ದೇಶ- ವಿದೇಶ

ತೊಗರಿ – ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ ; ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

ಹೊಸದಿಲ್ಲಿ : ಕರ್ನಾಟಕ ರಾಜ್ಯದಲ್ಲಿ‌ ಭಾರತದ ರಾಷ್ಟ್ರೀಯ ಕೃಷಿ‌ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ಭಾರತದ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟದ ಮೂಲಕ ತೊಗರಿಬೇಳೆ‌ ಹಾಗೂ ಕಬ್ಬು ಬೆಳೆಗೆ ಕನಿಷ್ಠ ಬೆಂಬಲ‌ ಬೆಲೆ ನಿಗದಿಗೆ ಕೂಡಲೇ ಅನುಮೋದನೆ ನೀಡಬೇಕೆಂದು ದಿಲ್ಲಿಯ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಚಾಮರಾಜನಗರ ಸಂಸದ ಸುನೀಲ್‌ ಬೋಸ್‌ ಹಾಗೂ ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಸೇರಿದಂತೆ ಕರ್ನಾಟಕದ ಸಂಸದರ ನಿಯೋಗ ತೆರಳಿ ಮನವಿ ಸಲ್ಲಿಸಿದ್ದಾರೆ.

ಈಗಾಗಲೇ ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಪ್ರಧಾನ ಮಂತ್ರಿಗಳಿಗೆ ಮನವಿ ಮಾಡಿದ್ದಾರೆ ಅವರ ಮನವಿಯನ್ನು ಪರಿಗಣಿಸುವಂತೆ ಈ‌ ಸಂದರ್ಭದಲ್ಲಿ ಕಾಂಗ್ರೆಸ್ ಸಂಸದರು ಉಲ್ಲೇಖಿಸಿದ್ದಾರೆ.

ಕೇಂದ್ರ ಸರ್ಕಾರದ ವಿಳಂಬದ ಪರಿಣಾಮವಾಗಿ ಕರ್ನಾಟಕದ ತೊಗರಿ ಬೆಳೆಗಾರರು ನಷ್ಟ ಅನುಭವಿಸುತ್ತಿದ್ದಾರೆ. ಪ್ರಸ್ತುತ ಖಾರೀಫ್‌ ಹಂಗಾಮು 2025–26 ರಲ್ಲಿ, ಕರ್ನಾಟಕದಲ್ಲಿ ಸುಮಾರು 16.80 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬೆಳೆ ಬಿತ್ತನೆಗೊಂಡಿದ್ದು, 12.60 ಲಕ್ಷ ಮೆಟ್ರಿಕ್ ಟನ್‌ಗಳಿಗಿಂತ ಹೆಚ್ಚಿನ ಉತ್ಪಾದನೆಯ ನಿರೀಕ್ಷೆಯಿದೆ. ಈ ಬೆಳೆ ಕಲಬುರಗಿ, ಯಾದಗಿರಿ, ಬೀದರ, ರಾಯಚೂರು, ವಿಜಯಪುರ, ಕೊಪ್ಪಳ, ಬೆಳಗಾವಿ, ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಚಿತ್ರದುರ್ಗ ಸೇರಿ ರಾಜ್ಯದ ಪ್ರಮುಖ ಜಿಲ್ಲೆಗಳ ಲಕ್ಷಾಂತರ ರೈತರಿಗೆ ಆರ್ಥಿಕ ಬೆನ್ನೆಲುಬಾಗಿದೆ ಎಂದು ಕೇಂದ್ರ ಸಚಿವರ ಗಮನಸೆಳೆದರು.

ಇದನ್ನು ಓದಿ: ಹಾಡಿ ಕುಟುಂಬಗಳಿಗೆ ಗ್ಯಾರಂಟಿ ಯೋಜನೆ ತಲುಪಿಸಿ: ಅರುಣ್ ಕುಮಾರ್

ಪ್ರಸ್ತುತ ಮಾರುಕಟ್ಟೆಯ ಬೆಲೆ ಕ್ವಿಂಟಾಲ್‌ಗೆ ₹5,830ರಿಂದ ₹6,700ರ ನಡುವೆ ಇದೆ. ಆದರೆ 2025–26ರ ತೊಗರಿಬೆಳೆಗೆ ಕೇಂದ್ರ ಸರ್ಕಾರ ಪ್ರಕಟಿಸಿರುವ ಕನಿಷ್ಠ ಬೆಂಬಲ ಬೆಲೆ (MSP) ಕ್ವಿಂಟಾಲ್‌ಗೆ ಸುಮಾರು ₹8,000. ಬೆಳೆಯ ಆಗಮನದ ಗರಿಷ್ಠ ಅವಧಿ ಡಿಸೆಂಬರ್ 2025–ಜನವರಿ 2026ರೊಳಗೆ ಶುರುವಾಗಲಿದ್ದು, ಖರೀದಿ ಕೇಂದ್ರಗಳನ್ನು ಕೇಂದ್ರ ಸರ್ಕಾರ ಫೆಬ್ರವರಿ,ಮಾರ್ಚ್ ತಿಂಗಳಲ್ಲಿ ಮಾತ್ರ ಆರಂಭಿಸಲು ನಿರ್ಧರಿಸಿದೆ. ಇದರಿಂದಾಗಿ ರೈತರು ತೀವ್ರ ಆದಾಯ ನಷ್ಟದ ಅಪಾಯವನ್ನು ಎದುರಿಸುತ್ತಿದ್ದಾರೆ.

