ನವದೆಹಲಿ: ಬಾರೀ ಮಳೆ ಹಿನ್ನೆಲೆ ಇಲ್ಲಿನ ಕೋಚಿಂಗ್ ಸೆಂಟರ್ಗೆ ಮಳೆಯ ನೀರು ತುಂಬಿಕೊಂಡು ಐಎಎಸ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮೂವರು ಅಭ್ಯರ್ಥಿಗಳು ಸಾವನ್ನಪ್ಪಿರುವ ವಿದ್ರಾವಕ ಘಟನೆ ನವದೆಹಲಿಯಲ್ಲಿ ನಡೆದಿದೆ.
ಕೆಂದ್ರ ದೆಹಲಿಯ ಹಳೆಯ ರಾಜಿಂದರ್ ನಗರ ಪ್ರದೇಶದಲ್ಲಿ ಶನಿವಾರ ರಾತ್ರಿ ಈ ಘಟನೆ ನಡೆದಿದೆ. ಈ ಕೋಚಿಂಗ್ ಸೆಂಟರ್ ನೆಲಮಾಳಿಗೆಯಲ್ಲಿತ್ತು.
ರಾಜೂಸ್ ಐಎಎಸ್ ಸ್ಟಡಿ ಸೆಂಟರ್ನ ನೆಲಮಾಳಿಗೆಯು ಮಳೆ ನೀರಿನಿಂದ ಆವೃತ್ತವಾಗಿರುವ ಬಗ್ಗೆ ರಾತ್ರಿ 7ಗಂಟೆ ಸುಮಾರಿಗೆ ಕರೆ ಬಂದಿತ್ತು. ಕೆಲವು ವ್ಯಕ್ತಿಗಳು ನೆಲಮಾಳಿಗೆಯಲ್ಲಿ ನೀರಿನಲ್ಲಿ ಸಿಲುಕಿಕೊಂಡಿದ್ದಾರೆ ಎನ್ನುವ ಮಾಹಿತಿ ಬಂತು. ನೆಲಮಾಳಿಗೆ ಸಂಪೂರ್ಣ ಹೇಗೆ ಜಲಾವೃತವಾಯಿತು ಎಂಬುದನ್ನು ನಾವು ತನಿಖೆ ನಡೆಸುತ್ತಿದ್ದೇವೆ. ನೆಲಮಾಳಿಗೆಯು ಅತ್ಯಂತ ವೇಗವಾಗಿ ಜಲಾವೃತಗೊಂಡಿದೆ. ಇದರಿಂದ ಕೆಲವರು ಒಳಗೆ ಸಿಲುಕಿಕೊಂಡಿದ್ದಾರೆ ಎಂದು ಡಿಸಿಪಿ ಹರ್ಷವರ್ಧನ್ ತಿಳಿಸಿದ್ದಾರೆ.
ನೆಲಮಾಳಿಗೆ ಸಂಪೂರ್ಣ ಜಲಾವೃತವಾಗಿದ್ದು, 5 ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಗಿತ್ತು ಎಂದು ಅಗ್ನಿಶಾಮಕ ಇಲಾಖೆ ಹೇಳಿದೆ.
ಬಳಿಕ ಸ್ಥಳಕ್ಕಾಗಮಿಸಿದ ಎನ್ಡಿಆರ್ಎಫ್, ಅಗ್ನಿಶಾಮಕ ಮತ್ತು ಪೊಲೀಸರ ನೆರವಿನಿಂದ ಇಬ್ಬರು ಮಹಿಳಾ ಅಭ್ಯರ್ಥಿಗಳು ಹಾಗೂ ವಿದ್ಯಾರ್ಥಿಯ ಮೃತದೇಹವನ್ನು ಹೊರತೆಗೆದಿದ್ದಾರೆ. ಮೃತರ ಗುರುತುಗಳನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ.
ಇನ್ನೂ ಮಧ್ಯರಾತ್ರಿವರೆಗೆ ನಡೆದ ಈ ಕಾರ್ಯಚರಣೆಯಲ್ಲಿ ಮಳೆಯ ನೀರನ್ನು ಪಂಪ್ ಮಾಡಿ ಹೊರಗೆ ತೆಗೆಯಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…