ನವದೆಹಲಿ: ಬಾರೀ ಮಳೆ ಹಿನ್ನೆಲೆ ಇಲ್ಲಿನ ಕೋಚಿಂಗ್ ಸೆಂಟರ್ಗೆ ಮಳೆಯ ನೀರು ತುಂಬಿಕೊಂಡು ಐಎಎಸ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮೂವರು ಅಭ್ಯರ್ಥಿಗಳು ಸಾವನ್ನಪ್ಪಿರುವ ವಿದ್ರಾವಕ ಘಟನೆ ನವದೆಹಲಿಯಲ್ಲಿ ನಡೆದಿದೆ.
ಕೆಂದ್ರ ದೆಹಲಿಯ ಹಳೆಯ ರಾಜಿಂದರ್ ನಗರ ಪ್ರದೇಶದಲ್ಲಿ ಶನಿವಾರ ರಾತ್ರಿ ಈ ಘಟನೆ ನಡೆದಿದೆ. ಈ ಕೋಚಿಂಗ್ ಸೆಂಟರ್ ನೆಲಮಾಳಿಗೆಯಲ್ಲಿತ್ತು.
ರಾಜೂಸ್ ಐಎಎಸ್ ಸ್ಟಡಿ ಸೆಂಟರ್ನ ನೆಲಮಾಳಿಗೆಯು ಮಳೆ ನೀರಿನಿಂದ ಆವೃತ್ತವಾಗಿರುವ ಬಗ್ಗೆ ರಾತ್ರಿ 7ಗಂಟೆ ಸುಮಾರಿಗೆ ಕರೆ ಬಂದಿತ್ತು. ಕೆಲವು ವ್ಯಕ್ತಿಗಳು ನೆಲಮಾಳಿಗೆಯಲ್ಲಿ ನೀರಿನಲ್ಲಿ ಸಿಲುಕಿಕೊಂಡಿದ್ದಾರೆ ಎನ್ನುವ ಮಾಹಿತಿ ಬಂತು. ನೆಲಮಾಳಿಗೆ ಸಂಪೂರ್ಣ ಹೇಗೆ ಜಲಾವೃತವಾಯಿತು ಎಂಬುದನ್ನು ನಾವು ತನಿಖೆ ನಡೆಸುತ್ತಿದ್ದೇವೆ. ನೆಲಮಾಳಿಗೆಯು ಅತ್ಯಂತ ವೇಗವಾಗಿ ಜಲಾವೃತಗೊಂಡಿದೆ. ಇದರಿಂದ ಕೆಲವರು ಒಳಗೆ ಸಿಲುಕಿಕೊಂಡಿದ್ದಾರೆ ಎಂದು ಡಿಸಿಪಿ ಹರ್ಷವರ್ಧನ್ ತಿಳಿಸಿದ್ದಾರೆ.
ನೆಲಮಾಳಿಗೆ ಸಂಪೂರ್ಣ ಜಲಾವೃತವಾಗಿದ್ದು, 5 ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಗಿತ್ತು ಎಂದು ಅಗ್ನಿಶಾಮಕ ಇಲಾಖೆ ಹೇಳಿದೆ.
ಬಳಿಕ ಸ್ಥಳಕ್ಕಾಗಮಿಸಿದ ಎನ್ಡಿಆರ್ಎಫ್, ಅಗ್ನಿಶಾಮಕ ಮತ್ತು ಪೊಲೀಸರ ನೆರವಿನಿಂದ ಇಬ್ಬರು ಮಹಿಳಾ ಅಭ್ಯರ್ಥಿಗಳು ಹಾಗೂ ವಿದ್ಯಾರ್ಥಿಯ ಮೃತದೇಹವನ್ನು ಹೊರತೆಗೆದಿದ್ದಾರೆ. ಮೃತರ ಗುರುತುಗಳನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ.
ಇನ್ನೂ ಮಧ್ಯರಾತ್ರಿವರೆಗೆ ನಡೆದ ಈ ಕಾರ್ಯಚರಣೆಯಲ್ಲಿ ಮಳೆಯ ನೀರನ್ನು ಪಂಪ್ ಮಾಡಿ ಹೊರಗೆ ತೆಗೆಯಾಗಿದೆ.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…