ದೇಶ- ವಿದೇಶ

ಪೊಲೀಸ್ ಸಿಬ್ಬಂದಿಯನ್ನು ಕೀಳು ಕೆಲಸಗಳಿಗೆ ಹಚ್ಚುವುದು ಸಂವಿಧಾನದ ಮೇಲೆ ಮಾಡುವ ಕಪಾಳ ಮೋಕ್ಷ: ಮದ್ರಾಸ್ ಹೈಕೋರ್ಟ್

ಚೆನ್ನೈ: ಹಿರಿಯ ಶ್ರೇಣಿಯ ಅಧಿಕಾರಿಗಳ ಮನೆಗಳಲ್ಲಿ ಸಮವಸ್ತ್ರಧಾರಿ ಪೊಲೀಸ್‌ ಸಿಬ್ಬಂದಿಯನ್ನು ಕೀಳು ಕೆಲಸಗಳಿಗೆ ತೊಡಗಿಸಿಕೊಳ್ಳುವ ಅಭ್ಯಾಸ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ಮಾಡಿದ ಕಪಾಳ ಮೋಕ್ಷ ಎಂದು ಮದ್ರಾಸ್‌ ಹೈಕೋರ್ಟ್‌ ತೀರ್ಪು ನೀಡಿದೆ.

ಇದೊಂದು ‘ವಸಾಹತುಶಾಹಿ ಗುಲಾಮಗಿರಿ ವ್ಯವಸ್ಥೆʼಯಾಗಿದ್ದು, ಕೂಡಲೇ ತೊಲಗಿಸಬೇಕು ಎಂದ ನ್ಯಾ. ಎಸ್‌ ಎಂ ಸುಬ್ರಮಣ್ಯಂ ಅವರಿದ್ದ ಏಕಸದಸ್ಯ ಪೀಠ ತಿಳಿಸಿತು.

“ಭಾರತದ ಜನತೆಯಾದ ನಾವು ಸ್ವಾತಂತ್ರ್ಯದ 75ನೇ ವರ್ಷಾಚರಣೆಯಲ್ಲಿ ತೊಡಗಿದ್ದೇವೆ. ತಮಿಳುನಾಡು ರಾಜ್ಯದ ಉನತ ಪೊಲೀಸ್‌ ಅಧಿಕಾರಿಗಳ ಮನೆಗಳಲ್ಲಿ ಅಧೀನ ಸಿಬ್ಬಂದಿಯಲ್ಲಿ ಕೀಳು ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ವಸಾಹತುಶಾಹಿ ಗುಲಾಮಗಿರಿ ವ್ಯವಸ್ಥೆ ಇನ್ನೂ ಚಾಲ್ತಿಯಲ್ಲಿದೆ ಎಂದು ಉಲ್ಲೇಖಿಸುವುದು ನೋವಿನ ಸಂಗತಿಯಾಗಿದೆ. ಇದು ನಮ್ಮ ಮಹಾನ್ ರಾಷ್ಟ್ರದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ಮಾಡಿದ ಕಪಾಳಮೋಕ್ಷವಾಗಿದೆ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ದೇಶ ಶಕ್ತಿಶಾಲಿ ಪ್ರಜಾಪ್ರಭುತ್ವದತ್ತ ಹೆಜ್ಜೆ ಇರಿಸುತ್ತಿದ್ದರೂ ತಮಿಳುನಾಡಿನ ಹಿರಿಯ ಪೊಲೀಸ್‌ ಅಧಿಕಾರಿಗಳು ವಸಾಹತುಶಾಹಿ ಗುಲಾಮಗಿರಿ ವ್ಯವಸ್ಥೆಯನ್ನು ಪಾಲಿಸುತ್ತಿದ್ದಾರೆ ಎಂದು ಏಕ ಸದಸ್ಯ ಪೀಠ ತಿಳಿಸಿತು.

