ದೇಶ- ವಿದೇಶ

ಬಿಸಿಸಿಐನ ನೂತನ ಕಾರ್ಯದರ್ಶಿಯಾಗಿ ದೇವಜಿತ್‌ ಸೈಕಿಯಾ ನೇಮಕ

ಮುಂಬೈ: ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಯ ನೂತನ ಕಾರ್ಯದರ್ಶಿಯಾಗಿ ಅಸ್ಸಾಂನ ಮಾಜಿ ಕ್ರಿಕೆಟಿಗ ದೇವಜಿತ್‌ ಸೈಕಿಯಾ ನೇಮಕವಾಗಿದ್ದಾರೆ.

ಐಸಿಸಿಯ ಅಧ್ಯಕ್ಷ ಜಯ್‌ ಶಾ ಅವರಿಂದ ತೆರವಾದ ಸ್ಥಾನಕ್ಕೆ ಸೈಕಿಯಾ ಆಯ್ಕೆಯಾಗಿದ್ದು, ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಇಂದು ಬಿಸಿಸಿಐ ಅಧ್ಯಕ್ಷ ರೋಜರ್‌ ಬಿನ್ನಿ, ಟೀ ಇಂಡಿಯಾ ನಾಯಕ ರೋಹಿತ್‌ ಶರ್ಮಾ, ಕೋಚ್‌ ಗೌತಮ್‌ ಗಂಭೀರ್‌ ಜೊತೆ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ಸಭೆಯಲ್ಲಿ ಇತ್ತಿಚೀನ ದಿನಗಳ ಟೂರ್ನಿಗಳಲ್ಲಿ ಟೀ ಇಂಡಿಯಾದ ಕಳಪೆ ಪ್ರದರ್ಶನಕ್ಕೆ ಕಾರಣ ಏನೆಂಬುದನ್ನು ಚರ್ಚಿಸಲಾಗಿದೆ. ಜೊತೆಗೆ ಮುಂದಿನ ಸವಾಲುಗಳ ಸಿದ್ದತೆಯ ಬಗ್ಗೆಯೂ ಮಾತುಕತೆ ನಡೆಸಲಾಗಿದೆ.

ಸೈಕಿಯಾ ಅಸ್ಸಾಂ ಮೂಲದ ಮಾಜಿ ಕ್ರಿಕೆಟಿಗ. 1990-91 ರ ನಡುವೆ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 4 ಪಂದ್ಯಗಳನ್ನು ಆಡಿರುವ ಸೈಕಿಯಾ ಒಟ್ಟು 53 ರನ್‌ಗಳಿಸಿ 9 ವಿಕೆಟ್‌ ಪಡೆದಿದ್ದರು. ಬಳಿಕ ಕಾನೂನು ವೃತ್ತಿಯಲ್ಲಿ ತೊಡಗಿ ಗುವಾಹಟಿ ಹೈಕೋರ್ಟ್‌ನಲ್ಲಿ ವಕೀಲರಾಗಿ ಅಭ್ಯಾಸ ಮಾಡಿದ್ದಾರೆ. ಇದಕ್ಕೂ ಮುಂಚೆ ಸ್ಪೋರ್ಟ್ಸ್‌ ಕೋಟಾದಡಿ ಉತ್ತರ ಗಡಿನಾಡು ರೈಲ್ವೆ ಮತ್ತು ಭಾರತೀಯ ರಿಸರ್ವ್‌ ಬ್ಯಾಂಕ್‌ (RBI) ನಲ್ಲಿ ಸೇವೆ ಸಲ್ಲಿಸಿದ್ದರು.

ಪುನಃ 2019ರಲ್ಲಿ ಕ್ರೀಡಾಲೋಕಕ್ಕೆ ಮರಳಿದ ಸೈಕಿಯಾ, ಅಸ್ಸಾಂ ಕ್ರಿಕೆಟ್‌ ಅಸೋಸಿಯೇಷನ್‌ (ACA)ನ ಉಪಾಧ್ಯಕ್ಷರಾಗಿ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಇದಾದ ನಂತರ 2022ರಲ್ಲಿ ಬಿಸಿಸಿಐನ ಜಂಟಿ ಕಾರ್ಯದರ್ಶಿಯಾಗಿಯೂ ಕೆಲಸ ನಿರ್ವಹಿಸಿದ್ದರು.

 

ಆಂದೋಲನ ಡೆಸ್ಕ್

Recent Posts

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ: ಬಸ್ ಟಿಕೆಟ್‌ ದರ ದುಪ್ಪಟ್ಟು ಏರಿಕೆ

ಬೆಂಗಳೂರು: ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಇರುವುದರಿಂದ ಪ್ರಯಾಣಿಕರ ಪರದಾಟ ಮುಂದುವರೆದಿದೆ. ಇಂಡಿಗೋ ವಿಮಾನ ಸಮಸ್ಯೆ ಬೆನ್ನಲ್ಲೇ ಇತರ ವಿಮಾನಗಳ…

13 mins ago

2026ರ ಐಪಿಎಲ್‌ ಬೆಂಗಳೂರಿನಲ್ಲೇ ಫಿಕ್ಸ್: ಡಿಸಿಎಂ ಡಿ.ಕೆ.ಶಿವಕುಮಾರ್‌ ಘೋಷಣೆ

ಬೆಂಗಳೂರು: 2026ರ ಐಪಿಎಲ್‌ಗೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕೆಎಸ್‌ಸಿಎ ಚುನಾವಣೆ ಮತದಾನದ ವೇಳೆ…

36 mins ago

ದೆಹಲಿ: ಇಂದು 108 ಇಂಡಿಗೋ ವಿಮಾನಗಳ ಹಾರಾಟ ರದ್ದು

ನವದೆಹಲಿ: ಇಂಡಿಗೋ ವಿಮಾನದ ಅಧ್ವಾನ ಆರನೇ ದಿನವೂ ಮುಂದುವರಿದಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ನೂರಕ್ಕೂ…

47 mins ago

ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ…

2 hours ago

ನಾಳೆಯಿಂದ ಬೆಳಗಾವಿಯ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ

ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗುವ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ. ಸುಮಾರು ಆರು…

2 hours ago

ಗೋವಾದಲ್ಲಿ 25 ಮಂದಿ ಸಜೀವ ದಹನ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್‌ ಬಳಿಯ ಅರ್ಪೊರಾದ ನೈಟ್‌ಕ್ಲಬ್‌ ಬೀರ್ಚ್‌ ಬೈ ರೋಮಿಯೋ ಲೇನ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…

3 hours ago