ಮಾರುಕಟ್ಟೆ ಬೆಲೆ ಎಂಎಸ್ ಪಿ ಗಿಂತ ಕಡಿಮೆಯಾಗುವಾಗ, ಅದು ಕೇವಲ ಆರ್ಥಿಕತೆಯ ಪ್ರಶ್ನೆಯಲ್ಲ, ಅದು ರೈತ ಮತ್ತು ಸರ್ಕಾರದ ನಡುವಿನ ನಂಬಿಕೆಯ ಪ್ರಶ್ನೆಯಾಗಿದೆ. ಸರ್ಕಾರ ನೀಡಿದ ಎಂಎಸ್ ಪಿ ಭರವಸೆಯನ್ನು ನಂಬಿ ರೈತರು ಬಿತ್ತಿರುತ್ತಾರೆ. ಪ್ರತಿಯೊಂದು ವಿಳಂಬದ ದಿನವೂ ಕರ್ನಾಟಕದ ರೈತರನ್ನು ಬಲವಂತದ ನಷ್ಟದಲ್ಲಿ ಮಾರಾಟಕ್ಕೆ, ಸಾಲದ ಬಲೆಗೆ ಮತ್ತು ಶಾಶ್ವತ ಆರ್ಥಿಕ ಸಂಕಷ್ಟಕ್ಕೆ ತಳ್ಳುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಈ ಹಿನ್ನೆಲೆಯಲ್ಲಿ, 2025ರ ನವೆಂಬರ್‌ 6ರಂದು ಕರ್ನಾಟಕ ಸರ್ಕಾರವು ತೊಗರಿಬೇಳೆಗೆ ತಕ್ಷಣದ MSP ಖರೀದಿಗೆ ಸಂಬಂಧಿಸಿದಂತೆ NAFED ಮತ್ತು NCCF ಮುಖಾಂತರ ಖರೀದಿ ಪ್ರಕ್ರಿಯೆ ಆರಂಭಿಸಲು ಅಧಿಕೃತ ಪ್ರಸ್ತಾವವನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಆದರೆ ಮಾರುಕಟ್ಟೆಗೆ ಬೆಳೆ ಬರುವ ಹಂತಕ್ಕೆ ತಲುಪುತ್ತಿರುವುದರೂ, ಈವರೆಗೆ ಕೇಂದ್ರದಿಂದ ಯಾವುದೇ ಅನುಮೋದನೆ ಲಭಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ರೈತರಿಗೆ ಖರೀದಿ ವಿಳಂಬದಿಂದ ಉಂಟಾಗುವ ಹಾನಿ ಒಂದು ಹಂಗಾಮಿನಷ್ಟಕ್ಕೆ ಸೀಮಿತವಲ್ಲ. ಇದು ಸಾರ್ವಜನಿಕ ಸಂಸ್ಥೆಗಳ ಮೇಲಿನ ಅವರ ನಂಬಿಕೆಯ ಪ್ರಶ್ನೆಯಾಗಿದೆ. ಆದ್ದರಿಂದ ಕರ್ನಾಟಕದ ರೈತರಿಗೆ ನೆರವಾಗುವಂತೆ ಕೇಂದ್ರ ಸರ್ಕಾರವೇ ಘೋಷಿಸಿರುವ ಎಂಎಸ್ ಪಿಯನ್ನು ಸಮಯಕ್ಕೆ ಸರಿಯಾಗಿ ಜಾರಿಗೆ ತರಬೇಕು ಎಂದು ಮನವಿ ಮಾಡಿದ್ದಾರೆ.

ನಿಯೋಗದಲ್ಲಿ ಸಂಸದರುಗಳಾದ ಜಿ.ಕುಮಾರ್ ನಾಯಕ್, ಇ.ತುಕಾರಾಂ, ಶ್ರೇಯಸ್ ಪಟೇಲ್, ಸಾಗರ್ ಖಂಡ್ರೆ ಅವರುಗಳು‌ ಉಪಸ್ಥಿತರಿದ್ದರು

ರಾಷ್ಟ್ರದ ಆಹಾರ ಭದ್ರತೆಯಲ್ಲಿ ಕರ್ನಾಟಕ ಯಾವಾಗಲೂ ಮುಂಚೂಣಿಯಲ್ಲಿದೆ. ಬರ, ಪ್ರವಾಹ, ಆರ್ಥಿಕ ಆಘಾತ ಯಾವ ಸಂದರ್ಭದಲ್ಲೂ ನಮ್ಮ ರೈತರು ದೇಶವನ್ನು ನಿರಾಶ್ರಿತರನ್ನಾಗಿಲ್ಲ. ಈಗ ದೇಶವು ಅವರೊಂದಿಗೆ ನಿಲ್ಲಬೇಕಾದ ಸಮಯವಾಗಿದೆ. ಈ ನಿರ್ಧಾರವು ಕೇವಲ ಆಡಳಿತಾತ್ಮಕ ವಿಷಯವಲ್ಲ. ಇದು ಭಾರತದ ಅನ್ನದಾತರ ಮೇಲಿನ ನಮ್ಮ ನೈತಿಕ ಬದ್ಧತೆಯ ದೊಡ್ಡ ಪರೀಕ್ಷೆ. ರೈತರ ಹಿತ, ರಾಜ್ಯ, ಕೇಂದ್ರ ಸಹಕಾರ ಮತ್ತು ರಾಷ್ಟ್ರೀಯ ಆಹಾರ ಭದ್ರತೆಯ ದೃಷ್ಟಿಯಿಂದ, ಕೇಂದ್ರ ಸರ್ಕಾರದಿಂದ ತಕ್ಷಣದ ಮತ್ತು ದೃಢವಾದ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕದ ಕಾಂಗ್ರೆಸ್ ಸಂಸದರು ಕೇಂದ್ರ ಸಚಿವರಿಗೆ ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

10 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

12 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

12 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

12 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

12 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

12 hours ago