ದೇಶ- ವಿದೇಶ

ಧರ್ಮಸ್ಥಳ ಪ್ರಕರಣ : ಕೇರಳದ ಸಂತೋಷ್‌ಕುಮಾರ್ ಹೆಸರು ತಳುಕು

ತಿರುವನಂತಪುರಂ : ಇಡೀ ರಾಷ್ಟ್ರದ ಗಮನ ಸೆಳೆದಿರುವ ಧರ್ಮಸ್ಥಳ ಪ್ರಕರಣ ಸಂಬಂಧ ಕೇರಳದ ಕಮ್ಯುನಿಸ್ಟ್(ಸಿಪಿಐ) ಪಕ್ಷದ ಸಂಸದರೊಬ್ಬರ ಹೆಸರು ತಳುಕು ಹಾಕಿಕೊಂಡಿದೆ. ಕಮ್ಯುನಿಸ್ಟ್ ಪಕ್ಷದ ರಾಜ್ಯಸಭಾ ಸದಸ್ಯ ಸಂತೋಷ್‌ಕುಮಾರ್ ಅವರೇ ತಲೆಬುರುಡೆಯನ್ನು ಪ್ರಕರಣದ ಪ್ರಮುಖ ಆರೋಪಿ ಪ್ರಸ್ತುತ ಎಸ್‌ಐಟಿ ವಶದಲ್ಲಿರುವ ಚಿನ್ನಯ್ಯ ಅವರಿಗೆ ತಂದುಕೊಟ್ಟಿದ್ದರು ಎಂಬುದು ತನಿಖೆಯಿಂದ ಬೆಳಕಿಗೆ ಬಂದಿದೆ.

ಚಿನ್ನಯ್ಯ, ಗಿರೀಶ್ ಮಟ್ಟಣ್ಣವರ್, ಟಿ.ಜಯಂತ್ ಅವರು ತಿರುವಂತನಪುರಕ್ಕೆ ತೆರಳಿ ರಾಜ್ಯಸಭಾ ಸದಸ್ಯರೂ ಆಗಿರುವ ಸಂತೋಷ್‌ಕುಮಾರ್ ಅವರನ್ನು ಭೇಟಿಯಾಗಿ ತಲೆಬುರುಡೆ ಪ್ರಕರಣದ ಬಗ್ಗೆ ಯಾವ ಯಾವ ತಂತ್ರಗಳನ್ನು ರೂಪಿಸಬೇಕು ಎಂಬುದರ ಬಗ್ಗೆ ರಹಸ್ಯ ಸ್ಥಳವೊಂದರಲ್ಲಿ ಚರ್ಚೆ ನಡೆಸಿದ್ದರು.

ಎಸ್‌ಐಟಿ ವಶದಲ್ಲಿರುವ ಚಿನ್ನಯ್ಯ ಹಾಗೂ ವಿಚಾರಣೆಗೆ ಹಾಜರಾಗಿದ್ದ ಗಿರೀಶ್ ಮಟ್ಟಣ್ಣವರ್, ಜಯಂತ್, ಮಹೇಶ್ ಶೆಟ್ಟಿ ತಿಮರೋಡಿ ಅವರ ವಿಚಾರಣೆ ವೇಳೆ ಈ ಪ್ರಕರಣದ ಮಾಸ್ಟರ್ ಮೈಂಡ್ ಸಂತೋಷ್‌ಕುಮಾರ್ ಎಂಬುದನ್ನು ಬಹಿರಂಗಪಡಿಸಿದ್ದಾರೆ.

