ದೇಶ- ವಿದೇಶ

ಧರ್ಮಸ್ಥಳ ಪ್ರಕರಣ : ಎನ್‌ಐಎ ತನಿಖೆಗೆ ವಹಿಸಲು ಒತ್ತಾಯ

ಹೊಸದಿಲ್ಲಿ : ದೇಶಾದ್ಯಂತ ಭಾರೀ ವಿವಾದ ಸೃಷ್ಟಿಸಿರುವ ಕರ್ನಾಟಕದ ಧರ್ಮಸ್ಥಳದ ನಡೆದಿದೆ ಎನ್ನಲಾದ ನಿಗೂಢ ಸಾವು, ಅತ್ಯಾಚಾರ ಪ್ರಕರಣಗಳ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ಕ್ಕೆ ಒತ್ತಾಯಿಸುಬೇಕು ಎಂದು ಒತ್ತಾಯಿಸಿ ಕರ್ನಾಟಕ ಸಂತರ ನಿಯೋಗವು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.

ಹೊಸದಿಲ್ಲಿಯಲ್ಲಿ ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನಿಯೋಗವು ಭೇಟಿಯಾಗಿ ಮನವಿ ಸಲ್ಲಿಸಿತು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಚರ್ಚೆಯಲ್ಲಿ, ಸ್ವಾಮೀಜಿಗಳು ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರದ ಕುರಿತು ವಿವರವಾಗಿ ಮಾಹಿತಿ ನೀಡಿದ್ದಾರೆ. ಧರ್ಮಸ್ಥಳವು ಲಕ್ಷಾಂತರ ಭಕ್ತರ ಆಧ್ಯಾತ್ಮಿಕ ಕೇಂದ್ರವಾಗಿದ್ದು, ಇದರ ವಿರುದ್ಧ ಯೋಜಿತ ರೀತಿಯಲ್ಲಿ ಷಡ್ಯಂತ್ರ ನಡೆಯುತ್ತಿದೆ. ಶಬರಿಮಲೆ ಮತ್ತು ತಿರುಪತಿಯಂತಹ ಇತರ ಪವಿತ್ರ ಧಾರ್ಮಿಕ ಕ್ಷೇತ್ರಗಳ ಬಳಿಕ, ಈಗ ಧರ್ಮಸ್ಥಳವನ್ನು ಗುರಿಯಾಗಿಸಲಾಗಿದೆ. ಹಿಂದೂ ಧರ್ಮ ಕ್ಷೇತ್ರಗಳನ್ನು ಸಂಶಯದಿಂದ ನೋಡುವಂತೆ ಮಾಡುವ ಷಡ್ಯಂತ್ರವಿದು. ಜನರು ದೇವಸ್ಥಾನಗಳಿಗೆ ಹೋಗದಂತೆ ತಡೆಯುವ ದುರುದ್ದೇಶ ಇದರ ಹಿಂದಿದೆ ಎಂದು ನಿಯೋಗವು ಬೇಸರ ಹೊರಹಾಕಿದರು.

ಇದನ್ನು ಓದಿ:ಭಾರತದ ಎಲ್ಲಾ ರಾಜ್ಯಗಳಿಗೂ‌ ಮೈಸೂರಿನಿಂದ ರೈಲು ಓಡಿಸುವ ಯೋಜನೆ: ಸಚಿವ ವಿ.ಸೋಮಣ್ಣ

ನಿಯೋಗದ ಮನವಿಯನ್ನು ಸಹನೆಯಿಂದಲೇ ಆಲಿಸಿದ ಅಮಿತ್ ಶಾ, ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಕೇಂದ್ರ ಸರ್ಕಾರವು ಈ ವಿಷಯದಲ್ಲಿ ಗಂಭೀರವಾಗಿ ಕ್ರಮ ಕೈಗೊಳ್ಳಲಿದೆ. ಧರ್ಮಸ್ಥಳ ಪ್ರಕರಣದ ಬಗ್ಗೆ ಸಚಿವ ಸಂಪುಟ ಸಭೆ ನಡೆಸಲಿದೆ. ಧರ್ಮ ಕ್ಷೇತ್ರಗಳ ವಿರುದ್ಧದ ಅಪಪ್ರಚಾರಕ್ಕೆ ಕಡಿವಾಣ ಹಾಕಲು ಹೊಸ ಕಾನೂನು ತರುತ್ತೇವೆ. ನೀವು ಸಮಾಜವನ್ನು ಜಾಗೃತಿಗೊಳಿಸಿ ತಿಳಿಸಿದ್ದಾರೆ.

ಧರ್ಮಸ್ಥಳದ ಬಾಹುಬಲಿ ಬೆಟ್ಟದವರೆಗೆ ತಲುಪಿರುವ ಉತ್ಖನನ ಕಾರ್ಯಾಚರಣೆಯ ಬಗ್ಗೆ ಸ್ವಾಮೀಜಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಈ ಉತ್ಖನನವು ಶ್ರೀ ಕ್ಷೇತ್ರ ಧರ್ಮಸ್ಥಳದ ಆಧ್ಯಾತ್ಮಿಕ ಮಹತ್ವವನ್ನು ಕೆಡವುತ್ತಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಜೊತೆಗೆ, ಈ ಪ್ರಕರಣದ ಹಿಂದೆ ದೊಡ್ಡ ಷಡ್ಯಂತ್ರವಿದೆ ಎಂದು ಆರೋಪಿಸಿದ ಸ್ವಾಮೀಜಿಗಳು, ಈ ಷಡ್ಯಂತ್ರದ ಸತ್ಯಾಂಶವನ್ನು ಬಯಲಿಗೆ ತರಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನು ಓದಿ:ಮೈಸೂರು| ಪರಮೇಶ್ವರ್‌ಗೆ ಮುಂದೆ ಅತ್ಯುನ್ನತ ರಾಜಕೀಯ ಸ್ಥಾನಮಾನ ಸಿಗಲಿ: ಎಚ್.ಎ.ವೆಂಕಟೇಶ್‌

ಪಂಚಮಸಾಲಿ ಲಿಂಗಾಯತ ಮಠದ ವಚನಾನಂದ ಸ್ವಾಮೀಜಿ ನೇತೃತ್ವದ ಈ ನಿಯೋಗದಲ್ಲಿ, ಮಂಗಳೂರಿನ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಸೇರಿದಂತೆ ವಿವಿಧ ಪೀಠಗಳ ಒಟ್ಟು ಎಂಟು ಸ್ವಾಮೀಜಿಗಳು ಇದ್ದರು. ಈ ಭೇಟಿಯ ಸಂದರ್ಭದಲ್ಲಿ, ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ ಮತ್ತು ಅಪಪ್ರಚಾರದ ಕುರಿತು ಸುದೀರ್ಘ ಚರ್ಚೆ ನಡೆದಿದೆ ಎಂಬುದನ್ನು ನಿಯೋಗವು ಮನವರಿಕೆ ಮಾಡಿಕೊಟ್ಟಿತು.

ಸ್ವಾಮೀಜಿಗಳ ನಿಯೋಗ ನೇರವಾಗಿ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿರುವುದು ಪ್ರಕರಣವನ್ನು ಎನ್‌ಐಎಗೆ ವಹಿಸುವ ಸಾಧ್ಯತೆಯನ್ನು ಹೆಚ್ಚಿಸಿದೆ.

 

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

21 mins ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

1 hour ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

12 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

12 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

12 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

12 hours ago