸುವುದಷ್ಟೇ ನನ್ನ ಕಾಳಜಿಯಾಗಿದೆ. ಹಾಗೆಯೇ ಅಲೋಪೆಥಿ ಬಗ್ಗೆ ಯಾವುದೇ ತಪ್ಪು ಮಾಹಿತಿ ರವಾನೆಯಾಗಬಾರದೆನ್ನುವುದು ನನ್ನ ಖಚಿತ ಅಭಿಮತವಾಗಿದೆ,’ ಎಂದು ನ್ಯಾಯಮೂರ್ತಿ ಅನೂಪ್ ಭಂಭಾನಿ ಹೇಳಿದರು.

ರಾಮದೇವ್ ಅವರು ಕೋವಿಡ್ ಲಸಿಕೆಗಳ ಬಗ್ಗೆ ಆಧಾರರಹಿತ ಮಾಹಿತಿಯನ್ನು ನೀಡಿ ಜನರನ್ನು ತಪ್ಪು ದಾರಿಗೆಳೆಯುತ್ತಿದ್ದಾರೆ ಎಂದು ಆರೋಪಿಸಿ ನಾನಾ ವೈದ್ಯ ಸಂಘಗಳು ದೆಹಲಿ ಹೈಕೋರ್ಟ್ ನಲ್ಲಿ ಹೂಡಿದ ದಾವೆಯ ವಿಚಾರಣೆ ನಡೆಸುವಾಗ ನ್ಯಾಯಮೂರ್ತಿಗಳು ಮೇಲಿನಂತೆ ಅಭಿಪ್ರಾಯ ವ್ಯಕ್ತಪಡಿಸಿದರು. ದೂರುದಾರರ ಪರವಾಗಿ ವಾದಿಸಿದ ಹಿರಿಯ ವಕೀಲ ಅಖಿಲ್ ಸಿಬಲ್ ಅವರು ಯೋಗ ಗುರುಗಳ ಹಲವಾರು ಹೇಳಿಕೆಗಳನ್ನು ನ್ಯಾಯಾಲಯದ ಗಮನಕ್ಕೆ ತಂದರು.

ಮುಂದುವರಿದು ವಾದಿಸಿದ ಸಿಬಲ್ ಕೊರೋನಿಲ್ ಗೆ ನೀಡಿರುವ ಪರವಾನಗಿಯಲ್ಲ್ಲಿ ಎಲ್ಲೂ ಕೊವಿಡ್-19 ಅಂತ ಉಲ್ಲೇಖವಾಗಿಲ್ಲ ಎಂದು ಹೇಳಿದರು. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಬಗ್ಗೆ ಮಾತ್ರ ಅದರಲ್ಲಿ ಉಲ್ಲೇಖಿಸಲಾಗಿದೆ ಎಂದು ಅವರು ವಾದಿಸಿದರು.

ಪ್ರಕರಣ ಇತ್ಯರ್ಥಗೊಳ್ಳುವವರೆಗೆ ಕೊರೊನಿಲ್ ಬಗ್ಗೆ ಯಾವುದೇ ಹೇಳಿಕೆ ನೀಡಬಾರದೆಂದು ನ್ಯಾಯಾಲಯ ರಾಮದೇವ್ ಅವರಿಗೆ ಸೂಚನೆ ನೀಡಿತು. ಆದರೆ, ಅವರ ವಕೀಲ ಆ ಬಗ್ಗೆ ಯಾವುದೇ ಭರವಸೆಯನ್ನು ನ್ಯಾಯಾಲಯಕ್ಕೆ ನೀಡಲಿಲ್ಲ.

ಎರಡು ಮೂರು ಬಾರಿ ಕೋವಿಡ್ ಲಸಿಕೆ ತೆಗೆದುಕೊಂಡರೂ ಯುಎಸ್ ಅಧ್ಯಕ್ಷ ಜೋ ಬೈಡೆನ್ ಅವರಿಗೆ ಸೋಂಕು ತಗುಲಿದೆ, ಇದು ‘ವೈದ್ಯಕೀಯ ವಿಜ್ಞಾನದ ವೈಫಲ್ಯ’ ಅಂತ ರಾಮದೇವ್ ನೀಡಿರುವ ಹೇಳಿಕೆಯನ್ನು ಸಹ ಕೋರ್ಟ್ ಪ್ರಶ್ನಿಸಿತು.

