ದೇಶ- ವಿದೇಶ

ತೊಗರಿ – ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ ; ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

ಹೊಸದಿಲ್ಲಿ : ಕರ್ನಾಟಕ ರಾಜ್ಯದಲ್ಲಿ‌ ಭಾರತದ ರಾಷ್ಟ್ರೀಯ ಕೃಷಿ‌ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ಭಾರತದ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟದ ಮೂಲಕ ತೊಗರಿಬೇಳೆ‌ ಹಾಗೂ ಕಬ್ಬು ಬೆಳೆಗೆ ಕನಿಷ್ಠ ಬೆಂಬಲ‌ ಬೆಲೆ ನಿಗದಿಗೆ ಕೂಡಲೇ ಅನುಮೋದನೆ ನೀಡಬೇಕೆಂದು ದಿಲ್ಲಿಯ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಚಾಮರಾಜನಗರ ಸಂಸದ ಸುನೀಲ್‌ ಬೋಸ್‌ ಹಾಗೂ ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಸೇರಿದಂತೆ ಕರ್ನಾಟಕದ ಸಂಸದರ ನಿಯೋಗ ತೆರಳಿ ಮನವಿ ಸಲ್ಲಿಸಿದ್ದಾರೆ.

ಈಗಾಗಲೇ ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಪ್ರಧಾನ ಮಂತ್ರಿಗಳಿಗೆ ಮನವಿ ಮಾಡಿದ್ದಾರೆ ಅವರ ಮನವಿಯನ್ನು ಪರಿಗಣಿಸುವಂತೆ ಈ‌ ಸಂದರ್ಭದಲ್ಲಿ ಕಾಂಗ್ರೆಸ್ ಸಂಸದರು ಉಲ್ಲೇಖಿಸಿದ್ದಾರೆ.

ಕೇಂದ್ರ ಸರ್ಕಾರದ ವಿಳಂಬದ ಪರಿಣಾಮವಾಗಿ ಕರ್ನಾಟಕದ ತೊಗರಿ ಬೆಳೆಗಾರರು ನಷ್ಟ ಅನುಭವಿಸುತ್ತಿದ್ದಾರೆ. ಪ್ರಸ್ತುತ ಖಾರೀಫ್‌ ಹಂಗಾಮು 2025–26 ರಲ್ಲಿ, ಕರ್ನಾಟಕದಲ್ಲಿ ಸುಮಾರು 16.80 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬೆಳೆ ಬಿತ್ತನೆಗೊಂಡಿದ್ದು, 12.60 ಲಕ್ಷ ಮೆಟ್ರಿಕ್ ಟನ್‌ಗಳಿಗಿಂತ ಹೆಚ್ಚಿನ ಉತ್ಪಾದನೆಯ ನಿರೀಕ್ಷೆಯಿದೆ. ಈ ಬೆಳೆ ಕಲಬುರಗಿ, ಯಾದಗಿರಿ, ಬೀದರ, ರಾಯಚೂರು, ವಿಜಯಪುರ, ಕೊಪ್ಪಳ, ಬೆಳಗಾವಿ, ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಚಿತ್ರದುರ್ಗ ಸೇರಿ ರಾಜ್ಯದ ಪ್ರಮುಖ ಜಿಲ್ಲೆಗಳ ಲಕ್ಷಾಂತರ ರೈತರಿಗೆ ಆರ್ಥಿಕ ಬೆನ್ನೆಲುಬಾಗಿದೆ ಎಂದು ಕೇಂದ್ರ ಸಚಿವರ ಗಮನಸೆಳೆದರು.

ಇದನ್ನು ಓದಿ: ಹಾಡಿ ಕುಟುಂಬಗಳಿಗೆ ಗ್ಯಾರಂಟಿ ಯೋಜನೆ ತಲುಪಿಸಿ: ಅರುಣ್ ಕುಮಾರ್

ಪ್ರಸ್ತುತ ಮಾರುಕಟ್ಟೆಯ ಬೆಲೆ ಕ್ವಿಂಟಾಲ್‌ಗೆ ₹5,830ರಿಂದ ₹6,700ರ ನಡುವೆ ಇದೆ. ಆದರೆ 2025–26ರ ತೊಗರಿಬೆಳೆಗೆ ಕೇಂದ್ರ ಸರ್ಕಾರ ಪ್ರಕಟಿಸಿರುವ ಕನಿಷ್ಠ ಬೆಂಬಲ ಬೆಲೆ (MSP) ಕ್ವಿಂಟಾಲ್‌ಗೆ ಸುಮಾರು ₹8,000. ಬೆಳೆಯ ಆಗಮನದ ಗರಿಷ್ಠ ಅವಧಿ ಡಿಸೆಂಬರ್ 2025–ಜನವರಿ 2026ರೊಳಗೆ ಶುರುವಾಗಲಿದ್ದು, ಖರೀದಿ ಕೇಂದ್ರಗಳನ್ನು ಕೇಂದ್ರ ಸರ್ಕಾರ ಫೆಬ್ರವರಿ,ಮಾರ್ಚ್ ತಿಂಗಳಲ್ಲಿ ಮಾತ್ರ ಆರಂಭಿಸಲು ನಿರ್ಧರಿಸಿದೆ. ಇದರಿಂದಾಗಿ ರೈತರು ತೀವ್ರ ಆದಾಯ ನಷ್ಟದ ಅಪಾಯವನ್ನು ಎದುರಿಸುತ್ತಿದ್ದಾರೆ.

