ದೇಶ- ವಿದೇಶ

ಸದನದಲ್ಲಿ ಮಾತನಾಡಲು ಅವಕಾಶ ನಿರಾಕರಣೆ : ರಾಹುಲ್‌ ಗಾಂಧಿ

ಹೊಸದಿಲ್ಲಿ : ಈ ಸದನವು ಒಂದು ಪಕ್ಷವನ್ನು ಪ್ರತಿನಿಧಿಸುವುದಿಲ್ಲ, ಬದಲಾಗಿ ಇಡೀ ದೇಶವನ್ನು ಪ್ರತಿನಿಧಿಸುತ್ತದೆ ಎಂದು ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಪ್ರತಿಪಾದಿಸಿದರು.

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧದ ಅವಿಶ್ವಾಸ ನಿರ್ಣಯ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ‘ರಾಜಿ ಮಾಡಿಕೊಂಡಿದ್ದಾರೆ‘ ಮತ್ತು ಅದರ ಫಲಿತಾಂಶ ಎಲ್ಲರಿಗೂ ಗೊತ್ತಿದೆ ಎಂದರು.

ವಿರೋಧ ಪಕ್ಷದ ನಾಯಕ ತನ್ನ ಮಾತುಗಳನ್ನು, ವಿಶೇಷವಾಗಿ ರಾಷ್ಟ್ರೀಯ ಭದ್ರತೆಯ ವಿಷಯಗಳ ಬಗ್ಗೆ ಎಚ್ಚರಿಕೆಯಿಂದ ಮಾತನಾಡಬೇಕು ಎಂದ ಬಿಜೆಪಿಯ ರವಿಶಂಕರ್ ಪ್ರಸಾದ್ ಹೇಳಿಕೆಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ಚರ್ಚೆಯ ಸಮಯದಲ್ಲಿ ನನ್ನ ಹೆಸರನ್ನು ಹಲವು ಬಾರಿ ಎತ್ತಲಾಗುತ್ತಿದೆ ಮತ್ತು ತಮ್ಮ ಬಗ್ಗೆ ‘ಕೆಟ್ಟ ವಿಷಯಗಳನ್ನು‘ ಹೇಳಲಾಗುತ್ತಿದೆ ಎಂದರು.

‘ಇಲ್ಲಿ ಚರ್ಚೆಯ ವಿಷಯ ಪ್ರಜಾಪ್ರಭುತ್ವ ಪ್ರಕ್ರಿಯೆ ಮತ್ತು ಸ್ಪೀಕರ್ ಪಾತ್ರದ ಬಗ್ಗೆ. ಈ ಸದನವು ಜನರ ಇಚ್ಛೆಯ ಅಭಿವ್ಯಕ್ತಿಯಾಗಿದೆ. ಈ ಸದನವು ಒಂದು ಪಕ್ಷವನ್ನು ಪ್ರತಿನಿಧಿಸುವುದಿಲ್ಲ; ಅದು ಇಡೀ ದೇಶವನ್ನು ಪ್ರತಿನಿಧಿಸುತ್ತದೆ‘ ಎಂದು ಹೇಳಿದರು.

ನಾವು ಪ್ರತಿ ಬಾರಿ ಮಾತನಾಡಲು ಎದ್ದಾಗಲೂ ನಮ್ಮನ್ನು ತಡೆಯಲಾಗುತ್ತದೆ. ನಾನು ಕೊನೆಯ ಬಾರಿ ಮಾತನಾಡುವಾಗ, ನಮ್ಮ ಪ್ರಧಾನಿ ಮಾಡಿಕೊಂಡ ರಾಜಿ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದೇನೆ. ಹಲವು ಬಾರಿ, ನನ್ನನ್ನು ಮಾತನಾಡದಂತೆ ತಡೆಯಲಾಗಿದೆ. ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ, ವಿರೋಧ ಪಕ್ಷದ ನಾಯಕನಿಗೆ ಚರ್ಚೆಯ ಸಮಯದಲ್ಲಿ ಮಾತನಾಡಲು ಅವಕಾಶ ನೀಡಲಾಗಿಲ್ಲ‘ ಎಂದು ರಾಹುಲ್ ಗಾಂಧಿ ಹೇಳಿದರು.

‘ನಾನು ನರವಾಣೆ ಅವರ ವಿಷಯವನ್ನು ಎತ್ತಿದೆ, ನಾನು ಎಪ್‌ಸ್ಟೀನ್ ಫೈಲ್ಸ್ ವಿಷಯವನ್ನು ಎತ್ತಿದೆ, ನಾನು ಅದಾನಿ ಅವರ ವಿಷಯವನ್ನು ಎತ್ತಿದೆ. ಆದರೆ ನನ್ನ ಧ್ವನಿ ಹತ್ತಿಕ್ಕುವ ಯತ್ನ ಮಾಡಲಾಯಿತು. ಈ ಸಮಸ್ಯೆಗಳು ಭಾರತದ ಜನರಿಗೆ ತಿಳಿಯಬೇಕು‘ ಎಂದು ಅವರು ಹೇಳಿದರು.

ಬಿರ್ಲಾ ವಿರುದ್ಧದ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ರವಿಶಂಕರ್ ಪ್ರಸಾದ್, ಸ್ಪೀಕರ್ ಅವರನ್ನು ಅವರ ಹುದ್ದೆಯಿಂದ ತೆಗೆದುಹಾಕುವ ನಿರ್ಣಯ, ಕೇವಲ ಒಬ್ಬ ನಾಯಕನನ್ನು ‘ತೃಪ್ತಿಗೊಳಿಸಲು‘ ಅಸ್ತ್ರವಾಗಿ ಬಳಸಬಾರದು ಎಂದರು.

ನಾಯಕನೊಬ್ಬನ ಅಹಂಕಾರದ ಫಲವಾದ ನಿರ್ಣಯದ ಬಗ್ಗೆ ಈ ಸದನವು ಚರ್ಚಿಸುತ್ತಿರುವುದು ನೋವಿನ ಸಂಗತಿ ಎಂದು ಅವರು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

17 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

17 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

17 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

17 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

17 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

17 hours ago