‘ಮೊಟ್ಟ ಮೊದಲ ಸಂಗತಿಯೆಂದರೆ ನಾನು ಆಯುರ್ವೇದ ಶಾಸ್ತ್ರದ ಖ್ಯಾತಿಯ ಬಗ್ಗೆ ಕಾಳಜಿಯುಳ್ಳವನಾಗಿದ್ದೇನೆ ಮತ್ತು ಅದಕ್ಕೆಲ್ಲಿ ಅಪಖ್ಯಾತಿ ತಗುಲಿಕೊಳ್ಳುತ್ತೋ ಅಂತ ಚಿಂತಿತನಾಗಿದ್ದೇನೆ. ಎರಡನೆಯ ವಿಚಾರವೆಂದರೆ ಜನರ ಹೆಸರುಗಳನ್ನು ನೀವು ಉಲ್ಲೇಖಿಸುತ್ತಿರುವುದು, ಇದು ನಮ್ಮ ದೇಶದ ಅಂತರರಾಷ್ಟ್ರೀಯ ಸಂಬಂಧಗಳ ಮೇಲೆ ಪರಿಣಾಮ ಬೀರುತ್ತದೆ…’ ಎಂದು ಹೇಳಿದ ಭಂಭಾನಿ ಅವರು, ‘ನಾನು ಲಸಿಕೆ ಹಾಕಿಸಿಕೊಳ್ಳಲಾರೆ ಅಂತ ಹೇಳುವುದು ಸರಿಯೆನಿಸಬಹುದು ಆದರೆ, ಲಸಿಕೆಯನ್ನು ಮರೆತುಬಿಡಿ ಅದು ನಿಷ್ಪ್ರಯೋಜಕ, ನಮ್ಮ ಔಷಧಿಯನ್ನು ತೆಗೆದುಕೊಳ್ಳಿ ಅಂತ ಹೇಳುವುದು ಸರ್ವಥಾ ಸರಿಯಲ್ಲ,’ ಎಂದರು.

ಈ ವಿವಾದವನ್ನು ಬಿಜೆಪಿ ವರ್ಸಸ್ ಕಾಂಗ್ರೆಸ್ ಅಂತ ಪರಿವರ್ತಿಸಲಾಗಿದೆ ಎಂದು ರಾಮದೇವ್ ಅವರ ವಕೀಲ ಮಾಡಿದ ನಿವೇದನೆಗೆ ನ್ಯಾಯಾಲಯವು, ‘ನ್ಯಾಯಾಲದಲ್ಲಿ ರಾಜಕೀಯಕ್ಕೆ ಯಾವುದೇ ಅವಕಾಶವಿಲ್ಲ,’ ಎಂದು ಖಾರವಾಗಿ ಹೇಳಿದರು.

ಸದರಿ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಆಗಸ್ಟ್ 23 ಕ್ಕೆ ಮುಂದೂಡಿತು.

andolana

Recent Posts

ಹಾಸನ | ಮೆದುಳಿನಲ್ಲಿ ತೀವ್ರ ರಕ್ತಸ್ರಾವ ; 25 ವರ್ಷದ ಸಾಫ್ಟ್‌ವೇರ್‌ ಇಂಜಿನಿಯರ್‌ ಯುವತಿ ಸಾವು

ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…

2 mins ago

ಚೆಲುವಾಂಬ ಆಸ್ಪತ್ರೆ | 15 ತಿಂಗಳಲ್ಲಿ 421 ಶಿಶು ಮರಣ ; ದಾಖಲೆ ಬಿಡುಗಡೆ ಮಾಡಿದ ಮಾಜಿ ಶಾಸಕ ನಾಗೇಂದ್ರ

ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…

11 mins ago

ಪಶ್ಚಿಮ ಬಂಗಾಳ ಎರಡನೇ ಹಂತದ ಚುನಾವಣೆ : ಏ.29ರಂದು ಮತದಾನ ; ಭಾರೀ ಬಿಗಿ ಭದ್ರತೆ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…

1 hour ago

ಅರಳುಮರಳು ಮಾತು, ಕ್ಷಮಿಸಿಬಿಡೋಣ : ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…

2 hours ago

ಭಾರತ-ನ್ಯೂಜಿಲೆಂಡ್‌ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ : 1.88 ಲಕ್ಷ ಕೋಟಿ ಹೂಡಿಕೆ

ನವದೆಹಲಿ : ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸೋಮವಾರ ನವದೆಹಲಿಯಲ್ಲಿ ʼಮುಕ್ತ…

2 hours ago

ಕಾಂಗ್ರೆಸ್ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು. ಆದರೆ…

3 hours ago