ಮಾರುಕಟ್ಟೆ ಬೆಲೆ ಎಂಎಸ್ ಪಿ ಗಿಂತ ಕಡಿಮೆಯಾಗುವಾಗ, ಅದು ಕೇವಲ ಆರ್ಥಿಕತೆಯ ಪ್ರಶ್ನೆಯಲ್ಲ, ಅದು ರೈತ ಮತ್ತು ಸರ್ಕಾರದ ನಡುವಿನ ನಂಬಿಕೆಯ ಪ್ರಶ್ನೆಯಾಗಿದೆ. ಸರ್ಕಾರ ನೀಡಿದ ಎಂಎಸ್ ಪಿ ಭರವಸೆಯನ್ನು ನಂಬಿ ರೈತರು ಬಿತ್ತಿರುತ್ತಾರೆ. ಪ್ರತಿಯೊಂದು ವಿಳಂಬದ ದಿನವೂ ಕರ್ನಾಟಕದ ರೈತರನ್ನು ಬಲವಂತದ ನಷ್ಟದಲ್ಲಿ ಮಾರಾಟಕ್ಕೆ, ಸಾಲದ ಬಲೆಗೆ ಮತ್ತು ಶಾಶ್ವತ ಆರ್ಥಿಕ ಸಂಕಷ್ಟಕ್ಕೆ ತಳ್ಳುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಈ ಹಿನ್ನೆಲೆಯಲ್ಲಿ, 2025ರ ನವೆಂಬರ್‌ 6ರಂದು ಕರ್ನಾಟಕ ಸರ್ಕಾರವು ತೊಗರಿಬೇಳೆಗೆ ತಕ್ಷಣದ MSP ಖರೀದಿಗೆ ಸಂಬಂಧಿಸಿದಂತೆ NAFED ಮತ್ತು NCCF ಮುಖಾಂತರ ಖರೀದಿ ಪ್ರಕ್ರಿಯೆ ಆರಂಭಿಸಲು ಅಧಿಕೃತ ಪ್ರಸ್ತಾವವನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಆದರೆ ಮಾರುಕಟ್ಟೆಗೆ ಬೆಳೆ ಬರುವ ಹಂತಕ್ಕೆ ತಲುಪುತ್ತಿರುವುದರೂ, ಈವರೆಗೆ ಕೇಂದ್ರದಿಂದ ಯಾವುದೇ ಅನುಮೋದನೆ ಲಭಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ರೈತರಿಗೆ ಖರೀದಿ ವಿಳಂಬದಿಂದ ಉಂಟಾಗುವ ಹಾನಿ ಒಂದು ಹಂಗಾಮಿನಷ್ಟಕ್ಕೆ ಸೀಮಿತವಲ್ಲ. ಇದು ಸಾರ್ವಜನಿಕ ಸಂಸ್ಥೆಗಳ ಮೇಲಿನ ಅವರ ನಂಬಿಕೆಯ ಪ್ರಶ್ನೆಯಾಗಿದೆ. ಆದ್ದರಿಂದ ಕರ್ನಾಟಕದ ರೈತರಿಗೆ ನೆರವಾಗುವಂತೆ ಕೇಂದ್ರ ಸರ್ಕಾರವೇ ಘೋಷಿಸಿರುವ ಎಂಎಸ್ ಪಿಯನ್ನು ಸಮಯಕ್ಕೆ ಸರಿಯಾಗಿ ಜಾರಿಗೆ ತರಬೇಕು ಎಂದು ಮನವಿ ಮಾಡಿದ್ದಾರೆ.

ನಿಯೋಗದಲ್ಲಿ ಸಂಸದರುಗಳಾದ ಜಿ.ಕುಮಾರ್ ನಾಯಕ್, ಇ.ತುಕಾರಾಂ, ಶ್ರೇಯಸ್ ಪಟೇಲ್, ಸಾಗರ್ ಖಂಡ್ರೆ ಅವರುಗಳು‌ ಉಪಸ್ಥಿತರಿದ್ದರು

ರಾಷ್ಟ್ರದ ಆಹಾರ ಭದ್ರತೆಯಲ್ಲಿ ಕರ್ನಾಟಕ ಯಾವಾಗಲೂ ಮುಂಚೂಣಿಯಲ್ಲಿದೆ. ಬರ, ಪ್ರವಾಹ, ಆರ್ಥಿಕ ಆಘಾತ ಯಾವ ಸಂದರ್ಭದಲ್ಲೂ ನಮ್ಮ ರೈತರು ದೇಶವನ್ನು ನಿರಾಶ್ರಿತರನ್ನಾಗಿಲ್ಲ. ಈಗ ದೇಶವು ಅವರೊಂದಿಗೆ ನಿಲ್ಲಬೇಕಾದ ಸಮಯವಾಗಿದೆ. ಈ ನಿರ್ಧಾರವು ಕೇವಲ ಆಡಳಿತಾತ್ಮಕ ವಿಷಯವಲ್ಲ. ಇದು ಭಾರತದ ಅನ್ನದಾತರ ಮೇಲಿನ ನಮ್ಮ ನೈತಿಕ ಬದ್ಧತೆಯ ದೊಡ್ಡ ಪರೀಕ್ಷೆ. ರೈತರ ಹಿತ, ರಾಜ್ಯ, ಕೇಂದ್ರ ಸಹಕಾರ ಮತ್ತು ರಾಷ್ಟ್ರೀಯ ಆಹಾರ ಭದ್ರತೆಯ ದೃಷ್ಟಿಯಿಂದ, ಕೇಂದ್ರ ಸರ್ಕಾರದಿಂದ ತಕ್ಷಣದ ಮತ್ತು ದೃಢವಾದ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕದ ಕಾಂಗ್ರೆಸ್ ಸಂಸದರು ಕೇಂದ್ರ ಸಚಿವರಿಗೆ ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

2 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

4 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

5 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

5 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

8 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

9 hours ago