ದೇಶ- ವಿದೇಶ

ಪೊಲೀಸ್ ಸಿಬ್ಬಂದಿಯನ್ನು ಕೀಳು ಕೆಲಸಗಳಿಗೆ ಹಚ್ಚುವುದು ಸಂವಿಧಾನದ ಮೇಲೆ ಮಾಡುವ ಕಪಾಳ ಮೋಕ್ಷ: ಮದ್ರಾಸ್ ಹೈಕೋರ್ಟ್

ಚೆನ್ನೈ: ಹಿರಿಯ ಶ್ರೇಣಿಯ ಅಧಿಕಾರಿಗಳ ಮನೆಗಳಲ್ಲಿ ಸಮವಸ್ತ್ರಧಾರಿ ಪೊಲೀಸ್‌ ಸಿಬ್ಬಂದಿಯನ್ನು ಕೀಳು ಕೆಲಸಗಳಿಗೆ ತೊಡಗಿಸಿಕೊಳ್ಳುವ ಅಭ್ಯಾಸ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ಮಾಡಿದ ಕಪಾಳ ಮೋಕ್ಷ ಎಂದು ಮದ್ರಾಸ್‌ ಹೈಕೋರ್ಟ್‌ ತೀರ್ಪು ನೀಡಿದೆ.

ಇದೊಂದು ‘ವಸಾಹತುಶಾಹಿ ಗುಲಾಮಗಿರಿ ವ್ಯವಸ್ಥೆʼಯಾಗಿದ್ದು, ಕೂಡಲೇ ತೊಲಗಿಸಬೇಕು ಎಂದ ನ್ಯಾ. ಎಸ್‌ ಎಂ ಸುಬ್ರಮಣ್ಯಂ ಅವರಿದ್ದ ಏಕಸದಸ್ಯ ಪೀಠ ತಿಳಿಸಿತು.

“ಭಾರತದ ಜನತೆಯಾದ ನಾವು ಸ್ವಾತಂತ್ರ್ಯದ 75ನೇ ವರ್ಷಾಚರಣೆಯಲ್ಲಿ ತೊಡಗಿದ್ದೇವೆ. ತಮಿಳುನಾಡು ರಾಜ್ಯದ ಉನತ ಪೊಲೀಸ್‌ ಅಧಿಕಾರಿಗಳ ಮನೆಗಳಲ್ಲಿ ಅಧೀನ ಸಿಬ್ಬಂದಿಯಲ್ಲಿ ಕೀಳು ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ವಸಾಹತುಶಾಹಿ ಗುಲಾಮಗಿರಿ ವ್ಯವಸ್ಥೆ ಇನ್ನೂ ಚಾಲ್ತಿಯಲ್ಲಿದೆ ಎಂದು ಉಲ್ಲೇಖಿಸುವುದು ನೋವಿನ ಸಂಗತಿಯಾಗಿದೆ. ಇದು ನಮ್ಮ ಮಹಾನ್ ರಾಷ್ಟ್ರದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ಮಾಡಿದ ಕಪಾಳಮೋಕ್ಷವಾಗಿದೆ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ದೇಶ ಶಕ್ತಿಶಾಲಿ ಪ್ರಜಾಪ್ರಭುತ್ವದತ್ತ ಹೆಜ್ಜೆ ಇರಿಸುತ್ತಿದ್ದರೂ ತಮಿಳುನಾಡಿನ ಹಿರಿಯ ಪೊಲೀಸ್‌ ಅಧಿಕಾರಿಗಳು ವಸಾಹತುಶಾಹಿ ಗುಲಾಮಗಿರಿ ವ್ಯವಸ್ಥೆಯನ್ನು ಪಾಲಿಸುತ್ತಿದ್ದಾರೆ ಎಂದು ಏಕ ಸದಸ್ಯ ಪೀಠ ತಿಳಿಸಿತು.

ಇದು ಗಂಭೀರವಾಗಿ ಪರಿಗಣಿಸಬೇಕಾದ ವಿಚಾರ. ತೆರಿಗೆ ಪಾವತಿದಾರರ ಹಣ ಖರ್ಚು ಮಾಡಿ ತರಬೇತಿ ಕೊಡಿಸಿದ ಸಮವಸ್ತ್ರಧಾರಿ ಪೊಲೀಸ್ ಸಿಬ್ಬಂದಿ ಹಿರಿಯ ಅಧಿಕಾರಿಗಳ ಮನೆಗಳಲ್ಲಿ ಕೀಳು ಕೆಲಸಗಳನ್ನು ಮಾಡುತ್ತಿದ್ದಾರೆ. ಸಾರ್ವಜನಿಕರಿಗೆ ಹಿರಿಯ ಅಧಿಕಾರಿಗಳ ಮನಸ್ಥಿತಿಯನ್ನು ಪ್ರಶ್ನಿಸುವ ಹಕ್ಕಿದೆ” ಎಂದು ನ್ಯಾಯಾಲಯ ಹೇಳಿತು.