ಹೊಸದಿಲ್ಲಿಗೂ ತೆರಳಿದ್ದ ಈ ತಂಡವು ಸಂಸದರನ್ನು ಭೇಟಿಯಾಗಿ ಧರ್ಮಸ್ಥಳದಲ್ಲಿ ಕಳೆದ ಹಲವಾರು ವರ್ಷದಿಂದ ಶವಗಳನ್ನು ಹೂತು ಹಾಕಿದ್ದೇನೆ. ಈಗ ನನಗೆ ಇದರ ಪಾಪಪ್ರಜ್ಞೆ ಕಾಡುತ್ತಿದೆ. ಪೊಲೀಸರು ತನಿಖೆ ನಡೆಸಿದರೆ ಎಲ್ಲವನ್ನೂ ಬಾಯಿ ಬಿಡುವುದಾಗಿ ಹೇಳುವಂತೆ ಚಿನ್ನಯ್ಯನ ತಲೆಗೆ ತುಂಬಿದ್ದು ಈ ತಂಡ ಎನ್ನಲಾಗಿದೆ.

ನಾನು ತಂಡ ಹೇಳಿದಂತೆ ಕೇಳಿದ್ದೆ. ಇದರಲ್ಲಿ ನನ್ನ ಪಾತ್ರವೇನಿಲ್ಲ ಎಂದು ಕಟಕಟೆಯಲ್ಲಿ ಕಣ್ಣೀರು ಹಾಕಿದ್ದ ಚಿನ್ನಯ್ಯ ತನಗೆ ಯಾವ ರೀತಿ ಆಮಿಷವೊಡ್ಡಿದರು, ತಲೆಬುರಡೆಯನ್ನು ತಂದಿದ್ದು ಎಲ್ಲಿಂದ? ದಿಲ್ಲಿಯಲ್ಲಿ ಭೇಟಿಯಾಗಿದ್ದು ಯಾರನ್ನು? ತಿರುವಂತನಪುರದಲ್ಲಿ ಭೇಟಿಯಾಗಿದ್ದು ಸೇರಿದಂತೆ ಹಲವು ವಿಷಯಗಳನ್ನು ಬಾಯಿಬಿಟ್ಟಿದ್ದಾನೆ.

ಇದೀಗ ಎಸ್‌ಐಟಿ ಅಽಕಾರಿಗಳು ಪ್ರಕರಣದ ಮಾಸ್ಟರ್ ಮೈಂಡ್ ಎಂದೇ ಆರೋಪಿಸಿರುವ ರಾಜ್ಯಸಭಾ ಸದಸ್ಯನಿಗೆ ನೋಟಿಸ್ ನೀಡಲು ಸಿದ್ಧತೆ ನಡೆಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ದರ್ಶನ್‌ಗೆ ಫಿಸಿಯೊಥೆರಪಿ ಸ್ಟಾಪ್‌ ಮಾಡಿದ ವೈದ್ಯರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್‌ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್‌…

34 seconds ago

ಶಾರುಖ್‌ ಖಾನ್‌ ಪುತ್ರನಿಂದ ದುರ್ವತನೆ ಪ್ರಕರಣ: ಡಿಜಿ & ಡಿಜಿಪಿಗೆ ದೂರು ಸಲ್ಲಿಕೆ

ಬೆಂಗಳೂರು: ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಬೆಂಗಳೂರಿನ ಪಬ್‌ನಲ್ಲಿ ಮಿಡಲ್‌ ಫಿಂಗಲ್‌ ತೋರಿಸಿ ದುರ್ವತನೆ ಮೆರೆದಿದ್ದು,…

21 mins ago

1000ಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ರದ್ದು: ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಯಾಣಿಕರು

ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…

43 mins ago

9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಕಾಮುಕನನ್ನು ಹಿಡಿದು ಥಳಿಸಿದ ಗ್ರಾಮಸ್ಥರು

ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…

1 hour ago

ಓದುಗರ ಪತ್ರ: ಕೆ.ಕೆ.ಮಹಮದ್ ಅವರ ಹೇಳಿಕೆ ಪ್ರಬುದ್ಧ ನಡೆ

ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…

2 hours ago

ಓದುಗರ ಪತ್ರ: ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ನಾಗರಿಕ ಸ್ನೇಹಿ

ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…

2 hours ago