ಇದು ಗಂಭೀರವಾಗಿ ಪರಿಗಣಿಸಬೇಕಾದ ವಿಚಾರ. ತೆರಿಗೆ ಪಾವತಿದಾರರ ಹಣ ಖರ್ಚು ಮಾಡಿ ತರಬೇತಿ ಕೊಡಿಸಿದ ಸಮವಸ್ತ್ರಧಾರಿ ಪೊಲೀಸ್ ಸಿಬ್ಬಂದಿ ಹಿರಿಯ ಅಧಿಕಾರಿಗಳ ಮನೆಗಳಲ್ಲಿ ಕೀಳು ಕೆಲಸಗಳನ್ನು ಮಾಡುತ್ತಿದ್ದಾರೆ. ಸಾರ್ವಜನಿಕರಿಗೆ ಹಿರಿಯ ಅಧಿಕಾರಿಗಳ ಮನಸ್ಥಿತಿಯನ್ನು ಪ್ರಶ್ನಿಸುವ ಹಕ್ಕಿದೆ” ಎಂದು ನ್ಯಾಯಾಲಯ ಹೇಳಿತು.

ಸಾರ್ವಜನಿಕ ಸೇವಕ ಎಂಬುದನ್ನು ಜನರ ಸೇವೆ ಸಲ್ಲಿಸಲೆಂದು ಮಾತ್ರ ಸಂವಿಧಾನ ಕಡ್ಡಾಯಗೊಳಿಸುತ್ತದೆ ಎಂಬ ಅಂಶವನ್ನು ನ್ಯಾಯಾಲಯ ಹೇಳಿತು.
ನಮ್ಮ ಮಹಾನ್ ರಾಷ್ಟ್ರದ ಪ್ರತಿಯೊಬ್ಬ ನಾಗರಿಕ “ರಾಣಿ ಅಥವಾ ರಾಜ” ಎಂದು ಭಾರತೀಯ ಸಂವಿಧಾನದ ಸ್ಫೂರ್ತಿ, ತತ್ವ ಮತ್ತು ನೀತಿ ಘೋಷಿಸುತ್ತದೆ. ಮೊಘಲ್ ಚಕ್ರವರ್ತಿಗಳ ಜಗತ್ತಿನಲ್ಲಿ ಯಾವುದೇ ಸಾರ್ವಜನಿಕ ಸೇವಕ ಇದ್ದಾರೆ ಎಂದು ಊಹಿಸಿಕೊಳ್ಳಲು ಅಥವಾ ಹಾಗೆ ಬದುಕಿರಲು ಸಾಧ್ಯವಿಲ್ಲ. ಸಂವಿಧಾನದ ಪ್ರಕಾರ ಅಂತಹ ಎಲ್ಲಾ ಅಧಿಕಾರಿಗಳು ಸಂವಿಧಾನದಲ್ಲಿ ನಿಗದಿಪಡಿಸಿದ ತತ್ವಗಳಿಗೆ ಅನುಗುಣವಾಗಿ ಸಂಸತ್ತು ಮತ್ತು ರಾಜ್ಯ ಶಾಸಕಾಂಗ ಜಾರಿಗೊಳಿಸಿದ ಕಾನೂನು ಮತ್ತು ನಿಯಮಗಳ ಪ್ರಕಾರ ಸಾರ್ವಜನಿಕ ಸೇವಕರು ಸಾರ್ವಜನಿಕ ಸೇವೆಗೆ ಬದ್ಧರಾಗಿದ್ದಾರೆ. ಅಶಿಸ್ತಿನ ಉನ್ನತ ಪೊಲೀಸ್‌ ಅಧಿಕಾರಿಗಳಿಗೆ ಸಮವಸ್ತ್ರಧಾರಿಗಳಲ್ಲಿ ಅದರಲ್ಲೂ ತಮ್ಮ ಅಧೀನ ಅಧಿಕಾರಿಗಳಲ್ಲಿ ಶಿಸ್ತು ಮೂಡಿಸುವ ನೈತಿಕತೆ ಇಲ್ಲ” ಎಂದು ನ್ಯಾಯಾಲಯ ಕಿಡಿಕಾರಿತು.

ರಾಜ್ಯ ಸರ್ಕಾರ 1979ರಲ್ಲಿಯೇ “ಆರ್ಡರ್ಲಿ” ವ್ಯವಸ್ಥೆ ರದ್ದುಗೊಳಿಸಿದ್ದರೂ, ತಮಿಳುನಾಡು ರಾಜ್ಯದಲ್ಲಿ ಈ ಪದ್ಧತಿಯನ್ನು ಮುಂದುವರೆಸಲಾಗಿದೆ ಎಂಬ ಅಂಶವನ್ನು ಉಲ್ಲೇಖಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತಪಡಿಸಿತು.

