ದೇಶ- ವಿದೇಶ

ಕೋವಿಡ್ ಲಸಿಕೆ ಬಗ್ಗೆ ತಪ್ಪು ಮಾಹಿತಿ ನೀಡುವುದನ್ನು ನಿಲ್ಲಿಸುವಂತೆ ಬಾಬಾ ರಾಮದೇವ್‌ಗೆ ದೆಹಲಿ ಹೈಕೋರ್ಟ್ ತಾಕೀತು

ನವದೆಹಲಿ: ತಮ್ಮ ಸಂಸ್ಥೆಯ ಉತ್ಪಾದನೆ ಕೊರೊನಿಲ್ ಸಮರ್ಥಿಸಿಕೊಳ್ಳುವ ಭರದಲ್ಲಿ ಕೋವಿಡ್-19 ಲಸಿಕೆಗಳು ಮತ್ತು ಅಲೋಪೆಥಿ ಔಷಧಗಳ ವಿಚಾರವಾಗಿ ಸಾರ್ವಜನಿಕರಿಗೆ ಆಧಾರರಹಿತ ತಪ್ಪು ಮಾಹಿತಿ ನೀಡುವುದನ್ನು ನಿಲ್ಲಿಸುವಂತೆ ದೆಹಲಿ ಹೈಕೋರ್ಟ್ ಯೋಗ ಗುರು ಬಾಬಾ ರಾಮದೇವ್ ಅವರಿಗೆ ತಾಕೀತು ಮಾಡಿದೆ.

‘ನೀವು ಶಿಷ್ಯರನ್ನು ಹೊಂದಿರುವುದು ಮತ್ತು ದೇಶದಾದ್ಯಂತ ನಿಮಗೆ ಅನುಯಾಯಿಗಳಿರುವುದು ಸ್ವಾಗತಾರ್ಹವೇ, ಆದರೆ ಅಧಿಕೃತವಾದ ಮಾಹಿತಿಗಿಂತ ಹೆಚ್ಚಿನದನ್ನು ಸಾರ್ವಜನಕರಿಗೆ ಹೇಳಿ ಅವರನ್ನು ತಪ್ಪು ದಾರಿಗೆಳೆಯಬೇಡಿ. ಆಯುರ್ವೇದ ಹೊಂದಿರುವ ಕೀರ್ತಿ ಮತ್ತು ಒಳ್ಳೆಯ ಹೆಸರನ್ನು ಉಳಿಸುವುದಷ್ಟೇ ನನ್ನ ಕಾಳಜಿಯಾಗಿದೆ. ಹಾಗೆಯೇ ಅಲೋಪೆಥಿ ಬಗ್ಗೆ ಯಾವುದೇ ತಪ್ಪು ಮಾಹಿತಿ ರವಾನೆಯಾಗಬಾರದೆನ್ನುವುದು ನನ್ನ ಖಚಿತ ಅಭಿಮತವಾಗಿದೆ,’ ಎಂದು ನ್ಯಾಯಮೂರ್ತಿ ಅನೂಪ್ ಭಂಭಾನಿ ಹೇಳಿದರು.

ರಾಮದೇವ್ ಅವರು ಕೋವಿಡ್ ಲಸಿಕೆಗಳ ಬಗ್ಗೆ ಆಧಾರರಹಿತ ಮಾಹಿತಿಯನ್ನು ನೀಡಿ ಜನರನ್ನು ತಪ್ಪು ದಾರಿಗೆಳೆಯುತ್ತಿದ್ದಾರೆ ಎಂದು ಆರೋಪಿಸಿ ನಾನಾ ವೈದ್ಯ ಸಂಘಗಳು ದೆಹಲಿ ಹೈಕೋರ್ಟ್ ನಲ್ಲಿ ಹೂಡಿದ ದಾವೆಯ ವಿಚಾರಣೆ ನಡೆಸುವಾಗ ನ್ಯಾಯಮೂರ್ತಿಗಳು ಮೇಲಿನಂತೆ ಅಭಿಪ್ರಾಯ ವ್ಯಕ್ತಪಡಿಸಿದರು. ದೂರುದಾರರ ಪರವಾಗಿ ವಾದಿಸಿದ ಹಿರಿಯ ವಕೀಲ ಅಖಿಲ್ ಸಿಬಲ್ ಅವರು ಯೋಗ ಗುರುಗಳ ಹಲವಾರು ಹೇಳಿಕೆಗಳನ್ನು ನ್ಯಾಯಾಲಯದ ಗಮನಕ್ಕೆ ತಂದರು.