ಸಾರ್ವಜನಿಕ ಸೇವಕ ಎಂಬುದನ್ನು ಜನರ ಸೇವೆ ಸಲ್ಲಿಸಲೆಂದು ಮಾತ್ರ ಸಂವಿಧಾನ ಕಡ್ಡಾಯಗೊಳಿಸುತ್ತದೆ ಎಂಬ ಅಂಶವನ್ನು ನ್ಯಾಯಾಲಯ ಹೇಳಿತು.
ನಮ್ಮ ಮಹಾನ್ ರಾಷ್ಟ್ರದ ಪ್ರತಿಯೊಬ್ಬ ನಾಗರಿಕ “ರಾಣಿ ಅಥವಾ ರಾಜ” ಎಂದು ಭಾರತೀಯ ಸಂವಿಧಾನದ ಸ್ಫೂರ್ತಿ, ತತ್ವ ಮತ್ತು ನೀತಿ ಘೋಷಿಸುತ್ತದೆ. ಮೊಘಲ್ ಚಕ್ರವರ್ತಿಗಳ ಜಗತ್ತಿನಲ್ಲಿ ಯಾವುದೇ ಸಾರ್ವಜನಿಕ ಸೇವಕ ಇದ್ದಾರೆ ಎಂದು ಊಹಿಸಿಕೊಳ್ಳಲು ಅಥವಾ ಹಾಗೆ ಬದುಕಿರಲು ಸಾಧ್ಯವಿಲ್ಲ. ಸಂವಿಧಾನದ ಪ್ರಕಾರ ಅಂತಹ ಎಲ್ಲಾ ಅಧಿಕಾರಿಗಳು ಸಂವಿಧಾನದಲ್ಲಿ ನಿಗದಿಪಡಿಸಿದ ತತ್ವಗಳಿಗೆ ಅನುಗುಣವಾಗಿ ಸಂಸತ್ತು ಮತ್ತು ರಾಜ್ಯ ಶಾಸಕಾಂಗ ಜಾರಿಗೊಳಿಸಿದ ಕಾನೂನು ಮತ್ತು ನಿಯಮಗಳ ಪ್ರಕಾರ ಸಾರ್ವಜನಿಕ ಸೇವಕರು ಸಾರ್ವಜನಿಕ ಸೇವೆಗೆ ಬದ್ಧರಾಗಿದ್ದಾರೆ. ಅಶಿಸ್ತಿನ ಉನ್ನತ ಪೊಲೀಸ್‌ ಅಧಿಕಾರಿಗಳಿಗೆ ಸಮವಸ್ತ್ರಧಾರಿಗಳಲ್ಲಿ ಅದರಲ್ಲೂ ತಮ್ಮ ಅಧೀನ ಅಧಿಕಾರಿಗಳಲ್ಲಿ ಶಿಸ್ತು ಮೂಡಿಸುವ ನೈತಿಕತೆ ಇಲ್ಲ” ಎಂದು ನ್ಯಾಯಾಲಯ ಕಿಡಿಕಾರಿತು.

ರಾಜ್ಯ ಸರ್ಕಾರ 1979ರಲ್ಲಿಯೇ “ಆರ್ಡರ್ಲಿ” ವ್ಯವಸ್ಥೆ ರದ್ದುಗೊಳಿಸಿದ್ದರೂ, ತಮಿಳುನಾಡು ರಾಜ್ಯದಲ್ಲಿ ಈ ಪದ್ಧತಿಯನ್ನು ಮುಂದುವರೆಸಲಾಗಿದೆ ಎಂಬ ಅಂಶವನ್ನು ಉಲ್ಲೇಖಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತಪಡಿಸಿತು.

ಹೀಗಾಗಿ ಹಿರಿಯ ಅಧಿಕಾರಿಗಳ ಮನೆಗೆಲಸಕ್ಕೆ ಅಧೀನ ಪೊಲೀಸ್ ಸಿಬ್ಬಂದಿಯನ್ನು ತೊಡಗಿಸಿಕೊಳ್ಳುವ ಪದ್ಧತಿಯನ್ನು ತಕ್ಷಣವೇ ರದ್ದುಗೊಳಿಸುವಂತೆ ತಮಿಳುನಾಡು ಡಿಜಿಪಿಗೆ ಪೀಠ ಆದೇಶಿಸಿತು. ಪ್ರಕರಣದ ಮುಂದಿನ ವಿಚಾರಣೆ ಆಗಸ್ಟ್‌ 18ಕ್ಕೆ ನಿಗದಿಯಾಗಿದೆ.

andolana

Recent Posts

ರಾಜ್ಯದಲ್ಲಿ ಮತ್ತೆ ಟಿಪ್ಪು ಜಯಂತಿ: ಆಡಳಿತಾರೂಢ ಕಾಂಗ್ರೆಸ್‌ ನಡೆಗೆ ವಿಪಕ್ಷ ಬಿಜೆಪಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್‌ ಶಾಸಕ ಕಾಶಪ್ಪನವರ್‌…

56 mins ago

ರಾಜ್ಯದ ಮಹಿಳಾ ನೌಕರರಿಗೆ ಬಿಗ್‌ ಶಾಕ್:‌ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್‌ ಶಾಕ್‌ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.…

1 hour ago

ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್‌ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ…

1 hour ago

ಇಂಡಿಗೋ ಬಿಕ್ಕಟ್ಟಿನ ನಡುವೆ ಸಚಿವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ

ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ…

2 hours ago

ವಿಶ್ವದ 2ನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜ ಅನಾವರಣಗೊಳಿಸಿದ ಸಿಎಂ

ಬೆಳಗಾವಿ: ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಂದು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು.…

2 hours ago

ನಟ ರಿಷಬ್‌ ಶೆಟ್ಟಿ ತೊಡೆ ಮೇಲೆ ಮಲಗಿದ್ದು ಪಂಜುರ್ಲಿಯಲ್ಲ ನರ್ತಕ: ಸೋಷಿಯಲ್‌ ಮೀಡಿಯಾದಲ್ಲಿ ಆಕ್ರೋಶ

ಬೆಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಹರಕೆ ಕೋಲಾ ಮಾಡಿಸಿದ್ದ ರಿಷಬ್‌ ಶೆಟ್ಟಿ ತೊಡೆ ಮೇಲೆ ದೈವಾರಾಧಕ ಮಲಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.…

2 hours ago