ದೇಶ- ವಿದೇಶ

ಪೋಪ್‌ ಫ್ರಾನ್ಸಿಸ್‌ ಅಂತ್ಯಕ್ರಿಯೆಗೆ ಗಣ್ಯರು ಭಾಗಿ; ಭಿಗಿ ಭದ್ರತೆ

ವ್ಯಾಟಿಕನ್‌ : ಕಳೆದ ಸೋಮವಾರ ನಿಧನರಾದ ಪೋಪ್‌ ಫ್ರಾನ್ಸಿಸ್‌ ಅವರ ಅಂತ್ಯಸಂಸ್ಕಾರದ ಪ್ರಕ್ರಿಯೆಗಳು ವ್ಯಾಟಿಕನ್‌ ಸಿಟಿಯ ಬೆಸಿಲಕಾದಾ ಸಾಂಟಾ ಮಾರಿಯ ಮ್ಯಾಗಿಯೋರ್‌ನಲ್ಲಿ ಆರಂಭವಾಗಿದೆ. ಜಗತ್ತಿಗ ಅನೇಕ ಗಣ್ಯರಯ ಪಾಲ್ಗೊಂಡಿದ್ದಾರೆ.

ಪೋಪ್‌ ಅವರ ಅಂತಿಮ ದರ್ಶನಕ್ಕೆ ಸುಮಾರು 2 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದ್ದು, ಬಿಗಿ ಭದ್ರತೆ ಏರ್ಪಡಿಸಲಾಗಿದೆ.

ಅಂತ್ಯಕ್ರಿಯೆಯನ್ನು ಪೋಪ್‌ ಅವರ ಮಾತಿನಂತೆ ಸರಳ ವಿಧಾನದಲ್ಲೆ ನಡೆಸಲಾಗುತ್ತಿದೆ. ಇದೇ ಮಾದರಿಯಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ನಡೆದಿದೆ ಎಂದು ವರದಿಯಾಗಿದೆ.

ಕಳೆದ ಭಾನುವಾರ ಈಸ್ಟರ್‌ ದಿನದಂದು ಸಾರ್ವಜನಿಕರಿಗೆ ದರ್ಶನ ನೀಡಿದ 88 ವರ್ಷದ ಪೋಪ್‌ ಸೋಮವಾರ ನಿಧನರಾದರು. ಶನಿವಾರ(ಏ.26) ನಡೆಯಲಿರುವ ಅಂತ್ಯಕ್ರಿಯೆಯಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು, ಅಮೆರಿಕ, ಪ್ರಾನ್ಸ್, ಅರ್ಜೇಂಟೀನಾ ಹಾಗೂ ವಿಶ್ವಸಂಸ್ಥೆಯ ಅಧ್ಯಕ್ಷರು ಸೇರಿದಂತೆ ಐರೋಪ್ಯ ಒಕ್ಕೂಟದ ಮುಖಂಡರು ಸೇರಿ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಹೀಗಾಗಿ ಅಂತಿಮ ದರ್ಶನದಲ್ಲಿ ಭಾರಿ ಭದ್ರತೆ ಇರಲಿದೆ.

ಭಾರತದ ವಿದೇಶಾಂಗ ಸಚಿವ ಕಿರಣ್‌ ರಿಜಿಜು, ಸಚಿವ ಜಾರ್ಜ್‌ ಕುರಿಯನ್‌, ಗೋವಾ ವಿಧಾನಸಭೆಯ ಉಪಸಭಾಪತಿ ಜೋಶ್ವಾ ಡಿ ಸೋಜಾ, ಕರ್ನಾಟಕದ ಸಚಿವ ಕೆ.ಜೆ ಜಾರ್ಜ್‌ ಮತ್ತು ಐವಾನ್‌ ಡಿಸೋಜಾ ಪಾಲ್ಗೊಳ್ಳುತ್ತಿದ್ದಾರೆ. ಅಂತ್ಯಕ್ರಿಯೆಯು ಸರಳವಾಗಿ ಸಮಾಧಿಗೆ ಸಿದ್ಧತೆ ನಡೆದಿದೆ. ಸಮಾಧಿ ಮೇಲೆ ಫ್ರಾನ್ಸಿಸ್‌ ಎಂದಷ್ಟೇ ಇರಲಿದೆ.

ಆಂದೋಲನ ಡೆಸ್ಕ್

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

2 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

3 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

4 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

4 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

4 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

5 hours ago