ಹೀಗಾಗಿ ಹಿರಿಯ ಅಧಿಕಾರಿಗಳ ಮನೆಗೆಲಸಕ್ಕೆ ಅಧೀನ ಪೊಲೀಸ್ ಸಿಬ್ಬಂದಿಯನ್ನು ತೊಡಗಿಸಿಕೊಳ್ಳುವ ಪದ್ಧತಿಯನ್ನು ತಕ್ಷಣವೇ ರದ್ದುಗೊಳಿಸುವಂತೆ ತಮಿಳುನಾಡು ಡಿಜಿಪಿಗೆ ಪೀಠ ಆದೇಶಿಸಿತು. ಪ್ರಕರಣದ ಮುಂದಿನ ವಿಚಾರಣೆ ಆಗಸ್ಟ್‌ 18ಕ್ಕೆ ನಿಗದಿಯಾಗಿದೆ.

andolana

Recent Posts

ರಾಜ್ಯದಲ್ಲಿ ಇಬ್ಬರು ತಲೆಕೆಟ್ಟ ಮಂತ್ರಿಗಳಿದ್ದಾರೆ: ಶಾಸಕ ಜನಾರ್ಧನ ರೆಡ್ಡಿ

ಕೊಪ್ಪಳ: ಯಾವುದೇ ಕ್ಷಣದಲ್ಲಿ ರಾಜ್ಯದಲ್ಲಿ ಅಧಿಕೃ ಹಸ್ತಾಂತರವಾಗಬಹುದು ಎಂದು ಶಾಸಕ ಜನಾರ್ಧನ ರೆಡ್ಡಿ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಕೊಪ್ಪಳದಲ್ಲಿ…

40 mins ago

ರಾಜ್ಯದಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ನಾಯಕತ್ವ ಗೊಂದಲ ಸೃಷ್ಟಿ ಮಾಡಿಲ್ಲ: ಮಲ್ಲಿಕಾರ್ಜುನ ಖರ್ಗೆ

ಕಲಬುರ್ಗಿ: ರಾಜ್ಯದಲ್ಲಿ ನಾಯಕತ್ವ ಗೊಂದಲವನ್ನು ಹೈಕಮಾಂಡ್‌ ಸೃಷ್ಟಿ ಮಾಡಿಲ್ಲ. ಲೋಕಲ್‌ನವರೇ ಮಾಡಿಕೊಂಡಿದ್ದಾರೆ. ಸ್ಥಳೀಯ ನಾಯಕರೇ ಇದನ್ನು ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಹೈಕಮಾಂಡ್‌…

1 hour ago

ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ

ಬೆಂಗಳೂರು: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ…

2 hours ago

ಯಾರು ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಾಕಿದ ದುಷ್ಕರ್ಮಿಗಳು

ಮಂಡ್ಯ: ಯಾರು ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದುಷ್ಕರ್ಮಿಗಳ ಅಮಾನವೀಯ ಕೃತ್ಯ ಪಾಂಡವಪುರ ತಾಲ್ಲೂಕಿನ ಚಿಕ್ಕಕೊಪ್ಪಲು…

2 hours ago

ರಾಜ್ಯದ ಮಹಿಳೆಯರಿಗೆ ಗುಡ್‌ನ್ಯೂಸ್:‌ ನಾಳೆಯಿಂದಲೇ ಬ್ಯಾಂಕ್‌ ಖಾತೆಗೆ ಗೃಹಲಕ್ಷ್ಮೀ ಹಣ

ಬೆಂಗಳೂರು: ರಾಜ್ಯದ ಪ್ರತಿ ಯಜಮಾನಿಯರಿಗೆ ಹೊಸ ವರ್ಷಕ್ಕೂ ಮುನ್ನವೇ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ಕೊಟ್ಟಿದೆ. ಸೋಮವಾರದಿಂದಲೇ ಪ್ರತಿ ಮನೆ ಗೃಹಲಕ್ಷ್ಮೀಯರ…

3 hours ago

ಹುಲಿ ಸೆರೆಗೆ ಚಾಮರಾಜನಗರದಲ್ಲಿ ಆಪರೇಷನ್‌ ಬೀಸ್ಟ್‌ ಆರಂಭ: ಡ್ರೋನ್‌ ಮೂಲಕ ಕಾರ್ಯಾಚರಣೆ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿದ್ದು, ಹುಲಿ ಕಾರ್ಯಾಚರಣೆಗೆ ಅರಣ್ಯ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…

3 hours ago