ಮುಂದುವರಿದು ವಾದಿಸಿದ ಸಿಬಲ್ ಕೊರೋನಿಲ್ ಗೆ ನೀಡಿರುವ ಪರವಾನಗಿಯಲ್ಲ್ಲಿ ಎಲ್ಲೂ ಕೊವಿಡ್-19 ಅಂತ ಉಲ್ಲೇಖವಾಗಿಲ್ಲ ಎಂದು ಹೇಳಿದರು. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಬಗ್ಗೆ ಮಾತ್ರ ಅದರಲ್ಲಿ ಉಲ್ಲೇಖಿಸಲಾಗಿದೆ ಎಂದು ಅವರು ವಾದಿಸಿದರು.

ಪ್ರಕರಣ ಇತ್ಯರ್ಥಗೊಳ್ಳುವವರೆಗೆ ಕೊರೊನಿಲ್ ಬಗ್ಗೆ ಯಾವುದೇ ಹೇಳಿಕೆ ನೀಡಬಾರದೆಂದು ನ್ಯಾಯಾಲಯ ರಾಮದೇವ್ ಅವರಿಗೆ ಸೂಚನೆ ನೀಡಿತು. ಆದರೆ, ಅವರ ವಕೀಲ ಆ ಬಗ್ಗೆ ಯಾವುದೇ ಭರವಸೆಯನ್ನು ನ್ಯಾಯಾಲಯಕ್ಕೆ ನೀಡಲಿಲ್ಲ.

ಎರಡು ಮೂರು ಬಾರಿ ಕೋವಿಡ್ ಲಸಿಕೆ ತೆಗೆದುಕೊಂಡರೂ ಯುಎಸ್ ಅಧ್ಯಕ್ಷ ಜೋ ಬೈಡೆನ್ ಅವರಿಗೆ ಸೋಂಕು ತಗುಲಿದೆ, ಇದು ‘ವೈದ್ಯಕೀಯ ವಿಜ್ಞಾನದ ವೈಫಲ್ಯ’ ಅಂತ ರಾಮದೇವ್ ನೀಡಿರುವ ಹೇಳಿಕೆಯನ್ನು ಸಹ ಕೋರ್ಟ್ ಪ್ರಶ್ನಿಸಿತು.

‘ಮೊಟ್ಟ ಮೊದಲ ಸಂಗತಿಯೆಂದರೆ ನಾನು ಆಯುರ್ವೇದ ಶಾಸ್ತ್ರದ ಖ್ಯಾತಿಯ ಬಗ್ಗೆ ಕಾಳಜಿಯುಳ್ಳವನಾಗಿದ್ದೇನೆ ಮತ್ತು ಅದಕ್ಕೆಲ್ಲಿ ಅಪಖ್ಯಾತಿ ತಗುಲಿಕೊಳ್ಳುತ್ತೋ ಅಂತ ಚಿಂತಿತನಾಗಿದ್ದೇನೆ. ಎರಡನೆಯ ವಿಚಾರವೆಂದರೆ ಜನರ ಹೆಸರುಗಳನ್ನು ನೀವು ಉಲ್ಲೇಖಿಸುತ್ತಿರುವುದು, ಇದು ನಮ್ಮ ದೇಶದ ಅಂತರರಾಷ್ಟ್ರೀಯ ಸಂಬಂಧಗಳ ಮೇಲೆ ಪರಿಣಾಮ ಬೀರುತ್ತದೆ…’ ಎಂದು ಹೇಳಿದ ಭಂಭಾನಿ ಅವರು, ‘ನಾನು ಲಸಿಕೆ ಹಾಕಿಸಿಕೊಳ್ಳಲಾರೆ ಅಂತ ಹೇಳುವುದು ಸರಿಯೆನಿಸಬಹುದು ಆದರೆ, ಲಸಿಕೆಯನ್ನು ಮರೆತುಬಿಡಿ ಅದು ನಿಷ್ಪ್ರಯೋಜಕ, ನಮ್ಮ ಔಷಧಿಯನ್ನು ತೆಗೆದುಕೊಳ್ಳಿ ಅಂತ ಹೇಳುವುದು ಸರ್ವಥಾ ಸರಿಯಲ್ಲ,’ ಎಂದರು.

ಈ ವಿವಾದವನ್ನು ಬಿಜೆಪಿ ವರ್ಸಸ್ ಕಾಂಗ್ರೆಸ್ ಅಂತ ಪರಿವರ್ತಿಸಲಾಗಿದೆ ಎಂದು ರಾಮದೇವ್ ಅವರ ವಕೀಲ ಮಾಡಿದ ನಿವೇದನೆಗೆ ನ್ಯಾಯಾಲಯವು, ‘ನ್ಯಾಯಾಲದಲ್ಲಿ ರಾಜಕೀಯಕ್ಕೆ ಯಾವುದೇ ಅವಕಾಶವಿಲ್ಲ,’ ಎಂದು ಖಾರವಾಗಿ ಹೇಳಿದರು.

ಸದರಿ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಆಗಸ್ಟ್ 23 ಕ್ಕೆ ಮುಂದೂಡಿತು.

andolana

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

7 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

7 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

8 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

10 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

13 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

13 hours ago