ದೇಶ- ವಿದೇಶ

ಧರ್ಮಸ್ಥಳ ಪ್ರಕರಣ : ಎನ್‌ಐಎ ತನಿಖೆಗೆ ವಹಿಸಲು ಒತ್ತಾಯ

ಹೊಸದಿಲ್ಲಿ : ದೇಶಾದ್ಯಂತ ಭಾರೀ ವಿವಾದ ಸೃಷ್ಟಿಸಿರುವ ಕರ್ನಾಟಕದ ಧರ್ಮಸ್ಥಳದ ನಡೆದಿದೆ ಎನ್ನಲಾದ ನಿಗೂಢ ಸಾವು, ಅತ್ಯಾಚಾರ ಪ್ರಕರಣಗಳ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ಕ್ಕೆ ಒತ್ತಾಯಿಸುಬೇಕು ಎಂದು ಒತ್ತಾಯಿಸಿ ಕರ್ನಾಟಕ ಸಂತರ ನಿಯೋಗವು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.

ಹೊಸದಿಲ್ಲಿಯಲ್ಲಿ ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನಿಯೋಗವು ಭೇಟಿಯಾಗಿ ಮನವಿ ಸಲ್ಲಿಸಿತು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಚರ್ಚೆಯಲ್ಲಿ, ಸ್ವಾಮೀಜಿಗಳು ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರದ ಕುರಿತು ವಿವರವಾಗಿ ಮಾಹಿತಿ ನೀಡಿದ್ದಾರೆ. ಧರ್ಮಸ್ಥಳವು ಲಕ್ಷಾಂತರ ಭಕ್ತರ ಆಧ್ಯಾತ್ಮಿಕ ಕೇಂದ್ರವಾಗಿದ್ದು, ಇದರ ವಿರುದ್ಧ ಯೋಜಿತ ರೀತಿಯಲ್ಲಿ ಷಡ್ಯಂತ್ರ ನಡೆಯುತ್ತಿದೆ. ಶಬರಿಮಲೆ ಮತ್ತು ತಿರುಪತಿಯಂತಹ ಇತರ ಪವಿತ್ರ ಧಾರ್ಮಿಕ ಕ್ಷೇತ್ರಗಳ ಬಳಿಕ, ಈಗ ಧರ್ಮಸ್ಥಳವನ್ನು ಗುರಿಯಾಗಿಸಲಾಗಿದೆ. ಹಿಂದೂ ಧರ್ಮ ಕ್ಷೇತ್ರಗಳನ್ನು ಸಂಶಯದಿಂದ ನೋಡುವಂತೆ ಮಾಡುವ ಷಡ್ಯಂತ್ರವಿದು. ಜನರು ದೇವಸ್ಥಾನಗಳಿಗೆ ಹೋಗದಂತೆ ತಡೆಯುವ ದುರುದ್ದೇಶ ಇದರ ಹಿಂದಿದೆ ಎಂದು ನಿಯೋಗವು ಬೇಸರ ಹೊರಹಾಕಿದರು.

ಇದನ್ನು ಓದಿ:ಭಾರತದ ಎಲ್ಲಾ ರಾಜ್ಯಗಳಿಗೂ‌ ಮೈಸೂರಿನಿಂದ ರೈಲು ಓಡಿಸುವ ಯೋಜನೆ: ಸಚಿವ ವಿ.ಸೋಮಣ್ಣ

ನಿಯೋಗದ ಮನವಿಯನ್ನು ಸಹನೆಯಿಂದಲೇ ಆಲಿಸಿದ ಅಮಿತ್ ಶಾ, ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಕೇಂದ್ರ ಸರ್ಕಾರವು ಈ ವಿಷಯದಲ್ಲಿ ಗಂಭೀರವಾಗಿ ಕ್ರಮ ಕೈಗೊಳ್ಳಲಿದೆ. ಧರ್ಮಸ್ಥಳ ಪ್ರಕರಣದ ಬಗ್ಗೆ ಸಚಿವ ಸಂಪುಟ ಸಭೆ ನಡೆಸಲಿದೆ. ಧರ್ಮ ಕ್ಷೇತ್ರಗಳ ವಿರುದ್ಧದ ಅಪಪ್ರಚಾರಕ್ಕೆ ಕಡಿವಾಣ ಹಾಕಲು ಹೊಸ ಕಾನೂನು ತರುತ್ತೇವೆ. ನೀವು ಸಮಾಜವನ್ನು ಜಾಗೃತಿಗೊಳಿಸಿ ತಿಳಿಸಿದ್ದಾರೆ.

ಧರ್ಮಸ್ಥಳದ ಬಾಹುಬಲಿ ಬೆಟ್ಟದವರೆಗೆ ತಲುಪಿರುವ ಉತ್ಖನನ ಕಾರ್ಯಾಚರಣೆಯ ಬಗ್ಗೆ ಸ್ವಾಮೀಜಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಈ ಉತ್ಖನನವು ಶ್ರೀ ಕ್ಷೇತ್ರ ಧರ್ಮಸ್ಥಳದ ಆಧ್ಯಾತ್ಮಿಕ ಮಹತ್ವವನ್ನು ಕೆಡವುತ್ತಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಜೊತೆಗೆ, ಈ ಪ್ರಕರಣದ ಹಿಂದೆ ದೊಡ್ಡ ಷಡ್ಯಂತ್ರವಿದೆ ಎಂದು ಆರೋಪಿಸಿದ ಸ್ವಾಮೀಜಿಗಳು, ಈ ಷಡ್ಯಂತ್ರದ ಸತ್ಯಾಂಶವನ್ನು ಬಯಲಿಗೆ ತರಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನು ಓದಿ:ಮೈಸೂರು| ಪರಮೇಶ್ವರ್‌ಗೆ ಮುಂದೆ ಅತ್ಯುನ್ನತ ರಾಜಕೀಯ ಸ್ಥಾನಮಾನ ಸಿಗಲಿ: ಎಚ್.ಎ.ವೆಂಕಟೇಶ್‌

ಪಂಚಮಸಾಲಿ ಲಿಂಗಾಯತ ಮಠದ ವಚನಾನಂದ ಸ್ವಾಮೀಜಿ ನೇತೃತ್ವದ ಈ ನಿಯೋಗದಲ್ಲಿ, ಮಂಗಳೂರಿನ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಸೇರಿದಂತೆ ವಿವಿಧ ಪೀಠಗಳ ಒಟ್ಟು ಎಂಟು ಸ್ವಾಮೀಜಿಗಳು ಇದ್ದರು. ಈ ಭೇಟಿಯ ಸಂದರ್ಭದಲ್ಲಿ, ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ ಮತ್ತು ಅಪಪ್ರಚಾರದ ಕುರಿತು ಸುದೀರ್ಘ ಚರ್ಚೆ ನಡೆದಿದೆ ಎಂಬುದನ್ನು ನಿಯೋಗವು ಮನವರಿಕೆ ಮಾಡಿಕೊಟ್ಟಿತು.

ಸ್ವಾಮೀಜಿಗಳ ನಿಯೋಗ ನೇರವಾಗಿ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿರುವುದು ಪ್ರಕರಣವನ್ನು ಎನ್‌ಐಎಗೆ ವಹಿಸುವ ಸಾಧ್ಯತೆಯನ್ನು ಹೆಚ್ಚಿಸಿದೆ.

 

ಆಂದೋಲನ ಡೆಸ್ಕ್

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

11 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

14 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

16 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

16 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

16 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

17 hours ago